ಕೋಲಾರ: ನಗರದ ಸರ್ಕಾರಿ ಮಹಿಳಾ ಕಾಲೇಜಿಗೆ ಐದು ಕೋಟಿ ಬಿಡುಗಡೆಯಾಗಿದೆ ಅದನ್ನು ಯೋಜನಾ ಬದ್ದವಾಗಿ ಬಳಸಿಕೊಂಡು ಕಟ್ಟಡಗಳನ್ನು ಕಟ್ಟದೇ ಬೇಕಾಬಿಟ್ಟಿ ಕಟ್ಟಲು ಹೋದರೆ ಮುಂದೆ ಜಾಗದ ಸಮಸ್ಯೆಯಾಗಲಿದ್ದು ಕೂಡಲೇ ಕಾಮಗಾರಿಯನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅಧಿಕಾರಿಗಳಿಗೆ ಆದೇಶ ನೀಡಿದರು.
ನಗರದಲ್ಲಿರುವ ಮಹಿಳಾ ಕಾಲೇಜಿಗೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಕಾಲೇಜಿನಲ್ಲಿ ಜಾಗ ಇದೆ ಅಂತ ಹೇಗೆ ಬೇಕಾದರೆ ಹಾಗೇ ಕಟ್ಟಿಕೊಂಡು ಹೋದರೆ ಮುಂದೆ ವಿಧ್ಯಾರ್ಥಿಗಳು ಒಡಾಡಕ್ಕೂ ಜಾಗ ಇರಲ್ಲ ಪ್ರಾಂಶುಪಾಲರು ಇದರ ಜವಾಬ್ದಾರಿ ವಹಿಸಿಕೊಂಡು ಮುಂದಾಲೋಚನೆ ವಹಿಸಬೇಕು ಚಿಕ್ಕ ಚಿಕ್ಕ ಕಬ್ಬಿಣ ಹಾಕಿ ಐದು ಅಂತಸ್ತು ಕಟ್ಟತ್ತೀವಿ ಅಂದರೆ ಅದು ಹೇಗೆ ಸಾಧ್ಯ ಮುಂದೆ ಒಂದು ಪ್ಲಾನ್ ಕೊಡತ್ತೇವೆ ಅಲ್ಲಿ ತನಕ ಕೆಲಸ ನಿಲ್ಲಿಸಿ ಎಂದರು.
ಇದೇ ಸಂದರ್ಭದಲ್ಲಿ ಶಾಸಕರ ಮುಂದೆ ಪ್ರಾಂಶುಪಾಲರು ಮತ್ತು ಪ್ರಾಧ್ಯಾಪಕರು ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದಾಗ ಯಾಕೆ ನಾನು ಇಲ್ಲೇ ಇದ್ದಾಗ ಯಾಕೆ ಗಮನಕ್ಕೆ ತರಲಿಲ್ಲ ನಾನೇ ಸ್ವಂತ ಹಣದಲ್ಲಿ ಬೋರ್ ವೆಲ್ ಹಾಕಿಸಿ ನೀರು ವ್ಯವಸ್ಥೆ ಮಾಡಿದ್ದೇನೆ ಸರಿಯಾಗಿ ಬಳಸಿಕೊಂಡಿಲ್ಲ ಎಂದು ಪ್ರಾಂಶುಪಾಲರನ್ನು ತರಾಟೆಗೆ ತೆಗೆದುಕೊಂಡರು
ಈ ಸಂದರ್ಭದಲ್ಲಿ ಪ್ರಾಂಶುಪಾಲ ಗಂಗಾಧರ್ ರಾವ್ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಉರಟ ಅಗ್ರಹಾರ ಚೌಡರೆಡ್ಡಿ, ಮಲೇಷಿಯಾ ರಾಜಕುಮಾರ್ ಮುಂತಾದವರ ಇದ್ದರು.
ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…
ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…