ಮಹಿಳಾ ಕುಸ್ತಿಪಟುಗಳ ಪ್ರತಿಭಟನೆಯ ಪ್ರಜಾಸತ್ತಾತ್ಮಕ ಹಕ್ಕನ್ನು ಪೊಲೀಸರ ಮೂಲಕ ಹತ್ತಿಕ್ಕಲು ಹೊರಟಿರುವುದು ಆತ್ಮವಂಚನಾ ನಡವಳಿಕೆಯ ಪ್ರತೀಕ- ಮೋದಿ ಸರ್ಕಾರ ವಿರುದ್ಧ ಸಿಎಂ ಸಿದ್ದರಾಮಯ್ಯ‌‌ ಕಿಡಿ

ಲೈಂಗಿಕ ದೌರ್ಜನ್ಯ ಎಸಗಿರುವ ಭಾರತ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೋರಾಡುತ್ತಿರುವ ಮಹಿಳಾ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿ ದೌರ್ಜನ್ಯ ಎಸಗಿರುವುದು ಖಂಡನೀಯ. ತಕ್ಷಣ ಬಂಧಿತ ಮಹಿಳಾ ಕುಸ್ತಿಪಟುಗಳನ್ನು ಬಿಡುಗಡೆಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸಿದ್ದಾರೆ.

ನೂತನ ಸಂಸತ್ ಭವನದ ಉದ್ಘಾಟನೆಯನ್ನು ಪ್ರಜಾಪ್ರಭುತ್ವದ ಹಬ್ಬ ಎಂಬಂತೆ ಸಂಭ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ, ಅಲ್ಲಿಂದ ಕೂಗಳತೆಯ ದೂರದಲ್ಲಿ ಧರಣಿ ನಡೆಸುತ್ತಿರುವ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆಯ ಪ್ರಜಾಸತ್ತಾತ್ಮಕ ಹಕ್ಕನ್ನು ಪೊಲೀಸರ ಮೂಲಕ ಹತ್ತಿಕ್ಕಲು ಹೊರಟಿರುವುದು ಆತ್ಮವಂಚನಾ ನಡವಳಿಕೆಯ ಪ್ರತೀಕ ಎಂದರು.

ಕೇಂದ್ರ ಸರ್ಕಾರ ತಕ್ಷಣ ಲೈಂಗಿಕ ದೌರ್ಜನ್ಯದ ಆರೋಪಕ್ಕೊಳಗಾಗಿರುವ ಭಾರತೀಯ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬೃಜಭೂಷಣ್ ಸಿಂಗ್ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಿ, ನೊಂದ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಬೇಕು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

15 hours ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

16 hours ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

16 hours ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

22 hours ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

1 day ago

ಪರೀಕ್ಷಾ ಅಕ್ರಮಗಳು……

ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…

1 day ago