ಮಹಿಳಾ ಕೇಂದ್ರಿತ ಗ್ಯಾರಂಟಿಗಳ ಅನುಷ್ಠಾನ ಲಿಂಗಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ ಸಾಮಾನ್ಯ ಸಭೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ

ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಕರ್ನಾಟಕ ಸಾಧಿಸಿರುವ ಲಿಂಗ ಸಮಾನತೆಯ ಉಪಕ್ರಮಗಳಿಗೆ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧ್ಯಕ್ಷ ಕ್ಯಾಮರೂನ್‌ನ ಫಿಲೆಮನ್ ಯಾಂಗ್ ಮೆಚ್ಚುಗೆ ಸೂಚಿಸಿದ್ದಾರೆ.

ಅವರು ಇಂದು ( ಫೆಬ್ರವರಿ 07, 2025) ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನಗರದ ಖಾಸಗಿ ಹೋಟೆಲ್ ತಾಜ್ ವೆಸ್ಟೆಂಡ್‌ನಲ್ಲಿ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸ್ವಸಹಾಯ ಗುಂಪಿನ ಮಹಿಳೆಯರು ರೇಷ್ಮೆ ಗೂಡುಗಳಿಂದ ತಯಾರಿಸಿದ ಪುಷ್ಪಗುಚ್ಛದೊಂದಿಗೆ ಸ್ವಾಗತಿಸಿದರು. ಒಂದು ಜಗತ್ತು ಹಲವು ಸಾಧ್ಯತೆಗಳನ್ನು ಬಿಂಬಿಸುವ ಕರ್ನಾಟಕ ಕುರಿತಾದ ಪುಸ್ತಕವನ್ನು ನೀಡಿದರು.

ಸುಸ್ಥಿರ ಅಭಿವೃದ್ಧಿ ಗುರಿಗಳ (SDG) ಸಾಧನೆಯಲ್ಲಿ ಕರ್ನಾಟಕವು ಉನ್ನತ ಸ್ಥಾನ ಪಡೆಯಲು ಸಾಧ್ಯವಾಗಿರುವ ಬಗ್ಗೆ ವಿಶ್ವಸಂಸ್ಥೆಯ ಅಧ್ಯಕ್ಷರು ಆಸಕ್ತಿಯಿಂದ ಹೆಚ್ಚು ಮಾಹಿತಿ ಹಾಗೂ ವಿವರಗಳನ್ನು ಬಯಸಿದರು.

ಗ್ಯಾರಂಟಿ ಯೋಜನೆಗಳಲ್ಲಿ ಮಹಿಳೆಯರ ಕೈಗೆ ನಗದು ಹಣ ನೀಡುವ ಗೃಹಲಕ್ಷ್ಮಿ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಅವಕಾಶ ನೀಡುವ ಶಕ್ತಿ, ಕಾರ್ಮಿಕ ಕ್ಷೇತ್ರದಲ್ಲಿ ಮಹಿಳೆಯರ ಭಾಗವಹಿಸುವಿಕೆಯ ದರವನ್ನು ಸುಧಾರಿಸಲು ಕೈಗೊಂಡಿರುವ ಕ್ರಮಗಳು , ಹಸಿವು ಮತ್ತು ಅಪೌಷ್ಟಿಕತೆಯನ್ನು ತಡೆಗಟ್ಟಲು ತಲಾವಾರು ಪೋಷಕಾಂಶ ನೀಡಿಕೆ , ಕೌಶಲ್ಯದ ಮೂಲಕ ಉದ್ಯೋಗ ಗಳಿಕೆ, ಅಡುಗೆ ಅನಿಲ ಪೂರೈಕೆ,ಉಚಿತ ವಿದ್ಯುತ್ ಪೂರೈಕೆ ಕುರಿತ ಕಾರ್ಯಕ್ರಮಗಳ ವಿವರಗಳನ್ನು ಮುಖ್ಯ ಕಾರ್ಯದರ್ಶಿಗಳು ನೀಡಿದರು.

ಮಹಿಳೆಯರು ಸ್ವಸಹಾಯ ಗುಂಪುಗಳನ್ನು (SHG) ಸಂಘಟಿಸಲು , ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ಮೌಲ್ಯವರ್ಧನೆಗೆ ಪ್ರೋತ್ಸಾಹ, ವಿಷಕಾರಿ ಮುಕ್ತ ವಾತಾವರಣಕ್ಕಾಗಿ ಸಮಗ್ರ ಮತ್ತು ಸಾವಯವ ಕೃಷಿಗೆ ಪ್ರೋತ್ಸಾಹ ಕ್ರಮಗಳು ಸಮಗ್ರ ಹವಾಮಾನ ಬದಲಾವಣೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲು ಸಹಾಯ ಮಾಡುತ್ತದೆ ಎಂದು ಸಂತಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಸಾಮಾಜಿಕ-ಆರ್ಥಿಕ ಮತ್ತು ರಾಜಕೀಯ ಸಮಾನತೆಯನ್ನು ಉತ್ತೇಜಿಸಲು ಮಹಿಳಾ ಪರ ಕಾರ್ಯಕ್ರಮಗಳನ್ನು ಮುನ್ನಡೆಸುತ್ತಿರುವ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಳಜಿಯನ್ನು ವಿಶ್ವಸಂಸ್ಥೆಯ ಅಧ್ಯಕ್ಷರು ಶ್ಲಾಘಿಸಿದರು.ಮುಂಬರುವ ವಿಶ್ವಸಂಸ್ಥೆಯ ಕಾರ್ಯಾಗಾರಗಳಲ್ಲಿ ಕರ್ನಾಟಕದ ಯಶೋಗಾಥೆಗಳನ್ನು ಹಂಚಿಕೊಳ್ಳಬೇಕೆಂದು ಅವರು ಸಲಹೆ ನೀಡಿದರು, ಇದರಿಂದ ಇತರ ದೇಶಗಳು ಸಹ ಈ ಅತ್ಯುತ್ತಮ ಅಭ್ಯಾಸಗಳನ್ನು ಅಳವಡಿಸಿಕೊಳ್ಳಬಹುದು ಎಂದು ಅಭಿಪ್ರಾಯ ಪಟ್ಟರು.

*ನವೀಕರಿಸಬಹುದಾದ ಇಂಧನ ಉತ್ಪಾದನೆ ರಾಜ್ಯಕ್ಕೆ ಅಗ್ರಸ್ಥಾನ*

ಒಟ್ಟು ಇಂಧನ ಉತ್ಪಾದನೆಯಲ್ಲಿ ಶೇ. 40 ರಷ್ಟು ಪಾಲು ನವೀಕರಿಸಬಹುದಾದ ಮೂಲಗಳಿಂದ ಬರುತ್ತಿರುವುದರಿಂದ ಕರ್ನಾಟಕವು ಶುದ್ಧ ಮತ್ತು ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ದೇಶದಲ್ಲಿಯೇ ಅಗ್ರಸ್ಥಾನ ಪಡೆದಿರುವುದಕ್ಕೆ ವಿಶ್ವಸಂಸ್ಥೆಯ ಅಧ್ಯಕ್ಷರು ಸಂತೋಷ ವ್ಯಕ್ತಪಡಿಸಿದರು.

ಮಾಹಿತಿ ತಂತ್ರಜ್ಞಾನ, ತಂತ್ರಾಂಶ ಅಭಿವೃದ್ಧಿ, ಕೃತಕ ಬುದ್ಧಿ ಮತ್ತೆ (AI), ಸಂಶೋಧನೆ ಮತ್ತು ನಾವೀನ್ಯತೆಗಾಗಿ ಜಾಗತಿಕ ಸಾಮರ್ಥ್ಯ ಕೇಂದ್ರಗಳ ಸ್ಥಾಪನೆಯಲ್ಲಿ ಕರ್ನಾಟಕವು ಸಾಧಿಸಿರುವ ಪ್ರಗತಿಯನ್ನು ವಿಶ್ವಸಂಸ್ಥೆಯ ಮೆಚ್ಚಿದರು. ಇತರ ದೇಶಗಳಿಗೆ ಡಿಜಿಟಲ್ ರೂಪಾಂತರವನ್ನು ಉತ್ತೇಜಿಸುವ ಸಲುವಾಗಿ ಸಹಾಯದ ಅಗತ್ಯವಿದ್ದು, ರಾಜ್ಯದ ಬೆಂಬಲವನ್ನು ಕೋರಿದರು. ರಾಜ್ಯ, ಜಿಲ್ಲೆ ಮತ್ತು ಗ್ರಾಮ ಪಂಚಾಯತ್ ಮಟ್ಟದಲ್ಲಿ ಸುಸ್ಥಿರ ಅಭಿವೃದ್ಧಿ ಸೂಚಕಗಳ ಪ್ರಗತಿಯನ್ನು ಮೇಲ್ವಿಚಾರಣೆ ಮಾಡಲು ಕರ್ನಾಟಕ ರಚಿಸಿದ ಸುಸ್ಥಿರ ಅಭಿವೃದ್ದಿ ಗುರಿಗಳ (SDG) ಡ್ಯಾಶ್‌ಬೋರ್ಡ್ ವೀಕ್ಷಿಸಿ ಶ್ಲಾಘಿಸಿದರು.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿ ಜಿ.ಸತ್ಯವತಿ ಮತ್ತಿತರರು ಇದ್ದರು.

Ramesh Babu

Journalist

Recent Posts

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

10 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

15 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

2 days ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

2 days ago