ಚಿತ್ರ ನಿರ್ಮಾಪಕ ಸಾರಥಿ ಸತ್ಯಪ್ರಕಾಶ್ ಅವರಿಂದ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಫಲಾನುಭವಿಗಳಿಗೆ ಉಚಿತ ಕನ್ನಡಕ, ಶ್ರವಣ ದೋಷ ನಿವಾರಣೆ ಯಂತ್ರ ವಿತರಣೆ ಕಾರ್ಯಕ್ರಮವನ್ನು ನಗರದ ಒಕ್ಕಲಿಗ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮಹಿಳಾ ದಿನಾಚರಣೆ ಅಂಗವಾಗಿ ದೃಷ್ಟಿ ದೋಷ ಹಾಗೂ ಶ್ರವಣ ದೋಷ ಚಿಕಿತ್ಸೆಯಲ್ಲಿ ಪಾಲ್ಗೊಂಡು ಆಯ್ಕೆಯಾದ ಫಲಾನುಭವಿಗಳಿಗೆ ಉಚಿತವಾಗಿ ವಿತರಣೆ ಮಾಡಲಾಗುತ್ತಿದೆ ಎಂದು ಕಾರ್ಯಕ್ರಮದ ಆಯೋಜಕರಾದ ಕೆ.ಸಾರಥಿ ಸತ್ಯಪ್ರಕಾಶ್ ಅವರು ತಿಳಿಸಿದರು.
ಕನ್ನಡ ಚಿತ್ರರಂಗದಲ್ಲಿ ನನಗೆ ಹೆಸರು ಮಾಡಿಕೊಟ್ಟಿದ್ದು ಸಾರಥಿ ಸಿನಿಮಾ, ಈ ಸಿನಿಮಾ ಬಳಿಕ ನನ್ನ ಕೈಲಿ ಸಾಕಷ್ಟು ಚಿತ್ರಗಳು ನಿರ್ಮಾಣ ಮಾಡುವ ಅವಕಾಶಗಳಿದ್ದವು ಆದರೇ ನಾನು ನನ್ನ ತಾಲ್ಲೂಕಿನಲ್ಲಿ ಸಮಾಜ ಸೇವೆ ಮಾಡುವುದು ಬಹುದಿನಗಳ ಕನಸಾಗಿತ್ತು ಆದ್ದರಿಂದ, ಕಳೆದ ಫೆಬ್ರವರಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡಿ ಶಿಬಿರದಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಇಂದು ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಉಚಿತವಾಗಿ ಶ್ರವಣದೋಷ ನಿವಾರಕ ಯಂತ್ರ ಮತ್ತು ಕನ್ನಡಕ ವಿತರಣೆ ಮಾಡಲಾಗುತ್ತಿದೆ ಎಂದರು.
ತಾಲ್ಲೂಕಿನ ಜನತೆ ಆಶೀರ್ವಾದ ನೀಡಿದರೆ ಮತ್ತಷ್ಟು ಸಮಾಜ ಮುಖಿ ಕಾರ್ಯಕ್ರಮಗಳ ಮೂಲಕ ಸಮಾಜಸೇವೆ ಮಾಡುತ್ತೇನೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು ಮಾಜಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಾದ ಟಿ.ವಿ ಲಕ್ಷ್ಮಿ ನಾರಾಯಣ, ಮಾಜಿ ತಾಲ್ಲೂಕು ಪಂಚಾಯತಿ ಅಧ್ಯಕ್ಷ ಅಶ್ವತ್ಥನಾರಾಯಣ ನಗರಸಭಾ ಸದಸ್ಯರಾದ ಶಿವಶಂಕರ್, ಶಿವಣ್ಣ, ಹಂಸವೇಣಿ, ನಿಕಟ ಪೂರ್ವ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ, ಪ್ರಮಿಳಾ ಮಹದೇವ್, , ಜನಪರ ಮಂಜುನಾಥ್, ಚೌಡರಾಜ್, ಪ್ರದೀಪ್ ಮತ್ತು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…