ಮಹಿಳಾ ದಿನಾಚರಣೆ ಅಂಗವಾಗಿ ಫಲಾನುಭವಿಗಳಿಗೆ ಉಚಿತ ಕನ್ನಡಕ, ಶ್ರವಣ ದೋಷ ನಿವಾರಣೆ ಯಂತ್ರ ವಿತರಣೆ

ಚಿತ್ರ ನಿರ್ಮಾಪಕ ಸಾರಥಿ ಸತ್ಯಪ್ರಕಾಶ್ ಅವರಿಂದ ವಿಶ್ವ ಮಹಿಳಾ‌ ದಿನಾಚರಣೆ ಅಂಗವಾಗಿ ಫಲಾನುಭವಿಗಳಿಗೆ ಉಚಿತ ಕನ್ನಡಕ, ಶ್ರವಣ ದೋಷ ನಿವಾರಣೆ ಯಂತ್ರ ವಿತರಣೆ ಕಾರ್ಯಕ್ರಮವನ್ನು ನಗರದ ಒಕ್ಕಲಿಗ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಮಹಿಳಾ ದಿನಾಚರಣೆ ಅಂಗವಾಗಿ ದೃಷ್ಟಿ ದೋಷ ಹಾಗೂ ಶ್ರವಣ ದೋಷ ಚಿಕಿತ್ಸೆಯಲ್ಲಿ ಪಾಲ್ಗೊಂಡು ಆಯ್ಕೆಯಾದ ಫಲಾನುಭವಿಗಳಿಗೆ ಉಚಿತವಾಗಿ ವಿತರಣೆ ಮಾಡಲಾಗುತ್ತಿದೆ ಎಂದು ಕಾರ್ಯಕ್ರಮದ ಆಯೋಜಕರಾದ ಕೆ.ಸಾರಥಿ ಸತ್ಯಪ್ರಕಾಶ್ ಅವರು ತಿಳಿಸಿದರು.

ಕನ್ನಡ ಚಿತ್ರರಂಗದಲ್ಲಿ ನನಗೆ ಹೆಸರು ಮಾಡಿಕೊಟ್ಟಿದ್ದು ಸಾರಥಿ ಸಿನಿಮಾ, ಈ ಸಿನಿಮಾ ಬಳಿಕ ನನ್ನ ಕೈಲಿ ಸಾಕಷ್ಟು ಚಿತ್ರಗಳು ನಿರ್ಮಾಣ ಮಾಡುವ ಅವಕಾಶಗಳಿದ್ದವು ಆದರೇ ನಾನು ನನ್ನ ತಾಲ್ಲೂಕಿನಲ್ಲಿ ಸಮಾಜ ಸೇವೆ ಮಾಡುವುದು ಬಹುದಿನಗಳ ಕನಸಾಗಿತ್ತು ಆದ್ದರಿಂದ, ಕಳೆದ ಫೆಬ್ರವರಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡಿ ಶಿಬಿರದಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಇಂದು ವಿಶ್ವ ಮಹಿಳಾ‌ ದಿನಾಚರಣೆ ಅಂಗವಾಗಿ ಉಚಿತವಾಗಿ ಶ್ರವಣದೋಷ ನಿವಾರಕ ಯಂತ್ರ ಮತ್ತು ಕನ್ನಡಕ ವಿತರಣೆ ಮಾಡಲಾಗುತ್ತಿದೆ ಎಂದರು.

ತಾಲ್ಲೂಕಿನ ಜನತೆ ಆಶೀರ್ವಾದ ನೀಡಿದರೆ ಮತ್ತಷ್ಟು ಸಮಾಜ ಮುಖಿ ಕಾರ್ಯಕ್ರಮಗಳ ಮೂಲಕ ಸಮಾಜಸೇವೆ ಮಾಡುತ್ತೇನೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಸಾಂಕೇತಿಕವಾಗಿ 390 ಮಂದಿ ದೃಷ್ಟಿದೋಷದಿಂದ ಬಳಲುತ್ತಿರುವವರಿಗೆ ಉತ್ತಮ ಗುಣಮಟ್ಟದ ಉಚಿತ ಕನ್ನಡಕ ಹಾಗೂ 170 ಶ್ರವಣ ದೋಷ ನಿವಾರಣ ಯಂತ್ರಗಳನ್ನು ವಿತರಣೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ತಾಲ್ಲೂಕಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು ಮಾಜಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಾದ ಟಿ.ವಿ ಲಕ್ಷ್ಮಿ ನಾರಾಯಣ, ಮಾಜಿ ತಾಲ್ಲೂಕು ಪಂಚಾಯತಿ ಅಧ್ಯಕ್ಷ ಅಶ್ವತ್ಥನಾರಾಯಣ ನಗರಸಭಾ ಸದಸ್ಯರಾದ ಶಿವಶಂಕರ್, ಶಿವಣ್ಣ, ಹಂಸವೇಣಿ, ನಿಕಟ ಪೂರ್ವ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ, ಪ್ರಮಿಳಾ ಮಹದೇವ್, , ಜನಪರ ಮಂಜುನಾಥ್, ಚೌಡರಾಜ್, ಪ್ರದೀಪ್ ಮತ್ತು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

20 minutes ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

14 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

17 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago