ಚಿತ್ರ ನಿರ್ಮಾಪಕ ಸಾರಥಿ ಸತ್ಯಪ್ರಕಾಶ್ ಅವರಿಂದ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಫಲಾನುಭವಿಗಳಿಗೆ ಉಚಿತ ಕನ್ನಡಕ, ಶ್ರವಣ ದೋಷ ನಿವಾರಣೆ ಯಂತ್ರ ವಿತರಣೆ ಕಾರ್ಯಕ್ರಮವನ್ನು ನಗರದ ಒಕ್ಕಲಿಗ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮಹಿಳಾ ದಿನಾಚರಣೆ ಅಂಗವಾಗಿ ದೃಷ್ಟಿ ದೋಷ ಹಾಗೂ ಶ್ರವಣ ದೋಷ ಚಿಕಿತ್ಸೆಯಲ್ಲಿ ಪಾಲ್ಗೊಂಡು ಆಯ್ಕೆಯಾದ ಫಲಾನುಭವಿಗಳಿಗೆ ಉಚಿತವಾಗಿ ವಿತರಣೆ ಮಾಡಲಾಗುತ್ತಿದೆ ಎಂದು ಕಾರ್ಯಕ್ರಮದ ಆಯೋಜಕರಾದ ಕೆ.ಸಾರಥಿ ಸತ್ಯಪ್ರಕಾಶ್ ಅವರು ತಿಳಿಸಿದರು.
ಕನ್ನಡ ಚಿತ್ರರಂಗದಲ್ಲಿ ನನಗೆ ಹೆಸರು ಮಾಡಿಕೊಟ್ಟಿದ್ದು ಸಾರಥಿ ಸಿನಿಮಾ, ಈ ಸಿನಿಮಾ ಬಳಿಕ ನನ್ನ ಕೈಲಿ ಸಾಕಷ್ಟು ಚಿತ್ರಗಳು ನಿರ್ಮಾಣ ಮಾಡುವ ಅವಕಾಶಗಳಿದ್ದವು ಆದರೇ ನಾನು ನನ್ನ ತಾಲ್ಲೂಕಿನಲ್ಲಿ ಸಮಾಜ ಸೇವೆ ಮಾಡುವುದು ಬಹುದಿನಗಳ ಕನಸಾಗಿತ್ತು ಆದ್ದರಿಂದ, ಕಳೆದ ಫೆಬ್ರವರಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡಿ ಶಿಬಿರದಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಇಂದು ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಉಚಿತವಾಗಿ ಶ್ರವಣದೋಷ ನಿವಾರಕ ಯಂತ್ರ ಮತ್ತು ಕನ್ನಡಕ ವಿತರಣೆ ಮಾಡಲಾಗುತ್ತಿದೆ ಎಂದರು.
ತಾಲ್ಲೂಕಿನ ಜನತೆ ಆಶೀರ್ವಾದ ನೀಡಿದರೆ ಮತ್ತಷ್ಟು ಸಮಾಜ ಮುಖಿ ಕಾರ್ಯಕ್ರಮಗಳ ಮೂಲಕ ಸಮಾಜಸೇವೆ ಮಾಡುತ್ತೇನೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು ಮಾಜಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಾದ ಟಿ.ವಿ ಲಕ್ಷ್ಮಿ ನಾರಾಯಣ, ಮಾಜಿ ತಾಲ್ಲೂಕು ಪಂಚಾಯತಿ ಅಧ್ಯಕ್ಷ ಅಶ್ವತ್ಥನಾರಾಯಣ ನಗರಸಭಾ ಸದಸ್ಯರಾದ ಶಿವಶಂಕರ್, ಶಿವಣ್ಣ, ಹಂಸವೇಣಿ, ನಿಕಟ ಪೂರ್ವ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ, ಪ್ರಮಿಳಾ ಮಹದೇವ್, , ಜನಪರ ಮಂಜುನಾಥ್, ಚೌಡರಾಜ್, ಪ್ರದೀಪ್ ಮತ್ತು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…