ಚಿತ್ರ ನಿರ್ಮಾಪಕ ಸಾರಥಿ ಸತ್ಯಪ್ರಕಾಶ್ ಅವರಿಂದ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಫಲಾನುಭವಿಗಳಿಗೆ ಉಚಿತ ಕನ್ನಡಕ, ಶ್ರವಣ ದೋಷ ನಿವಾರಣೆ ಯಂತ್ರ ವಿತರಣೆ ಕಾರ್ಯಕ್ರಮವನ್ನು ನಗರದ ಒಕ್ಕಲಿಗ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮಹಿಳಾ ದಿನಾಚರಣೆ ಅಂಗವಾಗಿ ದೃಷ್ಟಿ ದೋಷ ಹಾಗೂ ಶ್ರವಣ ದೋಷ ಚಿಕಿತ್ಸೆಯಲ್ಲಿ ಪಾಲ್ಗೊಂಡು ಆಯ್ಕೆಯಾದ ಫಲಾನುಭವಿಗಳಿಗೆ ಉಚಿತವಾಗಿ ವಿತರಣೆ ಮಾಡಲಾಗುತ್ತಿದೆ ಎಂದು ಕಾರ್ಯಕ್ರಮದ ಆಯೋಜಕರಾದ ಕೆ.ಸಾರಥಿ ಸತ್ಯಪ್ರಕಾಶ್ ಅವರು ತಿಳಿಸಿದರು.
ಕನ್ನಡ ಚಿತ್ರರಂಗದಲ್ಲಿ ನನಗೆ ಹೆಸರು ಮಾಡಿಕೊಟ್ಟಿದ್ದು ಸಾರಥಿ ಸಿನಿಮಾ, ಈ ಸಿನಿಮಾ ಬಳಿಕ ನನ್ನ ಕೈಲಿ ಸಾಕಷ್ಟು ಚಿತ್ರಗಳು ನಿರ್ಮಾಣ ಮಾಡುವ ಅವಕಾಶಗಳಿದ್ದವು ಆದರೇ ನಾನು ನನ್ನ ತಾಲ್ಲೂಕಿನಲ್ಲಿ ಸಮಾಜ ಸೇವೆ ಮಾಡುವುದು ಬಹುದಿನಗಳ ಕನಸಾಗಿತ್ತು ಆದ್ದರಿಂದ, ಕಳೆದ ಫೆಬ್ರವರಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡಿ ಶಿಬಿರದಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಇಂದು ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಉಚಿತವಾಗಿ ಶ್ರವಣದೋಷ ನಿವಾರಕ ಯಂತ್ರ ಮತ್ತು ಕನ್ನಡಕ ವಿತರಣೆ ಮಾಡಲಾಗುತ್ತಿದೆ ಎಂದರು.
ತಾಲ್ಲೂಕಿನ ಜನತೆ ಆಶೀರ್ವಾದ ನೀಡಿದರೆ ಮತ್ತಷ್ಟು ಸಮಾಜ ಮುಖಿ ಕಾರ್ಯಕ್ರಮಗಳ ಮೂಲಕ ಸಮಾಜಸೇವೆ ಮಾಡುತ್ತೇನೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು ಮಾಜಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಾದ ಟಿ.ವಿ ಲಕ್ಷ್ಮಿ ನಾರಾಯಣ, ಮಾಜಿ ತಾಲ್ಲೂಕು ಪಂಚಾಯತಿ ಅಧ್ಯಕ್ಷ ಅಶ್ವತ್ಥನಾರಾಯಣ ನಗರಸಭಾ ಸದಸ್ಯರಾದ ಶಿವಶಂಕರ್, ಶಿವಣ್ಣ, ಹಂಸವೇಣಿ, ನಿಕಟ ಪೂರ್ವ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ, ಪ್ರಮಿಳಾ ಮಹದೇವ್, , ಜನಪರ ಮಂಜುನಾಥ್, ಚೌಡರಾಜ್, ಪ್ರದೀಪ್ ಮತ್ತು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…