ಬೆಂಗಳೂರು: ಮಹಿಳೆಯರು ತಮ್ಮ ಆರೋಗ್ಯ ಬಗ್ಗೆ ಕಾಳಜಿ ವಹಿಸುವ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆಲ್ಟಿಯಸ್ ಆಸ್ಪತ್ರೆಯ ನೇತೃತ್ವದಲ್ಲಿ “ಮಹಿಳಾ ದಿನಾಚರಣೆ” ಪ್ರಯುಕ್ತವಾಗಿ 3ನೇ ಆವೃತ್ತಿಯ “ಮಹಿಳಾ ವಾಕಥಾನ್”ನನ್ನು ಆಯೋಜಿಸಲಾಗಿತ್ತು.
ಬೆಂಗಳೂರಿನ ಕಲ್ಯಾಣ ನಗರದ ಕೆಬಿಸಿ ಬ್ಯಾಸ್ಕೆಟ್ ಬಾಲ್ ಕೋರ್ಟ್ನಿಂದ ಬೆಳಗ್ಗೆ 6 ಗಂಟೆಗೆ ಪ್ರಾರಂಭಗೊಂಡ ವಾಕಥಾನ್ನನ್ನು ಆಲ್ಟಿಯಸ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಪ್ರಿಯಾ ಎಸ್. ಪಿ. ಪಾಟೀಲ್ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಕುಟುಂಬ ನಿರ್ವಹಣೆಯ ಜವಾಬ್ದಾರಿ ನಿಭಾಯಿಸುವ ಭರದಲ್ಲಿ ತಮ್ಮ ಆರೋಗ್ಯದ ಬಗ್ಗೆಯೇ ಮಹಿಳೆಯರು ನಿರ್ಲಕ್ಷಿಸುತ್ತಿದ್ದಾರೆ. ಶೇ.70 ರಷ್ಟು ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಅನೇಕ ಅಧ್ಯಯನಗಳು ತಿಳಿಸಿವೆ. ಇದರಿಂದ ಮಹಿಳೆಯರು ಅನೇಕ ಆರೋಗ್ಯ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಮಹಿಳೆಯರೂ ಸಹ ಕುಟುಂಬ ನಿರ್ಹಣೆಯ ಜೊತೆ ಜೊತೆಗೆ ತಮ್ಮ ಆರೋಗ್ಯ ನಿಭಾಯಿಸಲು ಸಮಯ ಮೀಸಲಿಡಬೇಕು. ನಿತ್ಯ ದೈಹಿಕ ವ್ಯಾಯಾಮ ಮಾಡುವುದು, ಪೌಷ್ಠಿಕಾಂಶಯುಕ್ತ ಆಹಾರ ಸೇವಿಸುವುದರ ಬಗ್ಗೆ ಗಮನವಹಿಸಬೇಕು ಎಂದರು.
ತಮ್ಮ ಆರೋಗ್ಯ ನಿರ್ಲಕ್ಷಿಸುವ ಮಹಿಳೆಯರು ಎಂಡೋಮೆಟ್ರಿಯಾಸಿಸ್, ಸರ್ವೈಕಲ್ ಕ್ಯಾನ್ಸರ್ನಂತಹ ಮಾರಕ ಕಾಯಿಲೆಗೆ ಒಳಗಾಗುತ್ತಿದ್ದಾರೆ, ಈ ಅಪಾಯಕಾರ ಕ್ಯಾನ್ಸರ್ ಬಗ್ಗೆ ಮಹಿಳೆ ಜಾಗೃತಿ ಹೊಂದಬೇಕು. ಸರ್ವೈಕಲ್ ಕ್ಯಾನ್ಸರ್ ತಡೆಗಟ್ಟಲು ಇದೀಗ ಲಸಿಕೆ ಲಭ್ಯವಿದ್ದು, ಪ್ರತಿಯೊಬ್ಬರು ಇದರ ಪ್ರಯೋಜನ ಪಡೆದುಕೊಳ್ಳಲಿದೆ ಎಂದು ಹೇಳಿದರು.
ಡೆಂಟಲ್ ಡೆನ್ ನಿರ್ದೇಶಕಿ ಹಾಗೂ ವಾಕಥಾನ್ನ ರೂವಾರಿ ಡಾ. ಲಕ್ಷ್ಮಿ ರೂಪೇಶ್ ಮಾತನಾಡಿ, ಮಹಿಳೆಯರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಮಹಿಳಾ ದಿನಾಚರಣೆ ಪ್ರಯುಕ್ತ ಪ್ರತಿವರ್ಷ ವಾಕಥಾನ್ ಆಯೋಜಿಸುತ್ತಾ ಬರಲಾಗಿದೆ. ಈ 3ನೇ ಆವೃತ್ತಿಯ ವುಮೆನ್ ವಾಕಥಾನ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, 1500ಕ್ಕೂ ಹೆಚ್ಚು ಮಹಿಳೆಯರು ಪಾಲ್ಗೊಂಡಿದ್ದರು ಎಂದು ಹೇಳಿದರು.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…