ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು “ವುಮೆನ್‌ ವಾಕಥಾನ್‌” ಆಯೋಜನೆ

ಬೆಂಗಳೂರು: ಮಹಿಳೆಯರು ತಮ್ಮ ಆರೋಗ್ಯ ಬಗ್ಗೆ ಕಾಳಜಿ ವಹಿಸುವ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆಲ್ಟಿಯಸ್‌ ಆಸ್ಪತ್ರೆಯ ನೇತೃತ್ವದಲ್ಲಿ “ಮಹಿಳಾ ದಿನಾಚರಣೆ” ಪ್ರಯುಕ್ತವಾಗಿ 3ನೇ ಆವೃತ್ತಿಯ “ಮಹಿಳಾ ವಾಕಥಾನ್‌”ನನ್ನು ಆಯೋಜಿಸಲಾಗಿತ್ತು.

ಬೆಂಗಳೂರಿನ ಕಲ್ಯಾಣ ನಗರದ ಕೆಬಿಸಿ ಬ್ಯಾಸ್ಕೆಟ್‌ ಬಾಲ್‌ ಕೋರ್ಟ್‌ನಿಂದ ಬೆಳಗ್ಗೆ 6 ಗಂಟೆಗೆ ಪ್ರಾರಂಭಗೊಂಡ ವಾಕಥಾನ್‌ನನ್ನು ಆಲ್ಟಿಯಸ್‌ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಪ್ರಿಯಾ ಎಸ್‌. ಪಿ. ಪಾಟೀಲ್‌ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಕುಟುಂಬ ನಿರ್ವಹಣೆಯ ಜವಾಬ್ದಾರಿ ನಿಭಾಯಿಸುವ ಭರದಲ್ಲಿ ತಮ್ಮ ಆರೋಗ್ಯದ ಬಗ್ಗೆಯೇ ಮಹಿಳೆಯರು ನಿರ್ಲಕ್ಷಿಸುತ್ತಿದ್ದಾರೆ. ಶೇ.70 ರಷ್ಟು ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಅನೇಕ ಅಧ್ಯಯನಗಳು ತಿಳಿಸಿವೆ. ಇದರಿಂದ ಮಹಿಳೆಯರು ಅನೇಕ ಆರೋಗ್ಯ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಮಹಿಳೆಯರೂ ಸಹ ಕುಟುಂಬ ನಿರ್ಹಣೆಯ ಜೊತೆ ಜೊತೆಗೆ ತಮ್ಮ ಆರೋಗ್ಯ ನಿಭಾಯಿಸಲು ಸಮಯ ಮೀಸಲಿಡಬೇಕು. ನಿತ್ಯ ದೈಹಿಕ ವ್ಯಾಯಾಮ ಮಾಡುವುದು, ಪೌಷ್ಠಿಕಾಂಶಯುಕ್ತ ಆಹಾರ ಸೇವಿಸುವುದರ ಬಗ್ಗೆ ಗಮನವಹಿಸಬೇಕು ಎಂದರು.

ತಮ್ಮ ಆರೋಗ್ಯ ನಿರ್ಲಕ್ಷಿಸುವ ಮಹಿಳೆಯರು ಎಂಡೋಮೆಟ್ರಿಯಾಸಿಸ್‌, ಸರ್ವೈಕಲ್‌ ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಗೆ ಒಳಗಾಗುತ್ತಿದ್ದಾರೆ, ಈ ಅಪಾಯಕಾರ ಕ್ಯಾನ್ಸರ್‌ ಬಗ್ಗೆ ಮಹಿಳೆ ಜಾಗೃತಿ ಹೊಂದಬೇಕು. ಸರ್ವೈಕಲ್‌ ಕ್ಯಾನ್ಸರ್‌ ತಡೆಗಟ್ಟಲು ಇದೀಗ ಲಸಿಕೆ ಲಭ್ಯವಿದ್ದು, ಪ್ರತಿಯೊಬ್ಬರು ಇದರ ಪ್ರಯೋಜನ ಪಡೆದುಕೊಳ್ಳಲಿದೆ ಎಂದು ಹೇಳಿದರು.

ಡೆಂಟಲ್‌ ಡೆನ್‌ ನಿರ್ದೇಶಕಿ ಹಾಗೂ ವಾಕಥಾನ್‌ನ ರೂವಾರಿ ಡಾ. ಲಕ್ಷ್ಮಿ ರೂಪೇಶ್‌ ಮಾತನಾಡಿ, ಮಹಿಳೆಯರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಮಹಿಳಾ ದಿನಾಚರಣೆ ಪ್ರಯುಕ್ತ ಪ್ರತಿವರ್ಷ ವಾಕಥಾನ್‌ ಆಯೋಜಿಸುತ್ತಾ ಬರಲಾಗಿದೆ. ಈ 3ನೇ ಆವೃತ್ತಿಯ ವುಮೆನ್‌ ವಾಕಥಾನ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, 1500ಕ್ಕೂ ಹೆಚ್ಚು ಮಹಿಳೆಯರು ಪಾಲ್ಗೊಂಡಿದ್ದರು ಎಂದು ಹೇಳಿದರು.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

8 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

8 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

16 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago