ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು “ವುಮೆನ್‌ ವಾಕಥಾನ್‌” ಆಯೋಜನೆ

ಬೆಂಗಳೂರು: ಮಹಿಳೆಯರು ತಮ್ಮ ಆರೋಗ್ಯ ಬಗ್ಗೆ ಕಾಳಜಿ ವಹಿಸುವ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆಲ್ಟಿಯಸ್‌ ಆಸ್ಪತ್ರೆಯ ನೇತೃತ್ವದಲ್ಲಿ “ಮಹಿಳಾ ದಿನಾಚರಣೆ” ಪ್ರಯುಕ್ತವಾಗಿ 3ನೇ ಆವೃತ್ತಿಯ “ಮಹಿಳಾ ವಾಕಥಾನ್‌”ನನ್ನು ಆಯೋಜಿಸಲಾಗಿತ್ತು.

ಬೆಂಗಳೂರಿನ ಕಲ್ಯಾಣ ನಗರದ ಕೆಬಿಸಿ ಬ್ಯಾಸ್ಕೆಟ್‌ ಬಾಲ್‌ ಕೋರ್ಟ್‌ನಿಂದ ಬೆಳಗ್ಗೆ 6 ಗಂಟೆಗೆ ಪ್ರಾರಂಭಗೊಂಡ ವಾಕಥಾನ್‌ನನ್ನು ಆಲ್ಟಿಯಸ್‌ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಪ್ರಿಯಾ ಎಸ್‌. ಪಿ. ಪಾಟೀಲ್‌ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಕುಟುಂಬ ನಿರ್ವಹಣೆಯ ಜವಾಬ್ದಾರಿ ನಿಭಾಯಿಸುವ ಭರದಲ್ಲಿ ತಮ್ಮ ಆರೋಗ್ಯದ ಬಗ್ಗೆಯೇ ಮಹಿಳೆಯರು ನಿರ್ಲಕ್ಷಿಸುತ್ತಿದ್ದಾರೆ. ಶೇ.70 ರಷ್ಟು ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಅನೇಕ ಅಧ್ಯಯನಗಳು ತಿಳಿಸಿವೆ. ಇದರಿಂದ ಮಹಿಳೆಯರು ಅನೇಕ ಆರೋಗ್ಯ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಮಹಿಳೆಯರೂ ಸಹ ಕುಟುಂಬ ನಿರ್ಹಣೆಯ ಜೊತೆ ಜೊತೆಗೆ ತಮ್ಮ ಆರೋಗ್ಯ ನಿಭಾಯಿಸಲು ಸಮಯ ಮೀಸಲಿಡಬೇಕು. ನಿತ್ಯ ದೈಹಿಕ ವ್ಯಾಯಾಮ ಮಾಡುವುದು, ಪೌಷ್ಠಿಕಾಂಶಯುಕ್ತ ಆಹಾರ ಸೇವಿಸುವುದರ ಬಗ್ಗೆ ಗಮನವಹಿಸಬೇಕು ಎಂದರು.

ತಮ್ಮ ಆರೋಗ್ಯ ನಿರ್ಲಕ್ಷಿಸುವ ಮಹಿಳೆಯರು ಎಂಡೋಮೆಟ್ರಿಯಾಸಿಸ್‌, ಸರ್ವೈಕಲ್‌ ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಗೆ ಒಳಗಾಗುತ್ತಿದ್ದಾರೆ, ಈ ಅಪಾಯಕಾರ ಕ್ಯಾನ್ಸರ್‌ ಬಗ್ಗೆ ಮಹಿಳೆ ಜಾಗೃತಿ ಹೊಂದಬೇಕು. ಸರ್ವೈಕಲ್‌ ಕ್ಯಾನ್ಸರ್‌ ತಡೆಗಟ್ಟಲು ಇದೀಗ ಲಸಿಕೆ ಲಭ್ಯವಿದ್ದು, ಪ್ರತಿಯೊಬ್ಬರು ಇದರ ಪ್ರಯೋಜನ ಪಡೆದುಕೊಳ್ಳಲಿದೆ ಎಂದು ಹೇಳಿದರು.

ಡೆಂಟಲ್‌ ಡೆನ್‌ ನಿರ್ದೇಶಕಿ ಹಾಗೂ ವಾಕಥಾನ್‌ನ ರೂವಾರಿ ಡಾ. ಲಕ್ಷ್ಮಿ ರೂಪೇಶ್‌ ಮಾತನಾಡಿ, ಮಹಿಳೆಯರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಮಹಿಳಾ ದಿನಾಚರಣೆ ಪ್ರಯುಕ್ತ ಪ್ರತಿವರ್ಷ ವಾಕಥಾನ್‌ ಆಯೋಜಿಸುತ್ತಾ ಬರಲಾಗಿದೆ. ಈ 3ನೇ ಆವೃತ್ತಿಯ ವುಮೆನ್‌ ವಾಕಥಾನ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, 1500ಕ್ಕೂ ಹೆಚ್ಚು ಮಹಿಳೆಯರು ಪಾಲ್ಗೊಂಡಿದ್ದರು ಎಂದು ಹೇಳಿದರು.

Ramesh Babu

Journalist

Recent Posts

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

3 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

1 day ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

1 day ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

1 day ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

1 day ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

2 days ago