ಬೆಂಗಳೂರು: ಮಹಿಳೆಯರು ತಮ್ಮ ಆರೋಗ್ಯ ಬಗ್ಗೆ ಕಾಳಜಿ ವಹಿಸುವ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆಲ್ಟಿಯಸ್ ಆಸ್ಪತ್ರೆಯ ನೇತೃತ್ವದಲ್ಲಿ “ಮಹಿಳಾ ದಿನಾಚರಣೆ” ಪ್ರಯುಕ್ತವಾಗಿ 3ನೇ ಆವೃತ್ತಿಯ “ಮಹಿಳಾ ವಾಕಥಾನ್”ನನ್ನು ಆಯೋಜಿಸಲಾಗಿತ್ತು.
ಬೆಂಗಳೂರಿನ ಕಲ್ಯಾಣ ನಗರದ ಕೆಬಿಸಿ ಬ್ಯಾಸ್ಕೆಟ್ ಬಾಲ್ ಕೋರ್ಟ್ನಿಂದ ಬೆಳಗ್ಗೆ 6 ಗಂಟೆಗೆ ಪ್ರಾರಂಭಗೊಂಡ ವಾಕಥಾನ್ನನ್ನು ಆಲ್ಟಿಯಸ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಪ್ರಿಯಾ ಎಸ್. ಪಿ. ಪಾಟೀಲ್ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಕುಟುಂಬ ನಿರ್ವಹಣೆಯ ಜವಾಬ್ದಾರಿ ನಿಭಾಯಿಸುವ ಭರದಲ್ಲಿ ತಮ್ಮ ಆರೋಗ್ಯದ ಬಗ್ಗೆಯೇ ಮಹಿಳೆಯರು ನಿರ್ಲಕ್ಷಿಸುತ್ತಿದ್ದಾರೆ. ಶೇ.70 ರಷ್ಟು ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಅನೇಕ ಅಧ್ಯಯನಗಳು ತಿಳಿಸಿವೆ. ಇದರಿಂದ ಮಹಿಳೆಯರು ಅನೇಕ ಆರೋಗ್ಯ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಮಹಿಳೆಯರೂ ಸಹ ಕುಟುಂಬ ನಿರ್ಹಣೆಯ ಜೊತೆ ಜೊತೆಗೆ ತಮ್ಮ ಆರೋಗ್ಯ ನಿಭಾಯಿಸಲು ಸಮಯ ಮೀಸಲಿಡಬೇಕು. ನಿತ್ಯ ದೈಹಿಕ ವ್ಯಾಯಾಮ ಮಾಡುವುದು, ಪೌಷ್ಠಿಕಾಂಶಯುಕ್ತ ಆಹಾರ ಸೇವಿಸುವುದರ ಬಗ್ಗೆ ಗಮನವಹಿಸಬೇಕು ಎಂದರು.
ತಮ್ಮ ಆರೋಗ್ಯ ನಿರ್ಲಕ್ಷಿಸುವ ಮಹಿಳೆಯರು ಎಂಡೋಮೆಟ್ರಿಯಾಸಿಸ್, ಸರ್ವೈಕಲ್ ಕ್ಯಾನ್ಸರ್ನಂತಹ ಮಾರಕ ಕಾಯಿಲೆಗೆ ಒಳಗಾಗುತ್ತಿದ್ದಾರೆ, ಈ ಅಪಾಯಕಾರ ಕ್ಯಾನ್ಸರ್ ಬಗ್ಗೆ ಮಹಿಳೆ ಜಾಗೃತಿ ಹೊಂದಬೇಕು. ಸರ್ವೈಕಲ್ ಕ್ಯಾನ್ಸರ್ ತಡೆಗಟ್ಟಲು ಇದೀಗ ಲಸಿಕೆ ಲಭ್ಯವಿದ್ದು, ಪ್ರತಿಯೊಬ್ಬರು ಇದರ ಪ್ರಯೋಜನ ಪಡೆದುಕೊಳ್ಳಲಿದೆ ಎಂದು ಹೇಳಿದರು.
ಡೆಂಟಲ್ ಡೆನ್ ನಿರ್ದೇಶಕಿ ಹಾಗೂ ವಾಕಥಾನ್ನ ರೂವಾರಿ ಡಾ. ಲಕ್ಷ್ಮಿ ರೂಪೇಶ್ ಮಾತನಾಡಿ, ಮಹಿಳೆಯರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಮಹಿಳಾ ದಿನಾಚರಣೆ ಪ್ರಯುಕ್ತ ಪ್ರತಿವರ್ಷ ವಾಕಥಾನ್ ಆಯೋಜಿಸುತ್ತಾ ಬರಲಾಗಿದೆ. ಈ 3ನೇ ಆವೃತ್ತಿಯ ವುಮೆನ್ ವಾಕಥಾನ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, 1500ಕ್ಕೂ ಹೆಚ್ಚು ಮಹಿಳೆಯರು ಪಾಲ್ಗೊಂಡಿದ್ದರು ಎಂದು ಹೇಳಿದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…