ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು “ವುಮೆನ್‌ ವಾಕಥಾನ್‌” ಆಯೋಜನೆ

ಬೆಂಗಳೂರು: ಮಹಿಳೆಯರು ತಮ್ಮ ಆರೋಗ್ಯ ಬಗ್ಗೆ ಕಾಳಜಿ ವಹಿಸುವ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆಲ್ಟಿಯಸ್‌ ಆಸ್ಪತ್ರೆಯ ನೇತೃತ್ವದಲ್ಲಿ “ಮಹಿಳಾ ದಿನಾಚರಣೆ” ಪ್ರಯುಕ್ತವಾಗಿ 3ನೇ ಆವೃತ್ತಿಯ “ಮಹಿಳಾ ವಾಕಥಾನ್‌”ನನ್ನು ಆಯೋಜಿಸಲಾಗಿತ್ತು.

ಬೆಂಗಳೂರಿನ ಕಲ್ಯಾಣ ನಗರದ ಕೆಬಿಸಿ ಬ್ಯಾಸ್ಕೆಟ್‌ ಬಾಲ್‌ ಕೋರ್ಟ್‌ನಿಂದ ಬೆಳಗ್ಗೆ 6 ಗಂಟೆಗೆ ಪ್ರಾರಂಭಗೊಂಡ ವಾಕಥಾನ್‌ನನ್ನು ಆಲ್ಟಿಯಸ್‌ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಪ್ರಿಯಾ ಎಸ್‌. ಪಿ. ಪಾಟೀಲ್‌ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಕುಟುಂಬ ನಿರ್ವಹಣೆಯ ಜವಾಬ್ದಾರಿ ನಿಭಾಯಿಸುವ ಭರದಲ್ಲಿ ತಮ್ಮ ಆರೋಗ್ಯದ ಬಗ್ಗೆಯೇ ಮಹಿಳೆಯರು ನಿರ್ಲಕ್ಷಿಸುತ್ತಿದ್ದಾರೆ. ಶೇ.70 ರಷ್ಟು ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಅನೇಕ ಅಧ್ಯಯನಗಳು ತಿಳಿಸಿವೆ. ಇದರಿಂದ ಮಹಿಳೆಯರು ಅನೇಕ ಆರೋಗ್ಯ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಮಹಿಳೆಯರೂ ಸಹ ಕುಟುಂಬ ನಿರ್ಹಣೆಯ ಜೊತೆ ಜೊತೆಗೆ ತಮ್ಮ ಆರೋಗ್ಯ ನಿಭಾಯಿಸಲು ಸಮಯ ಮೀಸಲಿಡಬೇಕು. ನಿತ್ಯ ದೈಹಿಕ ವ್ಯಾಯಾಮ ಮಾಡುವುದು, ಪೌಷ್ಠಿಕಾಂಶಯುಕ್ತ ಆಹಾರ ಸೇವಿಸುವುದರ ಬಗ್ಗೆ ಗಮನವಹಿಸಬೇಕು ಎಂದರು.

ತಮ್ಮ ಆರೋಗ್ಯ ನಿರ್ಲಕ್ಷಿಸುವ ಮಹಿಳೆಯರು ಎಂಡೋಮೆಟ್ರಿಯಾಸಿಸ್‌, ಸರ್ವೈಕಲ್‌ ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಗೆ ಒಳಗಾಗುತ್ತಿದ್ದಾರೆ, ಈ ಅಪಾಯಕಾರ ಕ್ಯಾನ್ಸರ್‌ ಬಗ್ಗೆ ಮಹಿಳೆ ಜಾಗೃತಿ ಹೊಂದಬೇಕು. ಸರ್ವೈಕಲ್‌ ಕ್ಯಾನ್ಸರ್‌ ತಡೆಗಟ್ಟಲು ಇದೀಗ ಲಸಿಕೆ ಲಭ್ಯವಿದ್ದು, ಪ್ರತಿಯೊಬ್ಬರು ಇದರ ಪ್ರಯೋಜನ ಪಡೆದುಕೊಳ್ಳಲಿದೆ ಎಂದು ಹೇಳಿದರು.

ಡೆಂಟಲ್‌ ಡೆನ್‌ ನಿರ್ದೇಶಕಿ ಹಾಗೂ ವಾಕಥಾನ್‌ನ ರೂವಾರಿ ಡಾ. ಲಕ್ಷ್ಮಿ ರೂಪೇಶ್‌ ಮಾತನಾಡಿ, ಮಹಿಳೆಯರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಮಹಿಳಾ ದಿನಾಚರಣೆ ಪ್ರಯುಕ್ತ ಪ್ರತಿವರ್ಷ ವಾಕಥಾನ್‌ ಆಯೋಜಿಸುತ್ತಾ ಬರಲಾಗಿದೆ. ಈ 3ನೇ ಆವೃತ್ತಿಯ ವುಮೆನ್‌ ವಾಕಥಾನ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, 1500ಕ್ಕೂ ಹೆಚ್ಚು ಮಹಿಳೆಯರು ಪಾಲ್ಗೊಂಡಿದ್ದರು ಎಂದು ಹೇಳಿದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

10 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

22 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

23 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 day ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

1 day ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago