ದೊಡ್ಡಬಳ್ಳಾಪುರ: ಸ್ಫೂರ್ತಿ ಕನ್ನಡ ಕಲಾ ಟ್ರಸ್ಟ್ ವತಿಯಿಂದ ‘ಕಣ್ಣು ತೆರೆಸಿದ ಹೆಣ್ಣು’ ಕಾರ್ಯಕ್ರಮದ ಅಂಗವಾಗಿ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಮಹಿಳಾ ಪೊಲೀಸ್ ಅಧಿಕಾರಿಗಳು ಹಾಗೂ ಪೇದೆಗಳನ್ನು ಸತ್ಕರಿಸಲಾಯಿತು.
ಈ ಸಂದರ್ಭದಲ್ಲಿ ಮಹಿಳಾ ಪೊಲೀಸರಿಗೆ ಹಣ್ಣು-ಹಂಪಲು, ಸೀರೆ, ಅರಿಶಿಣ, ಕುಂಕುಮ, ಹೂವು ಹಾಗೂ ಬಳೆಗಳನ್ನು ನೀಡಿ ಗೌರವಿಸಲಾಯಿತು. ನಿತ್ಯ ಸಾರ್ವಜನಿಕರ ದೂರುಗಳು, ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿಗಳ ನಡುವೆ ಕಾರ್ಯನಿರ್ವಹಿಸುವ ಮಹಿಳಾ ಪೊಲೀಸರಿಗೆ ಈ ಕಾರ್ಯಕ್ರಮ ವಿಶೇಷ ಸಂತಸ ಮೂಡಿಸಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಸ್ಫೂರ್ತಿ ಕನ್ನಡ ಕಲಾ ಟ್ರಸ್ಟ್ ಅಧ್ಯಕ್ಷ, ರೈತ ಎಂ.ಸಿ. ರಾಜಣ್ಣ, ಮಹಿಳಾ ಪೊಲೀಸರು ಕುಟುಂಬದೊಂದಿಗೆ ಸಮಯ ಕಳೆಯುವುದಕ್ಕಿಂತ ಸಮಾಜದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿಯಲ್ಲಿ ಹೆಚ್ಚು ತೊಡಗಿಸಿಕೊಂಡಿರುತ್ತಾರೆ. ಅಪರಾಧ ನಿಯಂತ್ರಣ ಹಾಗೂ ಸಾರ್ವಜನಿಕರ ಸೇವೆಯಲ್ಲಿ ತಮ್ಮ ಅಮೂಲ್ಯ ಸಮಯವನ್ನು ಮೀಸಲಿಡುವ ಅವರ ಕಾರ್ಯ ಶ್ಲಾಘನೀಯವಾಗಿದೆ. ಅವರ ಸೇವೆಗೆ ಗೌರವ ಸಲ್ಲಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಿಂದ ಮಹಿಳಾ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದರು. ಸಮಾಜದ ಭದ್ರತೆಗಾಗಿ ಶ್ರಮಿಸುತ್ತಿರುವ ಮಹಿಳಾ ಪೊಲೀಸರ ಸೇವೆಯನ್ನು ಗುರುತಿಸಿ ಗೌರವಿಸಿದ ಸ್ಫೂರ್ತಿ ಕನ್ನಡ ಕಲಾ ಟ್ರಸ್ಟ್ನ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಯಿತು.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…