ಮಹಿಳಾ ಪೊಲೀಸರಿಗೆ ಸೀರೆ, ಹಣ್ಣು-ಹಂಪಲು ನೀಡಿ ಸತ್ಕಾರ

ದೊಡ್ಡಬಳ್ಳಾಪುರ: ಸ್ಫೂರ್ತಿ ಕನ್ನಡ ಕಲಾ ಟ್ರಸ್ಟ್ ವತಿಯಿಂದ ‘ಕಣ್ಣು ತೆರೆಸಿದ ಹೆಣ್ಣು’ ಕಾರ್ಯಕ್ರಮದ ಅಂಗವಾಗಿ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಮಹಿಳಾ ಪೊಲೀಸ್ ಅಧಿಕಾರಿಗಳು ಹಾಗೂ ಪೇದೆಗಳನ್ನು ಸತ್ಕರಿಸಲಾಯಿತು.

ಈ ಸಂದರ್ಭದಲ್ಲಿ ಮಹಿಳಾ ಪೊಲೀಸರಿಗೆ ಹಣ್ಣು-ಹಂಪಲು, ಸೀರೆ, ಅರಿಶಿಣ, ಕುಂಕುಮ, ಹೂವು ಹಾಗೂ ಬಳೆಗಳನ್ನು ನೀಡಿ ಗೌರವಿಸಲಾಯಿತು. ನಿತ್ಯ ಸಾರ್ವಜನಿಕರ ದೂರುಗಳು, ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿಗಳ ನಡುವೆ ಕಾರ್ಯನಿರ್ವಹಿಸುವ ಮಹಿಳಾ ಪೊಲೀಸರಿಗೆ ಈ ಕಾರ್ಯಕ್ರಮ ವಿಶೇಷ ಸಂತಸ ಮೂಡಿಸಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಸ್ಫೂರ್ತಿ ಕನ್ನಡ ಕಲಾ ಟ್ರಸ್ಟ್ ಅಧ್ಯಕ್ಷ, ರೈತ ಎಂ.ಸಿ. ರಾಜಣ್ಣ, ಮಹಿಳಾ ಪೊಲೀಸರು ಕುಟುಂಬದೊಂದಿಗೆ ಸಮಯ ಕಳೆಯುವುದಕ್ಕಿಂತ ಸಮಾಜದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿಯಲ್ಲಿ ಹೆಚ್ಚು ತೊಡಗಿಸಿಕೊಂಡಿರುತ್ತಾರೆ. ಅಪರಾಧ ನಿಯಂತ್ರಣ ಹಾಗೂ ಸಾರ್ವಜನಿಕರ ಸೇವೆಯಲ್ಲಿ ತಮ್ಮ ಅಮೂಲ್ಯ ಸಮಯವನ್ನು ಮೀಸಲಿಡುವ ಅವರ ಕಾರ್ಯ ಶ್ಲಾಘನೀಯವಾಗಿದೆ. ಅವರ ಸೇವೆಗೆ ಗೌರವ ಸಲ್ಲಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಿಂದ ಮಹಿಳಾ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದರು. ಸಮಾಜದ ಭದ್ರತೆಗಾಗಿ ಶ್ರಮಿಸುತ್ತಿರುವ ಮಹಿಳಾ ಪೊಲೀಸರ ಸೇವೆಯನ್ನು ಗುರುತಿಸಿ ಗೌರವಿಸಿದ ಸ್ಫೂರ್ತಿ ಕನ್ನಡ ಕಲಾ ಟ್ರಸ್ಟ್‌ನ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಯಿತು.

Ramesh Babu

Journalist

Recent Posts

ನಂದಿನಿ ಶೀತಲಿಕರಣ ಘಟಕದಲ್ಲಿ ದುರ್ಘಟನೆ: ಮರದಿಂದ ಬಿದ್ದು ಯುವಕ ಸಾವು, ನ್ಯಾಯಕ್ಕಾಗಿ ಕುಟುಂಬಸ್ಥರ ಪ್ರತಿಭಟನೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚಿಕ್ಕನಹಳ್ಳಿ ಗ್ರಾಮದ ಬಳಿಯ ನಂದಿನಿ ಹಾಲಿನ ಶೀತಲಿಕರಣ ಘಟಕದ ಆವರಣದಲ್ಲಿ ನಡೆದ…

4 hours ago

ಕೆಎಚ್‌ಎಂಗೆ ಡಿಸಿಎಂ ಸ್ಥಾನ ನೀಡಿ- ಮುನಿಕೃಷ್ಣಪ್ಪ ಆಗ್ರಹ

ಹುಟ್ಟುಹಬ್ಬವನ್ನು ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಆಚರಿಸುವುದರಿಂದ ಸಾಕಷ್ಟು ಜನರಿಗೆ ಅನುಕೂಲವಾಗಲಿದೆ ಎಂದು ತಾಲೂಕು ವಾಲ್ಮೀಕಿ ಸಂಘದ ಅಧ್ಯಕ್ಷ ಮುನಿಕೃಷ್ಣಪ್ಪ ತಿಳಿಸಿದರು. ದೊಡ್ಡಬಳ್ಳಾಪುರ…

5 hours ago

ಬೇಸಿಗೆ ರಜೆ ಬಳಿಕ ಶಾಲೆಗಳಿಗೆ ಮರುಕಳಿಸಿದ ವಿದ್ಯಾರ್ಥಿಗಳು: ಹಬ್ಬದ ವಾತಾವರಣದಲ್ಲಿ ಶಾಲಾ ಪ್ರಾರಂಭೋತ್ಸವ

ದೊಡ್ಡಬಳ್ಳಾಪುರ, ಜೂನ್ 1: ಬೇಸಿಗೆ ರಜೆ ಬಳಿಕ ಸೋಮವಾರದಿಂದ ರಾಜ್ಯಾದ್ಯಂತ ಶಾಲೆಗಳು ಪುನರಾರಂಭಗೊಂಡಿದ್ದು, 2026-27ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅಧಿಕೃತ…

10 hours ago

ಐಪಿಎಲ್ ಫೈನಲ್‌ನಲ್ಲಿ ಆರ್‌ಸಿಬಿಗೆ ಐತಿಹಾಸಿಕ ಜಯ: ಸತತ 2ನೇ ಬಾರಿ ಚಾಂಪಿಯನ್

ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 19ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಗುಜರಾತ್…

21 hours ago

ಭೀಕರ ಸರಣಿ ಅಪಘಾತ: ಐವರು ಸ್ಥಳದಲ್ಲೇ ಸಾವು, ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ

  ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸುಂಕಲಮ್ಮ ದೇವಸ್ಥಾನದ ಸಮೀಪ ಭಾನುವಾರ ಭೀಕರ ಸರಣಿ ರಸ್ತೆ ಅಪಘಾತ ಸಂಭವಿಸಿ ಆಟೋದಲ್ಲಿದ್ದ…

1 day ago

ಸಚಿವ ಸಂಪುಟದಲ್ಲಿ ಬೆಂ. ಗ್ರಾ ಪಾಲು ಎಷ್ಟು? ಕೆ.ಎಚ್. ಮುನಿಯಪ್ಪಗೆ ಡಿಸಿಎಂ ಬೇಡಿಕೆ, ಶರತ್ ಬಚ್ಚೇಗೌಡಗೆ ಮಂತ್ರಿಗಿರಿ ಚರ್ಚೆ

ಬೆಂಗಳೂರು ಗ್ರಾಮಾಂತರ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ರಾಜಕೀಯ ಬೆಳವಣಿಗೆಗಳ ಬೆನ್ನಲ್ಲೇ ಹೊಸ ಸಚಿವ ಸಂಪುಟ ರಚನೆಗೆ ಕಸರತ್ತು ಆರಂಭವಾಗಿದ್ದು, ಬೆಂಗಳೂರು…

2 days ago