ದೊಡ್ಡಬಳ್ಳಾಪುರ: ಸ್ಫೂರ್ತಿ ಕನ್ನಡ ಕಲಾ ಟ್ರಸ್ಟ್ ವತಿಯಿಂದ ‘ಕಣ್ಣು ತೆರೆಸಿದ ಹೆಣ್ಣು’ ಕಾರ್ಯಕ್ರಮದ ಅಂಗವಾಗಿ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಮಹಿಳಾ ಪೊಲೀಸ್ ಅಧಿಕಾರಿಗಳು ಹಾಗೂ ಪೇದೆಗಳನ್ನು ಸತ್ಕರಿಸಲಾಯಿತು.
ಈ ಸಂದರ್ಭದಲ್ಲಿ ಮಹಿಳಾ ಪೊಲೀಸರಿಗೆ ಹಣ್ಣು-ಹಂಪಲು, ಸೀರೆ, ಅರಿಶಿಣ, ಕುಂಕುಮ, ಹೂವು ಹಾಗೂ ಬಳೆಗಳನ್ನು ನೀಡಿ ಗೌರವಿಸಲಾಯಿತು. ನಿತ್ಯ ಸಾರ್ವಜನಿಕರ ದೂರುಗಳು, ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿಗಳ ನಡುವೆ ಕಾರ್ಯನಿರ್ವಹಿಸುವ ಮಹಿಳಾ ಪೊಲೀಸರಿಗೆ ಈ ಕಾರ್ಯಕ್ರಮ ವಿಶೇಷ ಸಂತಸ ಮೂಡಿಸಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಸ್ಫೂರ್ತಿ ಕನ್ನಡ ಕಲಾ ಟ್ರಸ್ಟ್ ಅಧ್ಯಕ್ಷ, ರೈತ ಎಂ.ಸಿ. ರಾಜಣ್ಣ, ಮಹಿಳಾ ಪೊಲೀಸರು ಕುಟುಂಬದೊಂದಿಗೆ ಸಮಯ ಕಳೆಯುವುದಕ್ಕಿಂತ ಸಮಾಜದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿಯಲ್ಲಿ ಹೆಚ್ಚು ತೊಡಗಿಸಿಕೊಂಡಿರುತ್ತಾರೆ. ಅಪರಾಧ ನಿಯಂತ್ರಣ ಹಾಗೂ ಸಾರ್ವಜನಿಕರ ಸೇವೆಯಲ್ಲಿ ತಮ್ಮ ಅಮೂಲ್ಯ ಸಮಯವನ್ನು ಮೀಸಲಿಡುವ ಅವರ ಕಾರ್ಯ ಶ್ಲಾಘನೀಯವಾಗಿದೆ. ಅವರ ಸೇವೆಗೆ ಗೌರವ ಸಲ್ಲಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಿಂದ ಮಹಿಳಾ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದರು. ಸಮಾಜದ ಭದ್ರತೆಗಾಗಿ ಶ್ರಮಿಸುತ್ತಿರುವ ಮಹಿಳಾ ಪೊಲೀಸರ ಸೇವೆಯನ್ನು ಗುರುತಿಸಿ ಗೌರವಿಸಿದ ಸ್ಫೂರ್ತಿ ಕನ್ನಡ ಕಲಾ ಟ್ರಸ್ಟ್ನ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಯಿತು.
ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯದಲ್ಲಿ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ…
ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಡಿಜೆ ಬಳಕೆಗೆ ನಿಷೇಧವಿದ್ದರೂ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಸಿದ ಆರೋಪದ ಮೇರೆಗೆ ಡಿಜೆ ವಾಹನವನ್ನು ಜಪ್ತಿ ಮಾಡಿರುವ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದಲ್ಲಿ…
ದೊಡ್ಡಬಳ್ಳಾಪುರ: ಕಾಂಗ್ರೆಸ್ನಲ್ಲಿ ಒಗ್ಗಟ್ಟು ಅಗತ್ಯವಾಗಿದ್ದು, ಮುಖಂಡರು ಹಾಗೂ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿದರೆ ಮುಂಬರುವ ಎಲ್ಲ ಚುನಾವಣೆಗಳಲ್ಲೂ ಪಕ್ಷದ ಗೆಲುವು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…