ನಗರದ ಮಹಿಳಾ ಪೊಲೀಸ್ ಠಾಣಾ ಆವರಣದಲ್ಲಿ ಇಂದು ಸಂಜೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.
ಗಾಯಾಳು ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಗಾಯಾಳುವನ್ನು ದೇವನಹಳ್ಳಿ ತಾಲ್ಲೂಕಿನ ಉಗನವಾಡಿ ಗ್ರಾಮದ ರಾಕೇಶ್ (35) ವರ್ಷ ಎಂದು ತಿಳಿದು ಬಂದಿದೆ.
ಮಹಿಳಾ ಪೊಲೀಸ್ ಠಾಣಾ ಪಕ್ಕದಲ್ಲೆ ನೂತನವಾಗಿ ಶೌಚಾಲಯ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಇಂದು ರಜೆ ಇದ್ದ ಕಾರಣ ನಾಳಿನ ಕಾಮಗಾರಿಗೆ ಇಂದೇ ಕಬ್ಬಿಣದ ಕಂಬಿಗಳನ್ನು ಕಟ್ಟಡದ ಮೇಲೆ ಇಡುವುದಕ್ಕೆ ಹೋದಾಗ ಘಟನೆ ನಡೆದಿದೆ.
ವ್ಯಕ್ತಿಯ ದೇಹದ ಬಲಭಾಗದಲ್ಲಿ ಸುಮಾರು 20% ರಷ್ಟು ಸುಟ್ಟಗಾಯಗಳಾಗಿದೆ. ಚಿಕಿತ್ಸೆಗಾಗಿ ನಗರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿತ್ತು, ಸದ್ಯ ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರು ಬೆಂಗಳೂರಿನ ಸೆಂಟ್ ಜಾನ್ಸ್ ಆಸ್ಪತ್ರೆಗೆ ಗಾಯಾಳುವನ್ನು ರವಾನಿಸಲು ಸೂಚಿಸಿದ್ದಾರೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…