ಮಹಿಳಾ ಪೊಲೀಸ್ ಠಾಣೆ ಬೆಂಗಳೂರು ನಗರಕ್ಕೆ ಸ್ಥಳಾಂತರ ಯತ್ನ ವಿಚಾರ: ಮಹಿಳಾ ಠಾಣೆ ಸ್ಥಳಾಂತರಿಸದಿರಲು ಕಾರ್ಯನಿರತ ಪತ್ರಕರ್ತರ ಸಂಘ ಮನವಿ, ಒತ್ತಾಯ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಪೊಲೀಸ್ ಠಾಣೆಯನ್ನು ಬೆಂಗಳೂರು ನಗರಕ್ಕೆ ಸ್ಥಳಾಂತರ ಮಾಡಲು ಪ್ರಯತ್ನ ನಡೆಯುತ್ತಿರುವ ವಿಚಾರ ಕೇಳಿಬಂದಿದ್ದು,  ಠಾಣೆಯನ್ನು ಯಾವುದೇ ‌ಕಾರಣಕ್ಕೂ ಸ್ಥಳಾಂತರ ಮಾಡದಿರಲು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಸದಸ್ಯರು ದೊಡ್ಡಬಳ್ಳಾಪುರ ಉಪವಿಭಾಗದ ಡಿ.ವೈ ಎಸ್ ರವಿ.ಪಿ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ರಮೇಶ್, ತಾಲ್ಲೂಕಿನಲ್ಲಿ ದಿನೇ ದಿನೇ ಕೌಟುಂಬಿಕ ಕಲಹಗಳು, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಮಹಿಳಾ ಪೊಲೀಸ್ ಠಾಣೆ ದೊಡ್ಡಬಳ್ಳಾಪುರದಲ್ಲಿ ಇರುವುದರಿಂದ ಜಿಲ್ಲೆಯಲ್ಲಿನ ಸಾರ್ವಜನಿಕರಿಗೆ ಹಾಗು ಮಹಿಳೆಯರಿಗೆ ಶ್ರೀರಕ್ಷೆಯಾಗಿದೆ. ಠಾಣೆಯನ್ನು ಬೆಂಗಳೂರು ನಗರಕ್ಕೆ ಸ್ಥಳಾಂತರ ಮಾಡಿದರೆ ಸಾರ್ವಜನಿಕರಿಗೆ ತೀವ್ರವಾಗಿ ತೊಂದರೆ ಉಂಟಾಗುತ್ತದೆ. ಬೆಂಗಳೂರು ನಗರಕ್ಕೆ ತೆರಳಿ ದೂರು ದಾಖಲಿಸಲು ಅನಾನುಕೂಲವಾಗುತ್ತದೆ. ಆದ್ದರಿಂದ, ಮಹಿಳಾ ಪೊಲೀಸ್ ಠಾಣೆಯು ದೊಡ್ಡಬಳ್ಳಾಪುರದಲ್ಲೇ ಕಾರ್ಯ ನಿರ್ವಹಿಸುವುದು ಸೂಕ್ತ ಎಂದು ಆಗ್ರಹಿಸಿ ಸಾರ್ವಜನಿಕ ಹಿತಾಸಕ್ತಿಯಿಂದ ಠಾಣೆಯನ್ನು ಸ್ಥಳಾಂತರ ಮಾಡದಂತೆ ಮನವಿ ಮಾಡಿದರು.

ನಂತರ ಮಾತನಾಡಿದ ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರ ಚಂದ್ರಶೇಖರ್.ಡಿ ಉಪ್ಪಾರ್ ಮಾತನಾಡಿ, ದೊಡ್ಡಬಳ್ಳಾಪುರದಲ್ಲಿ ಆಗಬೇಕಿದ್ದ ಆರ್.ಟಿ.ಓ ಕಚೇರಿ, ಜಿಲ್ಲಾ ಪ್ರದಾನ ಅಂಚೆ ಕಚೇರಿ, ಕೆ.ಎಸ್.ಆರ್.ಟಿ.ಸಿ. ಬಸ್ ಡಿಪೋ ಇನ್ನಿತರ ಕಚೇರಿಗಳು ಪಕ್ಕದ ತಾಲ್ಲೂಕುಗಳ ಪಾಲಾಗಿದೆ. ಸಾರ್ವಜನಿಕ ಹಿತಾಸಕ್ತಿಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಮಹಿಳಾ ಪೊಲೀಸ್ ಠಾಣೆ ಸ್ಥಳಾಂತರಗೊಳಿಸುವ ನಡೆ ಸರಿಯಲ್ಲ ಎಂದರು.

ಮಹಿಳಾ ಠಾಣೆಗೆ ಸ್ವಂತ ಕಟ್ಟಡಕ್ಕೆ ಅಗತ್ಯವಿರುವ ಸರ್ಕಾರಿ ಜಮೀನುಗಳು ನಗರದ ಹಲವಾರು ಕಡೆ ಲಭ್ಯವಿದ್ದು, ಇಲಾಖೆಯ ಮುಖ್ಯಸ್ಥರು ಸೂಕ್ತ ಸ್ಥಳವನ್ನು ಗುರುತಿಸಿ ಸ್ವಂತ ಕಟ್ಟಡವನ್ನು ನಿರ್ಮಿಸಿ ಮಹಿಳಾ ಠಾಣೆಯನ್ನು ಶಾಶ್ವತವಾಗಿ ದೊಡ್ಡಬಳ್ಳಾಪುರದಲ್ಲೇ ಉಳಿಸುವಂತೆ ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಡಿ.ವೈ.ಎಸ್ ರವಿ.ಪಿ ರವರು ಮಹಿಳಾ ಪೊಲೀಸ್ ಠಾಣೆ ಸ್ಥಳಾಂತರ ವಿಚಾರವು ಮೌಖಿಕವಾಗಿ ತಿಳಿಸಿದ್ದು. ಮನವಿಯನ್ನು ಮೇಲಧಿಕಾರಿಗಳಿಗೆ ರವಾನೆ ಮಾಡಿ ಠಾಣೆ ಉಳಿಸಲು ಸಹಕರಿಸುವ ಭರವಸೆ ನೀಡಿದರು.

ಈ ವೇಳೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಕೊತ್ತೂರಪ್ಪ, ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ (ನೆಲ್ಲುಗುದಿಗೆ) ಪ್ರದೀಪ್, ಮಂಜನಾಥ್, ಮನುಕುಮಾರ್, ಗಂಗರಾಜು, ರಮೇಶ್ ಬಾಬು, ಶಿವರಾಜ‌ ನೇಸರ ಉಪಸ್ಥಿತರಿದ್ದರು.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

13 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

14 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

22 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 days ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago