ಮಹಿಳಾ ಪೊಲೀಸ್ ಠಾಣೆ ಬೆಂಗಳೂರು ನಗರಕ್ಕೆ ಸ್ಥಳಾಂತರ ಯತ್ನ ವಿಚಾರ: ಮಹಿಳಾ ಠಾಣೆ ಸ್ಥಳಾಂತರಿಸದಿರಲು ಕಾರ್ಯನಿರತ ಪತ್ರಕರ್ತರ ಸಂಘ ಮನವಿ, ಒತ್ತಾಯ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಪೊಲೀಸ್ ಠಾಣೆಯನ್ನು ಬೆಂಗಳೂರು ನಗರಕ್ಕೆ ಸ್ಥಳಾಂತರ ಮಾಡಲು ಪ್ರಯತ್ನ ನಡೆಯುತ್ತಿರುವ ವಿಚಾರ ಕೇಳಿಬಂದಿದ್ದು,  ಠಾಣೆಯನ್ನು ಯಾವುದೇ ‌ಕಾರಣಕ್ಕೂ ಸ್ಥಳಾಂತರ ಮಾಡದಿರಲು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಸದಸ್ಯರು ದೊಡ್ಡಬಳ್ಳಾಪುರ ಉಪವಿಭಾಗದ ಡಿ.ವೈ ಎಸ್ ರವಿ.ಪಿ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ರಮೇಶ್, ತಾಲ್ಲೂಕಿನಲ್ಲಿ ದಿನೇ ದಿನೇ ಕೌಟುಂಬಿಕ ಕಲಹಗಳು, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಮಹಿಳಾ ಪೊಲೀಸ್ ಠಾಣೆ ದೊಡ್ಡಬಳ್ಳಾಪುರದಲ್ಲಿ ಇರುವುದರಿಂದ ಜಿಲ್ಲೆಯಲ್ಲಿನ ಸಾರ್ವಜನಿಕರಿಗೆ ಹಾಗು ಮಹಿಳೆಯರಿಗೆ ಶ್ರೀರಕ್ಷೆಯಾಗಿದೆ. ಠಾಣೆಯನ್ನು ಬೆಂಗಳೂರು ನಗರಕ್ಕೆ ಸ್ಥಳಾಂತರ ಮಾಡಿದರೆ ಸಾರ್ವಜನಿಕರಿಗೆ ತೀವ್ರವಾಗಿ ತೊಂದರೆ ಉಂಟಾಗುತ್ತದೆ. ಬೆಂಗಳೂರು ನಗರಕ್ಕೆ ತೆರಳಿ ದೂರು ದಾಖಲಿಸಲು ಅನಾನುಕೂಲವಾಗುತ್ತದೆ. ಆದ್ದರಿಂದ, ಮಹಿಳಾ ಪೊಲೀಸ್ ಠಾಣೆಯು ದೊಡ್ಡಬಳ್ಳಾಪುರದಲ್ಲೇ ಕಾರ್ಯ ನಿರ್ವಹಿಸುವುದು ಸೂಕ್ತ ಎಂದು ಆಗ್ರಹಿಸಿ ಸಾರ್ವಜನಿಕ ಹಿತಾಸಕ್ತಿಯಿಂದ ಠಾಣೆಯನ್ನು ಸ್ಥಳಾಂತರ ಮಾಡದಂತೆ ಮನವಿ ಮಾಡಿದರು.

ನಂತರ ಮಾತನಾಡಿದ ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರ ಚಂದ್ರಶೇಖರ್.ಡಿ ಉಪ್ಪಾರ್ ಮಾತನಾಡಿ, ದೊಡ್ಡಬಳ್ಳಾಪುರದಲ್ಲಿ ಆಗಬೇಕಿದ್ದ ಆರ್.ಟಿ.ಓ ಕಚೇರಿ, ಜಿಲ್ಲಾ ಪ್ರದಾನ ಅಂಚೆ ಕಚೇರಿ, ಕೆ.ಎಸ್.ಆರ್.ಟಿ.ಸಿ. ಬಸ್ ಡಿಪೋ ಇನ್ನಿತರ ಕಚೇರಿಗಳು ಪಕ್ಕದ ತಾಲ್ಲೂಕುಗಳ ಪಾಲಾಗಿದೆ. ಸಾರ್ವಜನಿಕ ಹಿತಾಸಕ್ತಿಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಮಹಿಳಾ ಪೊಲೀಸ್ ಠಾಣೆ ಸ್ಥಳಾಂತರಗೊಳಿಸುವ ನಡೆ ಸರಿಯಲ್ಲ ಎಂದರು.

ಮಹಿಳಾ ಠಾಣೆಗೆ ಸ್ವಂತ ಕಟ್ಟಡಕ್ಕೆ ಅಗತ್ಯವಿರುವ ಸರ್ಕಾರಿ ಜಮೀನುಗಳು ನಗರದ ಹಲವಾರು ಕಡೆ ಲಭ್ಯವಿದ್ದು, ಇಲಾಖೆಯ ಮುಖ್ಯಸ್ಥರು ಸೂಕ್ತ ಸ್ಥಳವನ್ನು ಗುರುತಿಸಿ ಸ್ವಂತ ಕಟ್ಟಡವನ್ನು ನಿರ್ಮಿಸಿ ಮಹಿಳಾ ಠಾಣೆಯನ್ನು ಶಾಶ್ವತವಾಗಿ ದೊಡ್ಡಬಳ್ಳಾಪುರದಲ್ಲೇ ಉಳಿಸುವಂತೆ ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಡಿ.ವೈ.ಎಸ್ ರವಿ.ಪಿ ರವರು ಮಹಿಳಾ ಪೊಲೀಸ್ ಠಾಣೆ ಸ್ಥಳಾಂತರ ವಿಚಾರವು ಮೌಖಿಕವಾಗಿ ತಿಳಿಸಿದ್ದು. ಮನವಿಯನ್ನು ಮೇಲಧಿಕಾರಿಗಳಿಗೆ ರವಾನೆ ಮಾಡಿ ಠಾಣೆ ಉಳಿಸಲು ಸಹಕರಿಸುವ ಭರವಸೆ ನೀಡಿದರು.

ಈ ವೇಳೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಕೊತ್ತೂರಪ್ಪ, ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ (ನೆಲ್ಲುಗುದಿಗೆ) ಪ್ರದೀಪ್, ಮಂಜನಾಥ್, ಮನುಕುಮಾರ್, ಗಂಗರಾಜು, ರಮೇಶ್ ಬಾಬು, ಶಿವರಾಜ‌ ನೇಸರ ಉಪಸ್ಥಿತರಿದ್ದರು.

Ramesh Babu

Journalist

Recent Posts

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

11 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

11 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

12 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

14 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

22 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

22 hours ago