ಮಹಿಳಾ ಪೊಲೀಸ್ ಠಾಣೆ ಬೆಂಗಳೂರು ನಗರಕ್ಕೆ ಸ್ಥಳಾಂತರ ಯತ್ನ ವಿಚಾರ: ಮಹಿಳಾ ಠಾಣೆ ಸ್ಥಳಾಂತರಿಸದಿರಲು ಕಾರ್ಯನಿರತ ಪತ್ರಕರ್ತರ ಸಂಘ ಮನವಿ, ಒತ್ತಾಯ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಪೊಲೀಸ್ ಠಾಣೆಯನ್ನು ಬೆಂಗಳೂರು ನಗರಕ್ಕೆ ಸ್ಥಳಾಂತರ ಮಾಡಲು ಪ್ರಯತ್ನ ನಡೆಯುತ್ತಿರುವ ವಿಚಾರ ಕೇಳಿಬಂದಿದ್ದು,  ಠಾಣೆಯನ್ನು ಯಾವುದೇ ‌ಕಾರಣಕ್ಕೂ ಸ್ಥಳಾಂತರ ಮಾಡದಿರಲು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಸದಸ್ಯರು ದೊಡ್ಡಬಳ್ಳಾಪುರ ಉಪವಿಭಾಗದ ಡಿ.ವೈ ಎಸ್ ರವಿ.ಪಿ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ರಮೇಶ್, ತಾಲ್ಲೂಕಿನಲ್ಲಿ ದಿನೇ ದಿನೇ ಕೌಟುಂಬಿಕ ಕಲಹಗಳು, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಮಹಿಳಾ ಪೊಲೀಸ್ ಠಾಣೆ ದೊಡ್ಡಬಳ್ಳಾಪುರದಲ್ಲಿ ಇರುವುದರಿಂದ ಜಿಲ್ಲೆಯಲ್ಲಿನ ಸಾರ್ವಜನಿಕರಿಗೆ ಹಾಗು ಮಹಿಳೆಯರಿಗೆ ಶ್ರೀರಕ್ಷೆಯಾಗಿದೆ. ಠಾಣೆಯನ್ನು ಬೆಂಗಳೂರು ನಗರಕ್ಕೆ ಸ್ಥಳಾಂತರ ಮಾಡಿದರೆ ಸಾರ್ವಜನಿಕರಿಗೆ ತೀವ್ರವಾಗಿ ತೊಂದರೆ ಉಂಟಾಗುತ್ತದೆ. ಬೆಂಗಳೂರು ನಗರಕ್ಕೆ ತೆರಳಿ ದೂರು ದಾಖಲಿಸಲು ಅನಾನುಕೂಲವಾಗುತ್ತದೆ. ಆದ್ದರಿಂದ, ಮಹಿಳಾ ಪೊಲೀಸ್ ಠಾಣೆಯು ದೊಡ್ಡಬಳ್ಳಾಪುರದಲ್ಲೇ ಕಾರ್ಯ ನಿರ್ವಹಿಸುವುದು ಸೂಕ್ತ ಎಂದು ಆಗ್ರಹಿಸಿ ಸಾರ್ವಜನಿಕ ಹಿತಾಸಕ್ತಿಯಿಂದ ಠಾಣೆಯನ್ನು ಸ್ಥಳಾಂತರ ಮಾಡದಂತೆ ಮನವಿ ಮಾಡಿದರು.

ನಂತರ ಮಾತನಾಡಿದ ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರ ಚಂದ್ರಶೇಖರ್.ಡಿ ಉಪ್ಪಾರ್ ಮಾತನಾಡಿ, ದೊಡ್ಡಬಳ್ಳಾಪುರದಲ್ಲಿ ಆಗಬೇಕಿದ್ದ ಆರ್.ಟಿ.ಓ ಕಚೇರಿ, ಜಿಲ್ಲಾ ಪ್ರದಾನ ಅಂಚೆ ಕಚೇರಿ, ಕೆ.ಎಸ್.ಆರ್.ಟಿ.ಸಿ. ಬಸ್ ಡಿಪೋ ಇನ್ನಿತರ ಕಚೇರಿಗಳು ಪಕ್ಕದ ತಾಲ್ಲೂಕುಗಳ ಪಾಲಾಗಿದೆ. ಸಾರ್ವಜನಿಕ ಹಿತಾಸಕ್ತಿಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಮಹಿಳಾ ಪೊಲೀಸ್ ಠಾಣೆ ಸ್ಥಳಾಂತರಗೊಳಿಸುವ ನಡೆ ಸರಿಯಲ್ಲ ಎಂದರು.

ಮಹಿಳಾ ಠಾಣೆಗೆ ಸ್ವಂತ ಕಟ್ಟಡಕ್ಕೆ ಅಗತ್ಯವಿರುವ ಸರ್ಕಾರಿ ಜಮೀನುಗಳು ನಗರದ ಹಲವಾರು ಕಡೆ ಲಭ್ಯವಿದ್ದು, ಇಲಾಖೆಯ ಮುಖ್ಯಸ್ಥರು ಸೂಕ್ತ ಸ್ಥಳವನ್ನು ಗುರುತಿಸಿ ಸ್ವಂತ ಕಟ್ಟಡವನ್ನು ನಿರ್ಮಿಸಿ ಮಹಿಳಾ ಠಾಣೆಯನ್ನು ಶಾಶ್ವತವಾಗಿ ದೊಡ್ಡಬಳ್ಳಾಪುರದಲ್ಲೇ ಉಳಿಸುವಂತೆ ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಡಿ.ವೈ.ಎಸ್ ರವಿ.ಪಿ ರವರು ಮಹಿಳಾ ಪೊಲೀಸ್ ಠಾಣೆ ಸ್ಥಳಾಂತರ ವಿಚಾರವು ಮೌಖಿಕವಾಗಿ ತಿಳಿಸಿದ್ದು. ಮನವಿಯನ್ನು ಮೇಲಧಿಕಾರಿಗಳಿಗೆ ರವಾನೆ ಮಾಡಿ ಠಾಣೆ ಉಳಿಸಲು ಸಹಕರಿಸುವ ಭರವಸೆ ನೀಡಿದರು.

ಈ ವೇಳೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಕೊತ್ತೂರಪ್ಪ, ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ (ನೆಲ್ಲುಗುದಿಗೆ) ಪ್ರದೀಪ್, ಮಂಜನಾಥ್, ಮನುಕುಮಾರ್, ಗಂಗರಾಜು, ರಮೇಶ್ ಬಾಬು, ಶಿವರಾಜ‌ ನೇಸರ ಉಪಸ್ಥಿತರಿದ್ದರು.

Ramesh Babu

Journalist

Recent Posts

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

36 minutes ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago