ಮಹಿಳಾ ಪೊಲೀಸ್ ಠಾಣೆ ಬೆಂಗಳೂರು ನಗರಕ್ಕೆ ಸ್ಥಳಾಂತರ ಯತ್ನ ವಿಚಾರ: ಮಹಿಳಾ ಠಾಣೆ ಸ್ಥಳಾಂತರಿಸದಿರಲು ಕಾರ್ಯನಿರತ ಪತ್ರಕರ್ತರ ಸಂಘ ಮನವಿ, ಒತ್ತಾಯ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಪೊಲೀಸ್ ಠಾಣೆಯನ್ನು ಬೆಂಗಳೂರು ನಗರಕ್ಕೆ ಸ್ಥಳಾಂತರ ಮಾಡಲು ಪ್ರಯತ್ನ ನಡೆಯುತ್ತಿರುವ ವಿಚಾರ ಕೇಳಿಬಂದಿದ್ದು,  ಠಾಣೆಯನ್ನು ಯಾವುದೇ ‌ಕಾರಣಕ್ಕೂ ಸ್ಥಳಾಂತರ ಮಾಡದಿರಲು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಸದಸ್ಯರು ದೊಡ್ಡಬಳ್ಳಾಪುರ ಉಪವಿಭಾಗದ ಡಿ.ವೈ ಎಸ್ ರವಿ.ಪಿ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ರಮೇಶ್, ತಾಲ್ಲೂಕಿನಲ್ಲಿ ದಿನೇ ದಿನೇ ಕೌಟುಂಬಿಕ ಕಲಹಗಳು, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಮಹಿಳಾ ಪೊಲೀಸ್ ಠಾಣೆ ದೊಡ್ಡಬಳ್ಳಾಪುರದಲ್ಲಿ ಇರುವುದರಿಂದ ಜಿಲ್ಲೆಯಲ್ಲಿನ ಸಾರ್ವಜನಿಕರಿಗೆ ಹಾಗು ಮಹಿಳೆಯರಿಗೆ ಶ್ರೀರಕ್ಷೆಯಾಗಿದೆ. ಠಾಣೆಯನ್ನು ಬೆಂಗಳೂರು ನಗರಕ್ಕೆ ಸ್ಥಳಾಂತರ ಮಾಡಿದರೆ ಸಾರ್ವಜನಿಕರಿಗೆ ತೀವ್ರವಾಗಿ ತೊಂದರೆ ಉಂಟಾಗುತ್ತದೆ. ಬೆಂಗಳೂರು ನಗರಕ್ಕೆ ತೆರಳಿ ದೂರು ದಾಖಲಿಸಲು ಅನಾನುಕೂಲವಾಗುತ್ತದೆ. ಆದ್ದರಿಂದ, ಮಹಿಳಾ ಪೊಲೀಸ್ ಠಾಣೆಯು ದೊಡ್ಡಬಳ್ಳಾಪುರದಲ್ಲೇ ಕಾರ್ಯ ನಿರ್ವಹಿಸುವುದು ಸೂಕ್ತ ಎಂದು ಆಗ್ರಹಿಸಿ ಸಾರ್ವಜನಿಕ ಹಿತಾಸಕ್ತಿಯಿಂದ ಠಾಣೆಯನ್ನು ಸ್ಥಳಾಂತರ ಮಾಡದಂತೆ ಮನವಿ ಮಾಡಿದರು.

ನಂತರ ಮಾತನಾಡಿದ ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರ ಚಂದ್ರಶೇಖರ್.ಡಿ ಉಪ್ಪಾರ್ ಮಾತನಾಡಿ, ದೊಡ್ಡಬಳ್ಳಾಪುರದಲ್ಲಿ ಆಗಬೇಕಿದ್ದ ಆರ್.ಟಿ.ಓ ಕಚೇರಿ, ಜಿಲ್ಲಾ ಪ್ರದಾನ ಅಂಚೆ ಕಚೇರಿ, ಕೆ.ಎಸ್.ಆರ್.ಟಿ.ಸಿ. ಬಸ್ ಡಿಪೋ ಇನ್ನಿತರ ಕಚೇರಿಗಳು ಪಕ್ಕದ ತಾಲ್ಲೂಕುಗಳ ಪಾಲಾಗಿದೆ. ಸಾರ್ವಜನಿಕ ಹಿತಾಸಕ್ತಿಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಮಹಿಳಾ ಪೊಲೀಸ್ ಠಾಣೆ ಸ್ಥಳಾಂತರಗೊಳಿಸುವ ನಡೆ ಸರಿಯಲ್ಲ ಎಂದರು.

ಮಹಿಳಾ ಠಾಣೆಗೆ ಸ್ವಂತ ಕಟ್ಟಡಕ್ಕೆ ಅಗತ್ಯವಿರುವ ಸರ್ಕಾರಿ ಜಮೀನುಗಳು ನಗರದ ಹಲವಾರು ಕಡೆ ಲಭ್ಯವಿದ್ದು, ಇಲಾಖೆಯ ಮುಖ್ಯಸ್ಥರು ಸೂಕ್ತ ಸ್ಥಳವನ್ನು ಗುರುತಿಸಿ ಸ್ವಂತ ಕಟ್ಟಡವನ್ನು ನಿರ್ಮಿಸಿ ಮಹಿಳಾ ಠಾಣೆಯನ್ನು ಶಾಶ್ವತವಾಗಿ ದೊಡ್ಡಬಳ್ಳಾಪುರದಲ್ಲೇ ಉಳಿಸುವಂತೆ ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಡಿ.ವೈ.ಎಸ್ ರವಿ.ಪಿ ರವರು ಮಹಿಳಾ ಪೊಲೀಸ್ ಠಾಣೆ ಸ್ಥಳಾಂತರ ವಿಚಾರವು ಮೌಖಿಕವಾಗಿ ತಿಳಿಸಿದ್ದು. ಮನವಿಯನ್ನು ಮೇಲಧಿಕಾರಿಗಳಿಗೆ ರವಾನೆ ಮಾಡಿ ಠಾಣೆ ಉಳಿಸಲು ಸಹಕರಿಸುವ ಭರವಸೆ ನೀಡಿದರು.

ಈ ವೇಳೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಕೊತ್ತೂರಪ್ಪ, ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ (ನೆಲ್ಲುಗುದಿಗೆ) ಪ್ರದೀಪ್, ಮಂಜನಾಥ್, ಮನುಕುಮಾರ್, ಗಂಗರಾಜು, ರಮೇಶ್ ಬಾಬು, ಶಿವರಾಜ‌ ನೇಸರ ಉಪಸ್ಥಿತರಿದ್ದರು.

Ramesh Babu

Journalist

Recent Posts

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

54 minutes ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

12 hours ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

16 hours ago

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

2 days ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

2 days ago

ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಡ್ಯಾಂ ನಿರ್ಮಾಣ ಬೇಡ- ತಹಶೀಲ್ದಾರ್ ಮಲ್ಲಪ್ಪಗೆ ರೈತರ ಮನವಿ

ಎತ್ತಿನಹೊಳೆ ಯೋಜನೆಯ ನೀರು ಸಂಗ್ರಹಣೆಗೆ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಲಕ್ಕೇನಹಳ್ಳಿ…

2 days ago