ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಪೊಲೀಸ್ ಠಾಣೆಯನ್ನು ಬೆಂಗಳೂರು ನಗರಕ್ಕೆ ಸ್ಥಳಾಂತರ ಮಾಡಲು ಪ್ರಯತ್ನ ನಡೆಯುತ್ತಿರುವ ವಿಚಾರ ಕೇಳಿಬಂದಿದ್ದು, ಠಾಣೆಯನ್ನು ಯಾವುದೇ ಕಾರಣಕ್ಕೂ ಸ್ಥಳಾಂತರ ಮಾಡದಿರಲು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಸದಸ್ಯರು ದೊಡ್ಡಬಳ್ಳಾಪುರ ಉಪವಿಭಾಗದ ಡಿ.ವೈ ಎಸ್ ರವಿ.ಪಿ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ರಮೇಶ್, ತಾಲ್ಲೂಕಿನಲ್ಲಿ ದಿನೇ ದಿನೇ ಕೌಟುಂಬಿಕ ಕಲಹಗಳು, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಮಹಿಳಾ ಪೊಲೀಸ್ ಠಾಣೆ ದೊಡ್ಡಬಳ್ಳಾಪುರದಲ್ಲಿ ಇರುವುದರಿಂದ ಜಿಲ್ಲೆಯಲ್ಲಿನ ಸಾರ್ವಜನಿಕರಿಗೆ ಹಾಗು ಮಹಿಳೆಯರಿಗೆ ಶ್ರೀರಕ್ಷೆಯಾಗಿದೆ. ಠಾಣೆಯನ್ನು ಬೆಂಗಳೂರು ನಗರಕ್ಕೆ ಸ್ಥಳಾಂತರ ಮಾಡಿದರೆ ಸಾರ್ವಜನಿಕರಿಗೆ ತೀವ್ರವಾಗಿ ತೊಂದರೆ ಉಂಟಾಗುತ್ತದೆ. ಬೆಂಗಳೂರು ನಗರಕ್ಕೆ ತೆರಳಿ ದೂರು ದಾಖಲಿಸಲು ಅನಾನುಕೂಲವಾಗುತ್ತದೆ. ಆದ್ದರಿಂದ, ಮಹಿಳಾ ಪೊಲೀಸ್ ಠಾಣೆಯು ದೊಡ್ಡಬಳ್ಳಾಪುರದಲ್ಲೇ ಕಾರ್ಯ ನಿರ್ವಹಿಸುವುದು ಸೂಕ್ತ ಎಂದು ಆಗ್ರಹಿಸಿ ಸಾರ್ವಜನಿಕ ಹಿತಾಸಕ್ತಿಯಿಂದ ಠಾಣೆಯನ್ನು ಸ್ಥಳಾಂತರ ಮಾಡದಂತೆ ಮನವಿ ಮಾಡಿದರು.
ನಂತರ ಮಾತನಾಡಿದ ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರ ಚಂದ್ರಶೇಖರ್.ಡಿ ಉಪ್ಪಾರ್ ಮಾತನಾಡಿ, ದೊಡ್ಡಬಳ್ಳಾಪುರದಲ್ಲಿ ಆಗಬೇಕಿದ್ದ ಆರ್.ಟಿ.ಓ ಕಚೇರಿ, ಜಿಲ್ಲಾ ಪ್ರದಾನ ಅಂಚೆ ಕಚೇರಿ, ಕೆ.ಎಸ್.ಆರ್.ಟಿ.ಸಿ. ಬಸ್ ಡಿಪೋ ಇನ್ನಿತರ ಕಚೇರಿಗಳು ಪಕ್ಕದ ತಾಲ್ಲೂಕುಗಳ ಪಾಲಾಗಿದೆ. ಸಾರ್ವಜನಿಕ ಹಿತಾಸಕ್ತಿಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಮಹಿಳಾ ಪೊಲೀಸ್ ಠಾಣೆ ಸ್ಥಳಾಂತರಗೊಳಿಸುವ ನಡೆ ಸರಿಯಲ್ಲ ಎಂದರು.
ಮಹಿಳಾ ಠಾಣೆಗೆ ಸ್ವಂತ ಕಟ್ಟಡಕ್ಕೆ ಅಗತ್ಯವಿರುವ ಸರ್ಕಾರಿ ಜಮೀನುಗಳು ನಗರದ ಹಲವಾರು ಕಡೆ ಲಭ್ಯವಿದ್ದು, ಇಲಾಖೆಯ ಮುಖ್ಯಸ್ಥರು ಸೂಕ್ತ ಸ್ಥಳವನ್ನು ಗುರುತಿಸಿ ಸ್ವಂತ ಕಟ್ಟಡವನ್ನು ನಿರ್ಮಿಸಿ ಮಹಿಳಾ ಠಾಣೆಯನ್ನು ಶಾಶ್ವತವಾಗಿ ದೊಡ್ಡಬಳ್ಳಾಪುರದಲ್ಲೇ ಉಳಿಸುವಂತೆ ಒತ್ತಾಯಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಡಿ.ವೈ.ಎಸ್ ರವಿ.ಪಿ ರವರು ಮಹಿಳಾ ಪೊಲೀಸ್ ಠಾಣೆ ಸ್ಥಳಾಂತರ ವಿಚಾರವು ಮೌಖಿಕವಾಗಿ ತಿಳಿಸಿದ್ದು. ಮನವಿಯನ್ನು ಮೇಲಧಿಕಾರಿಗಳಿಗೆ ರವಾನೆ ಮಾಡಿ ಠಾಣೆ ಉಳಿಸಲು ಸಹಕರಿಸುವ ಭರವಸೆ ನೀಡಿದರು.
ಈ ವೇಳೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಕೊತ್ತೂರಪ್ಪ, ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ (ನೆಲ್ಲುಗುದಿಗೆ) ಪ್ರದೀಪ್, ಮಂಜನಾಥ್, ಮನುಕುಮಾರ್, ಗಂಗರಾಜು, ರಮೇಶ್ ಬಾಬು, ಶಿವರಾಜ ನೇಸರ ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…