ಮಹಿಳಾ ಪೊಲೀಸ್ ಠಾಣೆ ಬೆಂಗಳೂರು ನಗರಕ್ಕೆ ಸ್ಥಳಾಂತರ ಯತ್ನ ವಿಚಾರ: ಮಹಿಳಾ ಠಾಣೆ ಸ್ಥಳಾಂತರಿಸದಿರಲು ಕಾರ್ಯನಿರತ ಪತ್ರಕರ್ತರ ಸಂಘ ಮನವಿ, ಒತ್ತಾಯ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಪೊಲೀಸ್ ಠಾಣೆಯನ್ನು ಬೆಂಗಳೂರು ನಗರಕ್ಕೆ ಸ್ಥಳಾಂತರ ಮಾಡಲು ಪ್ರಯತ್ನ ನಡೆಯುತ್ತಿರುವ ವಿಚಾರ ಕೇಳಿಬಂದಿದ್ದು,  ಠಾಣೆಯನ್ನು ಯಾವುದೇ ‌ಕಾರಣಕ್ಕೂ ಸ್ಥಳಾಂತರ ಮಾಡದಿರಲು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಸದಸ್ಯರು ದೊಡ್ಡಬಳ್ಳಾಪುರ ಉಪವಿಭಾಗದ ಡಿ.ವೈ ಎಸ್ ರವಿ.ಪಿ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ರಮೇಶ್, ತಾಲ್ಲೂಕಿನಲ್ಲಿ ದಿನೇ ದಿನೇ ಕೌಟುಂಬಿಕ ಕಲಹಗಳು, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಮಹಿಳಾ ಪೊಲೀಸ್ ಠಾಣೆ ದೊಡ್ಡಬಳ್ಳಾಪುರದಲ್ಲಿ ಇರುವುದರಿಂದ ಜಿಲ್ಲೆಯಲ್ಲಿನ ಸಾರ್ವಜನಿಕರಿಗೆ ಹಾಗು ಮಹಿಳೆಯರಿಗೆ ಶ್ರೀರಕ್ಷೆಯಾಗಿದೆ. ಠಾಣೆಯನ್ನು ಬೆಂಗಳೂರು ನಗರಕ್ಕೆ ಸ್ಥಳಾಂತರ ಮಾಡಿದರೆ ಸಾರ್ವಜನಿಕರಿಗೆ ತೀವ್ರವಾಗಿ ತೊಂದರೆ ಉಂಟಾಗುತ್ತದೆ. ಬೆಂಗಳೂರು ನಗರಕ್ಕೆ ತೆರಳಿ ದೂರು ದಾಖಲಿಸಲು ಅನಾನುಕೂಲವಾಗುತ್ತದೆ. ಆದ್ದರಿಂದ, ಮಹಿಳಾ ಪೊಲೀಸ್ ಠಾಣೆಯು ದೊಡ್ಡಬಳ್ಳಾಪುರದಲ್ಲೇ ಕಾರ್ಯ ನಿರ್ವಹಿಸುವುದು ಸೂಕ್ತ ಎಂದು ಆಗ್ರಹಿಸಿ ಸಾರ್ವಜನಿಕ ಹಿತಾಸಕ್ತಿಯಿಂದ ಠಾಣೆಯನ್ನು ಸ್ಥಳಾಂತರ ಮಾಡದಂತೆ ಮನವಿ ಮಾಡಿದರು.

ನಂತರ ಮಾತನಾಡಿದ ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರ ಚಂದ್ರಶೇಖರ್.ಡಿ ಉಪ್ಪಾರ್ ಮಾತನಾಡಿ, ದೊಡ್ಡಬಳ್ಳಾಪುರದಲ್ಲಿ ಆಗಬೇಕಿದ್ದ ಆರ್.ಟಿ.ಓ ಕಚೇರಿ, ಜಿಲ್ಲಾ ಪ್ರದಾನ ಅಂಚೆ ಕಚೇರಿ, ಕೆ.ಎಸ್.ಆರ್.ಟಿ.ಸಿ. ಬಸ್ ಡಿಪೋ ಇನ್ನಿತರ ಕಚೇರಿಗಳು ಪಕ್ಕದ ತಾಲ್ಲೂಕುಗಳ ಪಾಲಾಗಿದೆ. ಸಾರ್ವಜನಿಕ ಹಿತಾಸಕ್ತಿಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಮಹಿಳಾ ಪೊಲೀಸ್ ಠಾಣೆ ಸ್ಥಳಾಂತರಗೊಳಿಸುವ ನಡೆ ಸರಿಯಲ್ಲ ಎಂದರು.

ಮಹಿಳಾ ಠಾಣೆಗೆ ಸ್ವಂತ ಕಟ್ಟಡಕ್ಕೆ ಅಗತ್ಯವಿರುವ ಸರ್ಕಾರಿ ಜಮೀನುಗಳು ನಗರದ ಹಲವಾರು ಕಡೆ ಲಭ್ಯವಿದ್ದು, ಇಲಾಖೆಯ ಮುಖ್ಯಸ್ಥರು ಸೂಕ್ತ ಸ್ಥಳವನ್ನು ಗುರುತಿಸಿ ಸ್ವಂತ ಕಟ್ಟಡವನ್ನು ನಿರ್ಮಿಸಿ ಮಹಿಳಾ ಠಾಣೆಯನ್ನು ಶಾಶ್ವತವಾಗಿ ದೊಡ್ಡಬಳ್ಳಾಪುರದಲ್ಲೇ ಉಳಿಸುವಂತೆ ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಡಿ.ವೈ.ಎಸ್ ರವಿ.ಪಿ ರವರು ಮಹಿಳಾ ಪೊಲೀಸ್ ಠಾಣೆ ಸ್ಥಳಾಂತರ ವಿಚಾರವು ಮೌಖಿಕವಾಗಿ ತಿಳಿಸಿದ್ದು. ಮನವಿಯನ್ನು ಮೇಲಧಿಕಾರಿಗಳಿಗೆ ರವಾನೆ ಮಾಡಿ ಠಾಣೆ ಉಳಿಸಲು ಸಹಕರಿಸುವ ಭರವಸೆ ನೀಡಿದರು.

ಈ ವೇಳೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಕೊತ್ತೂರಪ್ಪ, ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ (ನೆಲ್ಲುಗುದಿಗೆ) ಪ್ರದೀಪ್, ಮಂಜನಾಥ್, ಮನುಕುಮಾರ್, ಗಂಗರಾಜು, ರಮೇಶ್ ಬಾಬು, ಶಿವರಾಜ‌ ನೇಸರ ಉಪಸ್ಥಿತರಿದ್ದರು.

Ramesh Babu

Journalist

Recent Posts

ಡಿಕೆ 100 ದಿನ, ನೆನಪಾದ ಮೋದಿ…

ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…

3 hours ago

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

14 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

19 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

2 days ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago