ಬಸ್ ಕಂಡಕ್ಟರ್ ಮಹಿಳಾ ಪ್ರಯಾಣಿಕರೊಡನೆ ಅಸಭ್ಯವಾಗಿ ವರ್ತನೆ ಮಾಡಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗುತ್ತಿದೆ.
ಇತ್ತ ನಿರ್ವಾಹಕ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ವಿಷಯ ತಿಳಿಯುತ್ತಿದ್ದಂತೆ ಮಂಗಳೂರು ಪೊಲೀಸರು ನಿರ್ವಾಹಕರನ್ನು ವಶಕ್ಕೆ ಪಡೆದಿದ್ದು, ಸುಮೋಟೊ ಕೇಸ್ ದಾಖಲಿಸಿ ಎಫ್ ಐಆರ್ ಮಾಡಿದ್ದಾರೆ.
ಇನ್ನು ಬೆಂಗಳೂರಿನಲ್ಲಿರುವ ಸಾರಿಗೆ ಕೇಂದ್ರ ಕಚೇರಿಯಿಂದ ಈತನ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಲು ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಡಿಸಿ ನಿರ್ವಾಹಕನ ಅಮಾನತು ಆದೇಶ ಪ್ರಕ್ರಿಯೆ ನಡೆಸಿದ್ದಾರೆ.
ಮಹಿಳಾ ಪ್ರಯಾಣಿಕರ ಮೇಲೆ ಕೈ ಹಾಕುತ್ತಿರುವ ಸರ್ಕಾರಿ ಬಸ್ ನಿರ್ವಾಹಕ… ಇಂತಹ ಕಾಮುಕ ಕಂಡಕ್ಟರನ್ನು ಕೂಡಲೆ ಕೆಲಸದಿಂದ ಅಮಾನತು ಮಾಡಿ ಕಠಿಣ ಕಾನೂನಿನ ಅಡಿಯಲ್ಲಿ ಬಂಧಿಸಿ… ಇಲ್ಲದಿದ್ದಲ್ಲಿ ಸಾರ್ವಜನಿಕರಿಂದ ಗೂಸ ಬೀಳೋದಂತೂ ಗ್ಯಾರಂಟಿ ಎಂದು ಎಚ್ಚರಿಕೆ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಲ್ಲದೆ ಈತ ಕೆಎಸ್ ಆರ್ ಟಿಸಿ ಮಂಗಳೂರು ವಿಭಾಗದ ಕಂಡಕ್ಟರ್ ಆಗಿರುತ್ತಾನೆ.. ಇವನ ಬಗ್ಗೆ ಹೆಣ್ಣು ಮಕ್ಕಳು ಜಾಗರೂಕರಾಗಿರಿ… ಮಂಗಳೂರಿನ ಪೋಲೀಸ್ ಇಲಾಖೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದರು.
ಅಂದು ಫ್ರೆಂಡ್ ಬರ್ತಡೇ ಇತ್ತು. ಒಂದೇ ಊರಿನ ಐದು ಮಂದಿ, ಒಬ್ಬ ಕೋಲಾರದ ಮಾಲೂರು ಮೂಲದವನು ಸೇರಿ ಬರ್ತಡೇ ಬಾಯ್…
ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…