ಬಸ್ ಕಂಡಕ್ಟರ್ ಮಹಿಳಾ ಪ್ರಯಾಣಿಕರೊಡನೆ ಅಸಭ್ಯವಾಗಿ ವರ್ತನೆ ಮಾಡಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗುತ್ತಿದೆ.
ಇತ್ತ ನಿರ್ವಾಹಕ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ವಿಷಯ ತಿಳಿಯುತ್ತಿದ್ದಂತೆ ಮಂಗಳೂರು ಪೊಲೀಸರು ನಿರ್ವಾಹಕರನ್ನು ವಶಕ್ಕೆ ಪಡೆದಿದ್ದು, ಸುಮೋಟೊ ಕೇಸ್ ದಾಖಲಿಸಿ ಎಫ್ ಐಆರ್ ಮಾಡಿದ್ದಾರೆ.
ಇನ್ನು ಬೆಂಗಳೂರಿನಲ್ಲಿರುವ ಸಾರಿಗೆ ಕೇಂದ್ರ ಕಚೇರಿಯಿಂದ ಈತನ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಲು ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಡಿಸಿ ನಿರ್ವಾಹಕನ ಅಮಾನತು ಆದೇಶ ಪ್ರಕ್ರಿಯೆ ನಡೆಸಿದ್ದಾರೆ.
ಮಹಿಳಾ ಪ್ರಯಾಣಿಕರ ಮೇಲೆ ಕೈ ಹಾಕುತ್ತಿರುವ ಸರ್ಕಾರಿ ಬಸ್ ನಿರ್ವಾಹಕ… ಇಂತಹ ಕಾಮುಕ ಕಂಡಕ್ಟರನ್ನು ಕೂಡಲೆ ಕೆಲಸದಿಂದ ಅಮಾನತು ಮಾಡಿ ಕಠಿಣ ಕಾನೂನಿನ ಅಡಿಯಲ್ಲಿ ಬಂಧಿಸಿ… ಇಲ್ಲದಿದ್ದಲ್ಲಿ ಸಾರ್ವಜನಿಕರಿಂದ ಗೂಸ ಬೀಳೋದಂತೂ ಗ್ಯಾರಂಟಿ ಎಂದು ಎಚ್ಚರಿಕೆ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಲ್ಲದೆ ಈತ ಕೆಎಸ್ ಆರ್ ಟಿಸಿ ಮಂಗಳೂರು ವಿಭಾಗದ ಕಂಡಕ್ಟರ್ ಆಗಿರುತ್ತಾನೆ.. ಇವನ ಬಗ್ಗೆ ಹೆಣ್ಣು ಮಕ್ಕಳು ಜಾಗರೂಕರಾಗಿರಿ… ಮಂಗಳೂರಿನ ಪೋಲೀಸ್ ಇಲಾಖೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…