ಬಸ್ ಕಂಡಕ್ಟರ್ ಮಹಿಳಾ ಪ್ರಯಾಣಿಕರೊಡನೆ ಅಸಭ್ಯವಾಗಿ ವರ್ತನೆ ಮಾಡಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗುತ್ತಿದೆ.
ಇತ್ತ ನಿರ್ವಾಹಕ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ವಿಷಯ ತಿಳಿಯುತ್ತಿದ್ದಂತೆ ಮಂಗಳೂರು ಪೊಲೀಸರು ನಿರ್ವಾಹಕರನ್ನು ವಶಕ್ಕೆ ಪಡೆದಿದ್ದು, ಸುಮೋಟೊ ಕೇಸ್ ದಾಖಲಿಸಿ ಎಫ್ ಐಆರ್ ಮಾಡಿದ್ದಾರೆ.
ಇನ್ನು ಬೆಂಗಳೂರಿನಲ್ಲಿರುವ ಸಾರಿಗೆ ಕೇಂದ್ರ ಕಚೇರಿಯಿಂದ ಈತನ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಲು ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಡಿಸಿ ನಿರ್ವಾಹಕನ ಅಮಾನತು ಆದೇಶ ಪ್ರಕ್ರಿಯೆ ನಡೆಸಿದ್ದಾರೆ.
ಮಹಿಳಾ ಪ್ರಯಾಣಿಕರ ಮೇಲೆ ಕೈ ಹಾಕುತ್ತಿರುವ ಸರ್ಕಾರಿ ಬಸ್ ನಿರ್ವಾಹಕ… ಇಂತಹ ಕಾಮುಕ ಕಂಡಕ್ಟರನ್ನು ಕೂಡಲೆ ಕೆಲಸದಿಂದ ಅಮಾನತು ಮಾಡಿ ಕಠಿಣ ಕಾನೂನಿನ ಅಡಿಯಲ್ಲಿ ಬಂಧಿಸಿ… ಇಲ್ಲದಿದ್ದಲ್ಲಿ ಸಾರ್ವಜನಿಕರಿಂದ ಗೂಸ ಬೀಳೋದಂತೂ ಗ್ಯಾರಂಟಿ ಎಂದು ಎಚ್ಚರಿಕೆ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಲ್ಲದೆ ಈತ ಕೆಎಸ್ ಆರ್ ಟಿಸಿ ಮಂಗಳೂರು ವಿಭಾಗದ ಕಂಡಕ್ಟರ್ ಆಗಿರುತ್ತಾನೆ.. ಇವನ ಬಗ್ಗೆ ಹೆಣ್ಣು ಮಕ್ಕಳು ಜಾಗರೂಕರಾಗಿರಿ… ಮಂಗಳೂರಿನ ಪೋಲೀಸ್ ಇಲಾಖೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದರು.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…