ವೈಯಕ್ತಿಕ ಫಲಾನುಭವಿಗಳಿಗೆ ಸಹಾಯಧನವನ್ನು ನೀಡಲು ವಿಶೇಷವಾಗಿ 5% ಅನುದಾನವನ್ನು ನೀಡಲು ಭರವಸೆ ನೀಡಿ ಹಾಗೂ ಇನ್ನೂ ಹೆಚ್ಚಿನದಾಗಿ ಅನುದಾನ ಮತ್ತು ಸೌಲಭ್ಯಗಳನ್ನು ಕಲ್ಪಿಸಲಾಗುವುದು ಹಾಗೂ ಶಾಲಾ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲು ಇನ್ನಷ್ಟು ಸೌಲಭ್ಯಗಳನ್ನು ಒದಗಿಸಲಾಗುವುದು ಮತ್ತು ಕುಂದು ಕೊರತೆಗಳನ್ನು ಶೀಘ್ರವಾಗಿ ಬಗೆಹರಿಸಲಾಗುತ್ತದೆ ಎಂದು ಕಸಘಟ್ಟಪುರ ಗ್ರಾಮ ಪಂಚಾಯತಿ ಅಧ್ಯಕ್ಷೆ ಸಂದ್ಯಾ ದೇವರಾಜ್ ಹೇಳಿದರು.
ಇಂದು ಯಲಹಂಕ ತಾಲ್ಲೂಕು ಪಂಚಾಯತಿ ವ್ಯಾಪ್ತಿಯ ಕಸಘಟ್ಟಪುರ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ನಡೆದ ಮಹಿಳಾ, ಮಕ್ಕಳ ಮತ್ತು ವಿಶೇಷಚೇತನರ ಸಮನ್ವಯ ವಿಶೇಷ ಗ್ರಾಮ ಸಭೆ ಕಾರ್ಯಕ್ರಮದಲ್ಲಿ ಭಾಗವಹಸಿ ಮಾತನಾಡಿದರು.
ಈ ವೇಳೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಮೇಶ್ ಸಿ, ಆಹಾರ ಮತ್ತು ನಾಗರೀಕ ಸರಬರಾಜು ಜಂಟಿ ನಿರ್ದೇಶಕರಾದ ಜಿ. ಸೌಮ್ಯ, ಹಾಗೂ ಸರ್ವ ಸದಸ್ಯರು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಾಜಾಶಂಕರ್ ಬಿ.ಎನ್, ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು, ಚುನಾಯಿತ ಪ್ರತಿನಿಧಿಗಳು, ಶಾಲಾ ಮುಖ್ಯಸ್ಥರು, ಶಿಕ್ಷಕರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…