ಮಹಿಳಾ ಸಬಲೀಕರಣಕ್ಕೆ ಸ್ವ ಉದ್ಯೋಗ ಆಧಾರಿತ ತರಬೇತಿ ಅಗತ್ಯ- ಜಿ.ಪಂ. ಯೋಜನಾ ನಿರ್ದೇಶಕ ವಿಠ್ಠಲ್‌ ಕಾವಳೆ

ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಹಾಗೂ ಸಶಕ್ತಿಕರಣವಾಗಲು ಸ್ವ ಉದ್ಯೋಗಾಧಾರಿತ ತರಬೇತಿಗಳು ಅಗತ್ಯವಿದ್ದು, ಮಹಿಳಾ ಸಬಲೀಕರಣಕ್ಕೆ ಸ್ವ ಉದ್ಯೋಗ ಆಧಾರಿತ ತರಬೇತಿಗಳು ಸಹಕಾರ ನೀಡುತ್ತವೆ ಇಂತಹ ತರಬೇತಿಗಳನ್ನು ರುಡ್‌ಸೆಟ್‌ ಸಂಸ್ಥೆಯಲ್ಲಿ ಉಚಿತವಾಗಿ ಪಡೆಯಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕರಾದ ವಿಠ್ಠಲ್‌ ಕಾವಳೆ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಎನ್‌ಆರ್‌ಎಲ್‌ಎಂ ಹಾಗೂ ರುಡ್‌ಸೆಟ್‌ ಸಂಸ್ಥೆಯ ಸಹಯೋಗದೊಂದಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಸಂಜೀವಿನಿ ಸ್ವಸಹಾಯ ಸಂಘದ ಮಹಿಳೆಯರಿಗಾಗಿ ಆಯೋಜಿಸಲಾಗಿದ್ದ 13 ದಿನಗಳ ಜೂಟ್‌ ಉತ್ಪನ್ನಗಳ ತಯಾರಿಕಾ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಅವರು ಮಾತನಾಡಿದರು.

ಜೂಟ್‌ ಉತ್ಪನ್ನಗಳು ಬಹುಬೇಡಿಕೆಯನ್ನು ಹೊಂದಿದ್ದು, ಪ್ಲಾಸ್ಟಿಕ್‌ ಮುಕ್ತ ಪರಿಸರಕ್ಕೆ ಇದು ಕೈಜೋಡಿಸಲಿದೆ. ಅಂತೆಯೇ ಇದು ಪರಿಸರಸ್ನೇಹಿಯಾಗಿದ್ದು, ದಿನನಿತ್ಯದ ಬಳಕೆಗೆ ವಿವಿಧ ಮಾದರಿಗಳ ಜೂಟ್‌ ಆಧಾರಿತ ಉತ್ಪನ್ನಗಳನ್ನು ಬಳಸಬಹುದಾಗಿದೆ ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಎನ್‌ಆರ್‌ಎಲ್‌ಎಂ ವಿಭಾಗದ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ಮಂಜುಳಾ ಅವರು ಮಾತನಾಡಿ, ತರಬೇತಿ ಪೂರ್ಣಗೊಳಿಸಿರುವ ಎಲ್ಲಾ ಮಹಿಳೆಯರು ತಮ್ಮ ಮನೆಗಳಲ್ಲಿ ವೈಯಕ್ತಿಕವಾಗಿ ಅಥವಾ ಗುಂಪು ಚಟುವಟಿಕೆಗಳ ಮೂಲಕ ಜೂಟ್‌ ಆಧಾರಿತ ಉತ್ಪನ್ನ ತಯಾರಿಸಿ, ಆದಾಯ ಹೊಂದಬಹುದು ಎಂದರಲ್ಲದೆ, ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ನಡೆಯುವ ಮಾಸಿಕ ಸಂತೆಗಳು, ವ್ಯಾಪಾರ ಮೇಳಗಳಲ್ಲಿ ಜೂಟ್‌ ಉತ್ಪನ್ನಗಳನ್ನು ಮಾರಾಟ ಮಾಡಲು ವ್ಯವಸ್ಥೆ ಮಾಡಲಾಗುವುದೆಂದು ತಿಳಿಸಿದರು.

ರುಡ್‌ಸೆಟ್‌ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಅವರು ಮಾತನಾಡಿ, ಸಂಸ್ಥೆಯಲ್ಲಿ ತರಬೇತಿ ಪಡೆಯುವುದು ಮಾತ್ರವಲ್ಲದೇ, ಬ್ಯಾಂಕಿನಲ್ಲಿ ಸಾಲ ಪಡೆದು, ಸ್ವ ಉದ್ಯೋಗ ಆರಂಭಿಸುವ ಮೂಲಕ ಸ್ವಾವಲಂಬಿಗಳಾಗಬೇಕು ಹಾಗೂ ತರಬೇತಿ ಮೂಲಕ ಪಡೆದ ಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರಲ್ಲದೆ, ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಹಲವಾರು ಕೆಲಸಗಳನ್ನು ಒಟ್ಟಿಗೆ ನಿಭಾಯಿಸುವ ಅನನ್ಯ ಶಕ್ತಿ ಕೇವಲ ಮಹಿಳೆಯರಿಗೆ ಮಾತ್ರ ಇರುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕರಾದ ವಿಠ್ಠಲ್‌ ಕಾವಳೆ ಅವರು ಸಾಂಕೇತಿಕವಾಗಿ ಪ್ರಶಿಕ್ಷಣಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿದರು.

ಸಮಾರಂಭದಲ್ಲಿ ಜಿಲ್ಲಾ ಪಂಚಾಯಿತಿ, ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯಿತಿ ಹಾಗೂ ಹೊಸಹಳ್ಳಿ ಗ್ರಾಮ ಪಂಚಾಯಿತಿಯ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿನಿಧಿಗಳು, ರುಡ್‌ಸೆಟ್ ಸಂಸ್ಥೆಯ ಉಪನ್ಯಾಸಕಿ ವಿದ್ಯಾ ಹೊಸಮನಿ ಸೇರಿದಂತೆ ಜೂಟ್‌ ಉತ್ಪನ್ನ ತಯಾರಿಕಾ ತರಬೇತಿಯ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

9 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

10 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

18 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago