ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಮಹಿಳೆಯ ಒಡವೆ ಮತ್ತು ಹಣವನ್ನು ಕಳುವು ಮಾಡುತ್ತಿದ್ದ ಮೂವರು ಕಳ್ಳಿಯರನ್ನು ಪತ್ತೆ ಮಾಡಿ ಬಂಧಿಸಿ ಒಡವೆಗಳನ್ನು ಮತ್ತು ಹಣವನ್ನು ಗೌರಿಬಿದನೂರು ನಗರ ಪೊಲೀಸರು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ನ.16ರಂದು ಶಾಂತಕುಮಾರಿ ಬೆಂಗಳೂರಿಗೆ ಹೋಗಲು ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವ ವೇಳೆ ಕತ್ತಿನಲ್ಲಿದ್ದ ಸುಮಾರು 50 ಗ್ರಾಂ ತೂಕದ ಎರಡು ಎಳೆಯ ಬಂಗಾರದ ಚೈನ್ ಅನ್ನು ಬುರ್ಕಾ ಧರಿಸಿದ್ದ ಮಹಿಳೆಯರು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರು ದಾಖಲಿಸಿದ್ದರು.
ಇನ್ನು ಡಿ.6 ರಂದು ರತ್ನಮ್ಮ ಬೆಂಗಳೂರಿಗೆ ಹೋಗಲು ಬಸ್ ಹತ್ತುವ ವೇಳೆ ಬ್ಯಾಗ್ ನಲ್ಲಿದ್ದ ಒಂದು ಲಕ್ಷ ರೂ. ಹಣವನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುವುದಾಗಿ ದೂರು ನೀಡಿದ್ದರು.
ದೂರು ದಾಖಲಿಸಿಕೊಂಡಿದ್ದ ನಗರಠಾಣೆಯ ಪೊಲೀಸರು ನಗರದ ಕೆ.ಎಸ್.ಆರ್.ಟಿ.ಸಿ ಬಸ್ಸ್ ನಿಲ್ದಾಣದ ಸಿ.ಸಿ ಟಿವಿ ದೃಶ್ಯಾವಳಿಗಳನ್ನು ಆಧರಿಸಿ ಮತ್ತು ಇತರೆ ಸಾಕ್ಷ್ಯಗಳನ್ನು ಸಂಗ್ರಹಿಸಿ ಕಳ್ಳಿಯರ ಗುರುತು ಪತ್ತೆ ಮಾಡಿ ಕಳ್ಳಿಯರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ರೇಖಾ ಬಾಯಿ, ರೋಜಾ, ಕರೀನಾ ಎಂದು ತಿಳಿದು ಬಂದಿದೆ.
ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸಿದ ವೇಳೆ ತುಮಕೂರು, ಹೊಳೆನರಸೀಪುರ, ಹಲಸೂರು, ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.
ಸಿಪಿಐ ಸತ್ಯನಾರಾಯಣ್, ಪಿ.ಎಸ್.ಐ ಚಂದ್ರಕಲಾ, ಸಿಬ್ಬಂದಿ ಶ್ರೀರಾಮಯ್ಯ, ಪುಷ್ಪ, ಶಿವಶೇಖರ, ಮಹಂತೇಶ್, ಗ್ರಾಮಾಂತರ ಠಾಣೆಯ ಸಿಬ್ಬಂದಿ ರಿಜ್ವಾನ್, ಶ್ರೀನಿವಾಸರೆಡ್ಡಿ ಮತ್ತು ಅಶ್ವತ್ಥಪ್ಪ ಕಾರ್ಯಕ್ಷಮತೆಗೆ ಜಿಲ್ಲಾವರಿಷ್ಠಾಧಿಕಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಚರಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿರುವ ಘಟನೆ ದೇವನಹಳ್ಳಿ ಪಟ್ಟಣದ ಸ್ವರ್ಣಾದ್ರಿ ಹೋಟೆಲ್ ಮುಂಭಾಗದಲ್ಲಿ ನಡೆದಿದೆ... ಮಹಿಳೆ…
ಕಳೆದ ಎರಡ್ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್ಗಾಗಿ ಆಗ್ರಹಿಸಿ ಮಾ.6ರಂದು ಬೆಂಗಳೂರಿನ…
ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…