ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಮಹಿಳೆಯ ಒಡವೆ ಮತ್ತು ಹಣವನ್ನು ಕಳುವು ಮಾಡುತ್ತಿದ್ದ ಮೂವರು ಕಳ್ಳಿಯರನ್ನು ಪತ್ತೆ ಮಾಡಿ ಬಂಧಿಸಿ ಒಡವೆಗಳನ್ನು ಮತ್ತು ಹಣವನ್ನು ಗೌರಿಬಿದನೂರು ನಗರ ಪೊಲೀಸರು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ನ.16ರಂದು ಶಾಂತಕುಮಾರಿ ಬೆಂಗಳೂರಿಗೆ ಹೋಗಲು ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವ ವೇಳೆ ಕತ್ತಿನಲ್ಲಿದ್ದ ಸುಮಾರು 50 ಗ್ರಾಂ ತೂಕದ ಎರಡು ಎಳೆಯ ಬಂಗಾರದ ಚೈನ್ ಅನ್ನು ಬುರ್ಕಾ ಧರಿಸಿದ್ದ ಮಹಿಳೆಯರು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರು ದಾಖಲಿಸಿದ್ದರು.
ಇನ್ನು ಡಿ.6 ರಂದು ರತ್ನಮ್ಮ ಬೆಂಗಳೂರಿಗೆ ಹೋಗಲು ಬಸ್ ಹತ್ತುವ ವೇಳೆ ಬ್ಯಾಗ್ ನಲ್ಲಿದ್ದ ಒಂದು ಲಕ್ಷ ರೂ. ಹಣವನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುವುದಾಗಿ ದೂರು ನೀಡಿದ್ದರು.
ದೂರು ದಾಖಲಿಸಿಕೊಂಡಿದ್ದ ನಗರಠಾಣೆಯ ಪೊಲೀಸರು ನಗರದ ಕೆ.ಎಸ್.ಆರ್.ಟಿ.ಸಿ ಬಸ್ಸ್ ನಿಲ್ದಾಣದ ಸಿ.ಸಿ ಟಿವಿ ದೃಶ್ಯಾವಳಿಗಳನ್ನು ಆಧರಿಸಿ ಮತ್ತು ಇತರೆ ಸಾಕ್ಷ್ಯಗಳನ್ನು ಸಂಗ್ರಹಿಸಿ ಕಳ್ಳಿಯರ ಗುರುತು ಪತ್ತೆ ಮಾಡಿ ಕಳ್ಳಿಯರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ರೇಖಾ ಬಾಯಿ, ರೋಜಾ, ಕರೀನಾ ಎಂದು ತಿಳಿದು ಬಂದಿದೆ.
ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸಿದ ವೇಳೆ ತುಮಕೂರು, ಹೊಳೆನರಸೀಪುರ, ಹಲಸೂರು, ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.
ಸಿಪಿಐ ಸತ್ಯನಾರಾಯಣ್, ಪಿ.ಎಸ್.ಐ ಚಂದ್ರಕಲಾ, ಸಿಬ್ಬಂದಿ ಶ್ರೀರಾಮಯ್ಯ, ಪುಷ್ಪ, ಶಿವಶೇಖರ, ಮಹಂತೇಶ್, ಗ್ರಾಮಾಂತರ ಠಾಣೆಯ ಸಿಬ್ಬಂದಿ ರಿಜ್ವಾನ್, ಶ್ರೀನಿವಾಸರೆಡ್ಡಿ ಮತ್ತು ಅಶ್ವತ್ಥಪ್ಪ ಕಾರ್ಯಕ್ಷಮತೆಗೆ ಜಿಲ್ಲಾವರಿಷ್ಠಾಧಿಕಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…