ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಮಹಿಳೆಯ ಒಡವೆ ಮತ್ತು ಹಣವನ್ನು ಕಳುವು ಮಾಡುತ್ತಿದ್ದ ಮೂವರು ಕಳ್ಳಿಯರನ್ನು ಪತ್ತೆ ಮಾಡಿ ಬಂಧಿಸಿ ಒಡವೆಗಳನ್ನು ಮತ್ತು ಹಣವನ್ನು ಗೌರಿಬಿದನೂರು ನಗರ ಪೊಲೀಸರು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ನ.16ರಂದು ಶಾಂತಕುಮಾರಿ ಬೆಂಗಳೂರಿಗೆ ಹೋಗಲು ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವ ವೇಳೆ ಕತ್ತಿನಲ್ಲಿದ್ದ ಸುಮಾರು 50 ಗ್ರಾಂ ತೂಕದ ಎರಡು ಎಳೆಯ ಬಂಗಾರದ ಚೈನ್ ಅನ್ನು ಬುರ್ಕಾ ಧರಿಸಿದ್ದ ಮಹಿಳೆಯರು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರು ದಾಖಲಿಸಿದ್ದರು.
ಇನ್ನು ಡಿ.6 ರಂದು ರತ್ನಮ್ಮ ಬೆಂಗಳೂರಿಗೆ ಹೋಗಲು ಬಸ್ ಹತ್ತುವ ವೇಳೆ ಬ್ಯಾಗ್ ನಲ್ಲಿದ್ದ ಒಂದು ಲಕ್ಷ ರೂ. ಹಣವನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುವುದಾಗಿ ದೂರು ನೀಡಿದ್ದರು.
ದೂರು ದಾಖಲಿಸಿಕೊಂಡಿದ್ದ ನಗರಠಾಣೆಯ ಪೊಲೀಸರು ನಗರದ ಕೆ.ಎಸ್.ಆರ್.ಟಿ.ಸಿ ಬಸ್ಸ್ ನಿಲ್ದಾಣದ ಸಿ.ಸಿ ಟಿವಿ ದೃಶ್ಯಾವಳಿಗಳನ್ನು ಆಧರಿಸಿ ಮತ್ತು ಇತರೆ ಸಾಕ್ಷ್ಯಗಳನ್ನು ಸಂಗ್ರಹಿಸಿ ಕಳ್ಳಿಯರ ಗುರುತು ಪತ್ತೆ ಮಾಡಿ ಕಳ್ಳಿಯರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ರೇಖಾ ಬಾಯಿ, ರೋಜಾ, ಕರೀನಾ ಎಂದು ತಿಳಿದು ಬಂದಿದೆ.
ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸಿದ ವೇಳೆ ತುಮಕೂರು, ಹೊಳೆನರಸೀಪುರ, ಹಲಸೂರು, ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.
ಸಿಪಿಐ ಸತ್ಯನಾರಾಯಣ್, ಪಿ.ಎಸ್.ಐ ಚಂದ್ರಕಲಾ, ಸಿಬ್ಬಂದಿ ಶ್ರೀರಾಮಯ್ಯ, ಪುಷ್ಪ, ಶಿವಶೇಖರ, ಮಹಂತೇಶ್, ಗ್ರಾಮಾಂತರ ಠಾಣೆಯ ಸಿಬ್ಬಂದಿ ರಿಜ್ವಾನ್, ಶ್ರೀನಿವಾಸರೆಡ್ಡಿ ಮತ್ತು ಅಶ್ವತ್ಥಪ್ಪ ಕಾರ್ಯಕ್ಷಮತೆಗೆ ಜಿಲ್ಲಾವರಿಷ್ಠಾಧಿಕಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಡೇ ಕೇರ್........, ಮುದ್ದು ಕಂದಮ್ಮಗಳ ಹೊಣೆ ಕೆಲಸಗಾರರದ್ದೋ, ನಮ್ಮದೋ...... ಬೆಂಗಳೂರಿನಲ್ಲಿ ಪುಟ್ಟ ಮಕ್ಕಳನ್ನು ಆರೈಕೆ ಮಾಡುವ ಡೇಕೇರ್ ಎಂಬ ಪರಿಕಲ್ಪನೆಯ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ…
ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ…
ಚಿಂತಾಮಣಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹ ಕೊನೆಗೆ ಭೀಕರ ತಿರುವು ಪಡೆದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ…
ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…