ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಒಡವೆ ಮತ್ತು ಹಣವನ್ನು ಕಳುವು ಮಾಡುತ್ತಿದ್ದ ಮೂವರು ಕಳ್ಳಿಯರ ಬಂಧನ

ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಮಹಿಳೆಯ ಒಡವೆ ಮತ್ತು ಹಣವನ್ನು ಕಳುವು ಮಾಡುತ್ತಿದ್ದ ಮೂವರು ಕಳ್ಳಿಯರನ್ನು ಪತ್ತೆ ಮಾಡಿ ಬಂಧಿಸಿ ಒಡವೆಗಳನ್ನು ಮತ್ತು ಹಣವನ್ನು ಗೌರಿಬಿದನೂರು ನಗರ ಪೊಲೀಸರು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ನ.16ರಂದು ಶಾಂತಕುಮಾರಿ ಬೆಂಗಳೂರಿಗೆ ಹೋಗಲು ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವ ವೇಳೆ ಕತ್ತಿನಲ್ಲಿದ್ದ ಸುಮಾರು 50 ಗ್ರಾಂ ತೂಕದ ಎರಡು ಎಳೆಯ ಬಂಗಾರದ ಚೈನ್ ಅನ್ನು ಬುರ್ಕಾ ಧರಿಸಿದ್ದ ಮಹಿಳೆಯರು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರು ದಾಖಲಿಸಿದ್ದರು.

ಇನ್ನು ಡಿ.6 ರಂದು ರತ್ನಮ್ಮ ಬೆಂಗಳೂರಿಗೆ ಹೋಗಲು ಬಸ್ ಹತ್ತುವ ವೇಳೆ ಬ್ಯಾಗ್ ನಲ್ಲಿದ್ದ ಒಂದು ಲಕ್ಷ ರೂ. ಹಣವನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುವುದಾಗಿ ದೂರು ನೀಡಿದ್ದರು.

ದೂರು ದಾಖಲಿಸಿಕೊಂಡಿದ್ದ ನಗರಠಾಣೆಯ ಪೊಲೀಸರು ನಗರದ ಕೆ.ಎಸ್.ಆರ್.ಟಿ.ಸಿ ಬಸ್ಸ್ ನಿಲ್ದಾಣದ ಸಿ.ಸಿ ಟಿವಿ ದೃಶ್ಯಾವಳಿಗಳನ್ನು ಆಧರಿಸಿ ಮತ್ತು ಇತರೆ ಸಾಕ್ಷ್ಯಗಳನ್ನು ಸಂಗ್ರಹಿಸಿ ಕಳ್ಳಿಯರ ಗುರುತು ಪತ್ತೆ ಮಾಡಿ ಕಳ್ಳಿಯರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ರೇಖಾ ಬಾಯಿ, ರೋಜಾ, ಕರೀನಾ ಎಂದು ತಿಳಿದು ಬಂದಿದೆ.

ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸಿದ ವೇಳೆ ತುಮಕೂರು, ಹೊಳೆನರಸೀಪುರ, ಹಲಸೂರು, ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಸಿಪಿಐ ಸತ್ಯನಾರಾಯಣ್, ಪಿ.ಎಸ್.ಐ ಚಂದ್ರಕಲಾ, ಸಿಬ್ಬಂದಿ ಶ್ರೀರಾಮಯ್ಯ, ಪುಷ್ಪ, ಶಿವಶೇಖರ, ಮಹಂತೇಶ್, ಗ್ರಾಮಾಂತರ ಠಾಣೆಯ ಸಿಬ್ಬಂದಿ ರಿಜ್ವಾನ್, ಶ್ರೀನಿವಾಸರೆಡ್ಡಿ ಮತ್ತು ಅಶ್ವತ್ಥಪ್ಪ ಕಾರ್ಯಕ್ಷಮತೆಗೆ ಜಿಲ್ಲಾವರಿಷ್ಠಾಧಿಕಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

11 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

1 day ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago