ದೊಡ್ಡಬಳ್ಳಾಪುರ: ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಧಾನ್ ಫೌಂಡೇಷನ್ ಸಂಸ್ಥೆಯು ದೇಶದ 14 ರಾಜ್ಯಗಳ 15 ಲಕ್ಷ ಮಹಿಳೆಯರ ಜೊತೆ ಕೆಲಸ ಮಾಡುತ್ತಿದೆ ಎಂದು ಧಾನ್ ಫೌಂಡೇಷನ್ ಸಂಸ್ಥೆ ರಾಮನಗರ ವಲಯ ಸಂಯೋಜಕ ರಾಘವೇಂದ್ರ ಹೇಳಿದರು.
ಅವರು ನಗರದ ಡಾ.ರಾಜ್ಕುಮಾರ್ ಕಲಾ ಮಂದಿರದಲ್ಲಿ ಸೋಮವಾರ ನಡೆದ ಧಾನ್ ಫೌಂಡೇಷನ್ ರಾಮಗರ ವಲಯದ ಕಳಂಜಿಯಂ ಮಹಿಳಾ ಒಕ್ಕೂಟಗಳ ಸರ್ವ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.
ಆರ್ಥಿಕ ಸಾಕ್ಷರತೆ ಇಲ್ಲದೆ ಎಷ್ಟೇ ದೊಡ್ಡ ಪ್ರಮಾಣದಲ್ಲಿ ಸಾಲ ನೀಡಿದರು ಸಹ ಪ್ರಗತಿಯನ್ನು ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಮಹಿಳೆಯರಿಗೆ ಲೆಕ್ಕಪತ್ರಗಳ ನಿರ್ವಹಣೆ ಸೇರಿದಂತೆ ಹಣ ವಿನೊಯೋಗದ ಬಗ್ಗೆ ಮಾಹಿತಿಗಳನ್ನು ನೀಡಲಾಗುತ್ತಿದೆ. ಇದರಿಂದ ಮಹಿಳೆಯರು ನಷ್ಟಕ್ಕೆ ಒಳಗಾಗುವುದು ತಪ್ಪಲಿದೆ. ಹಾಗೆಯೇ ಸಂಸ್ಥೆಯು ಮಹಿಳಾ ಒಕ್ಕೂಟದ ಸದಸ್ಯರ ಮಕ್ಕಳ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿವೇತನ, ರೈತರ ಅನುಕೂಲಕ್ಕಾಗಿ ಕೆರೆ ಅಭಿವೃದ್ಧಿ ಸೇರಿದಂತೆ ಜನಪರವಾದ ಕೆಲಸಗಳನ್ನು ಮಾಡುತ್ತಿದೆ ಎಂದರು.
ನಗರದ ಯುನಿಯನ್ ಬ್ಯಾಂಕ್ ವ್ಯವಸ್ಥಾಪಕ ಸಂಜೀವ್ ಕುಮಾರ್ ಮಾತನಾಡಿ, ಬ್ಯಾಂಕ್ ವತಿಯಿಂದ ಮಹಿಳಾ ಒಕ್ಕೂಟಗಳ ಮೂಲಕ ಅವರ ಬೇಡಿಕೆಗೆ ತಕ್ಕಷ್ಟು ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಆದರೆ ಇದನ್ನು ಸದುಪಯೋಗ ಪಡಿಸಿಕೊಳ್ಳುವ ಕಡೆಗೆ ಪ್ರಥಮ ಆದ್ಯತೆ ನೀಡಬೇಕು. ಬ್ಯಾಂಕ್ಗಳು ಸಾಲ ನೀಡುವುದು ಬ್ಯಾಂಕಿನ ಅಭಿವೃದ್ಧಿಗಾಗಿ ಮಾತ್ರವೇ ಅಲ್ಲ, ದೇಶದ ಹಾಗೂ ಪ್ರಜೆಗಳು ಆರ್ಥಿಕವಾಗಿ ಪ್ರಗತಿಹೊಂದುವ ಉದ್ದೇಶ ಹೊಂದಲಾಗಿದೆ. ಸಕಾಲದಲ್ಲಿ ಸಾಲ ಮರು ಪಾವತಿ ಮಾಡುವ ಮೂಲಕ ಇತರರು ಸಾಲ ಪಡೆಯಲು ಅವಕಾಶ ಕಲ್ಪಿಸಬೇಕು ಎಂದರು.
ಸಭೆಯಲ್ಲಿ ವಿವಿಧ ಬ್ಯಾಂಕ್ಗಳ ವ್ಯವಸ್ಥಾಪಕರು ಸರ್ಕಾರದ ಸಾಲ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಒಕ್ಕೂಟದ ತಾಲ್ಲೂಕು ಅಧ್ಯಕ್ಷೆ ಹನುಮಕ್ಕ, ಸರಳಮ್ಮ ಹಾಗೂ ನಿರ್ದೇಶಕರು ಇದ್ದರು.
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…
ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…
" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…
ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…