ಮಹಿಳೆಯರಿಗೆ ಆರ್ಥಿಕ ಸಾಕ್ಷರತೆ ಅತ್ಯಗತ್ಯ- ರಾಘವೇಂದ್ರ

ದೊಡ್ಡಬಳ್ಳಾಪುರ: ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಧಾನ್ ಫೌಂಡೇಷನ್ ಸಂಸ್ಥೆಯು ದೇಶದ 14 ರಾಜ್ಯಗಳ 15 ಲಕ್ಷ ಮಹಿಳೆಯರ ಜೊತೆ ಕೆಲಸ ಮಾಡುತ್ತಿದೆ ಎಂದು ಧಾನ್ ಫೌಂಡೇಷನ್ ಸಂಸ್ಥೆ ರಾಮನಗರ ವಲಯ ಸಂಯೋಜಕ ರಾಘವೇಂದ್ರ ಹೇಳಿದರು.

ಅವರು ನಗರದ ಡಾ.ರಾಜ್ಕುಮಾರ್ ಕಲಾ ಮಂದಿರದಲ್ಲಿ ಸೋಮವಾರ ನಡೆದ ಧಾನ್ ಫೌಂಡೇಷನ್ ರಾಮಗರ ವಲಯದ ಕಳಂಜಿಯಂ ಮಹಿಳಾ ಒಕ್ಕೂಟಗಳ ಸರ್ವ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.

ಆರ್ಥಿಕ ಸಾಕ್ಷರತೆ ಇಲ್ಲದೆ ಎಷ್ಟೇ ದೊಡ್ಡ ಪ್ರಮಾಣದಲ್ಲಿ ಸಾಲ ನೀಡಿದರು ಸಹ ಪ್ರಗತಿಯನ್ನು ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಮಹಿಳೆಯರಿಗೆ ಲೆಕ್ಕಪತ್ರಗಳ ನಿರ್ವಹಣೆ ಸೇರಿದಂತೆ ಹಣ ವಿನೊಯೋಗದ ಬಗ್ಗೆ ಮಾಹಿತಿಗಳನ್ನು ನೀಡಲಾಗುತ್ತಿದೆ. ಇದರಿಂದ ಮಹಿಳೆಯರು ನಷ್ಟಕ್ಕೆ ಒಳಗಾಗುವುದು ತಪ್ಪಲಿದೆ. ಹಾಗೆಯೇ ಸಂಸ್ಥೆಯು ಮಹಿಳಾ ಒಕ್ಕೂಟದ ಸದಸ್ಯರ ಮಕ್ಕಳ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿವೇತನ, ರೈತರ ಅನುಕೂಲಕ್ಕಾಗಿ ಕೆರೆ ಅಭಿವೃದ್ಧಿ ಸೇರಿದಂತೆ ಜನಪರವಾದ ಕೆಲಸಗಳನ್ನು ಮಾಡುತ್ತಿದೆ ಎಂದರು.

ನಗರದ ಯುನಿಯನ್ ಬ್ಯಾಂಕ್ ವ್ಯವಸ್ಥಾಪಕ ಸಂಜೀವ್ ಕುಮಾರ್ ಮಾತನಾಡಿ, ಬ್ಯಾಂಕ್ ವತಿಯಿಂದ ಮಹಿಳಾ ಒಕ್ಕೂಟಗಳ ಮೂಲಕ ಅವರ ಬೇಡಿಕೆಗೆ ತಕ್ಕಷ್ಟು ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಆದರೆ ಇದನ್ನು ಸದುಪಯೋಗ ಪಡಿಸಿಕೊಳ್ಳುವ ಕಡೆಗೆ ಪ್ರಥಮ ಆದ್ಯತೆ ನೀಡಬೇಕು. ಬ್ಯಾಂಕ್ಗಳು ಸಾಲ ನೀಡುವುದು ಬ್ಯಾಂಕಿನ ಅಭಿವೃದ್ಧಿಗಾಗಿ ಮಾತ್ರವೇ ಅಲ್ಲ, ದೇಶದ ಹಾಗೂ ಪ್ರಜೆಗಳು ಆರ್ಥಿಕವಾಗಿ ಪ್ರಗತಿಹೊಂದುವ ಉದ್ದೇಶ ಹೊಂದಲಾಗಿದೆ. ಸಕಾಲದಲ್ಲಿ ಸಾಲ ಮರು ಪಾವತಿ ಮಾಡುವ ಮೂಲಕ ಇತರರು ಸಾಲ ಪಡೆಯಲು ಅವಕಾಶ ಕಲ್ಪಿಸಬೇಕು ಎಂದರು.

ಸಭೆಯಲ್ಲಿ ವಿವಿಧ ಬ್ಯಾಂಕ್ಗಳ ವ್ಯವಸ್ಥಾಪಕರು ಸರ್ಕಾರದ ಸಾಲ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಒಕ್ಕೂಟದ ತಾಲ್ಲೂಕು ಅಧ್ಯಕ್ಷೆ ಹನುಮಕ್ಕ, ಸರಳಮ್ಮ ಹಾಗೂ ನಿರ್ದೇಶಕರು ಇದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

9 minutes ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

12 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

13 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

14 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

14 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

21 hours ago