ಮಹಿಳೆಯರಿಗೆ ಆರ್ಥಿಕ ಸಾಕ್ಷರತೆ ಅತ್ಯಗತ್ಯ- ರಾಘವೇಂದ್ರ

ದೊಡ್ಡಬಳ್ಳಾಪುರ: ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಧಾನ್ ಫೌಂಡೇಷನ್ ಸಂಸ್ಥೆಯು ದೇಶದ 14 ರಾಜ್ಯಗಳ 15 ಲಕ್ಷ ಮಹಿಳೆಯರ ಜೊತೆ ಕೆಲಸ ಮಾಡುತ್ತಿದೆ ಎಂದು ಧಾನ್ ಫೌಂಡೇಷನ್ ಸಂಸ್ಥೆ ರಾಮನಗರ ವಲಯ ಸಂಯೋಜಕ ರಾಘವೇಂದ್ರ ಹೇಳಿದರು.

ಅವರು ನಗರದ ಡಾ.ರಾಜ್ಕುಮಾರ್ ಕಲಾ ಮಂದಿರದಲ್ಲಿ ಸೋಮವಾರ ನಡೆದ ಧಾನ್ ಫೌಂಡೇಷನ್ ರಾಮಗರ ವಲಯದ ಕಳಂಜಿಯಂ ಮಹಿಳಾ ಒಕ್ಕೂಟಗಳ ಸರ್ವ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.

ಆರ್ಥಿಕ ಸಾಕ್ಷರತೆ ಇಲ್ಲದೆ ಎಷ್ಟೇ ದೊಡ್ಡ ಪ್ರಮಾಣದಲ್ಲಿ ಸಾಲ ನೀಡಿದರು ಸಹ ಪ್ರಗತಿಯನ್ನು ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಮಹಿಳೆಯರಿಗೆ ಲೆಕ್ಕಪತ್ರಗಳ ನಿರ್ವಹಣೆ ಸೇರಿದಂತೆ ಹಣ ವಿನೊಯೋಗದ ಬಗ್ಗೆ ಮಾಹಿತಿಗಳನ್ನು ನೀಡಲಾಗುತ್ತಿದೆ. ಇದರಿಂದ ಮಹಿಳೆಯರು ನಷ್ಟಕ್ಕೆ ಒಳಗಾಗುವುದು ತಪ್ಪಲಿದೆ. ಹಾಗೆಯೇ ಸಂಸ್ಥೆಯು ಮಹಿಳಾ ಒಕ್ಕೂಟದ ಸದಸ್ಯರ ಮಕ್ಕಳ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿವೇತನ, ರೈತರ ಅನುಕೂಲಕ್ಕಾಗಿ ಕೆರೆ ಅಭಿವೃದ್ಧಿ ಸೇರಿದಂತೆ ಜನಪರವಾದ ಕೆಲಸಗಳನ್ನು ಮಾಡುತ್ತಿದೆ ಎಂದರು.

ನಗರದ ಯುನಿಯನ್ ಬ್ಯಾಂಕ್ ವ್ಯವಸ್ಥಾಪಕ ಸಂಜೀವ್ ಕುಮಾರ್ ಮಾತನಾಡಿ, ಬ್ಯಾಂಕ್ ವತಿಯಿಂದ ಮಹಿಳಾ ಒಕ್ಕೂಟಗಳ ಮೂಲಕ ಅವರ ಬೇಡಿಕೆಗೆ ತಕ್ಕಷ್ಟು ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಆದರೆ ಇದನ್ನು ಸದುಪಯೋಗ ಪಡಿಸಿಕೊಳ್ಳುವ ಕಡೆಗೆ ಪ್ರಥಮ ಆದ್ಯತೆ ನೀಡಬೇಕು. ಬ್ಯಾಂಕ್ಗಳು ಸಾಲ ನೀಡುವುದು ಬ್ಯಾಂಕಿನ ಅಭಿವೃದ್ಧಿಗಾಗಿ ಮಾತ್ರವೇ ಅಲ್ಲ, ದೇಶದ ಹಾಗೂ ಪ್ರಜೆಗಳು ಆರ್ಥಿಕವಾಗಿ ಪ್ರಗತಿಹೊಂದುವ ಉದ್ದೇಶ ಹೊಂದಲಾಗಿದೆ. ಸಕಾಲದಲ್ಲಿ ಸಾಲ ಮರು ಪಾವತಿ ಮಾಡುವ ಮೂಲಕ ಇತರರು ಸಾಲ ಪಡೆಯಲು ಅವಕಾಶ ಕಲ್ಪಿಸಬೇಕು ಎಂದರು.

ಸಭೆಯಲ್ಲಿ ವಿವಿಧ ಬ್ಯಾಂಕ್ಗಳ ವ್ಯವಸ್ಥಾಪಕರು ಸರ್ಕಾರದ ಸಾಲ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಒಕ್ಕೂಟದ ತಾಲ್ಲೂಕು ಅಧ್ಯಕ್ಷೆ ಹನುಮಕ್ಕ, ಸರಳಮ್ಮ ಹಾಗೂ ನಿರ್ದೇಶಕರು ಇದ್ದರು.

Ramesh Babu

Journalist

Recent Posts

ಕಮಲೂರು ಕೆರೆ ಪುನಶ್ಚೇತನ: ಫಾಕ್ಸ್ಕಾನ್‌ನಿಂದ ಗ್ರಾಮ ಪಂಚಾಯಿತಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ಕೆರೆಗಳು ಗ್ರಾಮೀಣ ಭಾಗಗಳ ಪ್ರಮುಖ ನೀರಿನ ಮೂಲಗಳಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಫಾಕ್ಸ್ಕಾನ್…

6 hours ago

ಬಿಸಿಲ ಬೇಗೆಯ ಎಫೆಕ್ಟ್: 2 ತಿಂಗಳಲ್ಲಿ 2.82 ಲಕ್ಷ ಲೀಟರ್ ಬಿಯರ್ ಮಾರಾಟ!: ಕಳೆದ ವರ್ಷಕ್ಕಿಂತ ಶೇ.33ರಷ್ಟು ಏರಿಕೆ

ಬೆಂಗಳೂರು ಗ್ರಾಮಾಂತರ: ಈ ಬಾರಿ ಬೇಸಿಗೆಯ ಬಿರು ಬಿಸಿಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಯರ್ ಮಾರಾಟಕ್ಕೆ ಹೊಸ ಉತ್ತೇಜನ ನೀಡಿದೆ.…

8 hours ago

ಆರ್‌ಒ ಘಟಕಗಳ ನೀರಿನ ಗುಣಮಟ್ಟ ಪ್ರಮಾಣಪತ್ರ ಪ್ರದರ್ಶನಕ್ಕೆ ಸದಸ್ಯರ ಆಗ್ರಹ

ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್‌ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…

20 hours ago

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ‍್ಯಾಂಕ್ ಪಡೆದ…

21 hours ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

21 hours ago

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ ರಾಜೀನಾಮೆ: ಜಿಲ್ಲಾಧಿಕಾರಿ ಅಂಗೀಕಾರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…

1 day ago