ಮಹಿಳೆಯರಿಗೆ ಆರ್ಥಿಕ ಸಾಕ್ಷರತೆ ಅತ್ಯಗತ್ಯ- ರಾಘವೇಂದ್ರ

ದೊಡ್ಡಬಳ್ಳಾಪುರ: ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಧಾನ್ ಫೌಂಡೇಷನ್ ಸಂಸ್ಥೆಯು ದೇಶದ 14 ರಾಜ್ಯಗಳ 15 ಲಕ್ಷ ಮಹಿಳೆಯರ ಜೊತೆ ಕೆಲಸ ಮಾಡುತ್ತಿದೆ ಎಂದು ಧಾನ್ ಫೌಂಡೇಷನ್ ಸಂಸ್ಥೆ ರಾಮನಗರ ವಲಯ ಸಂಯೋಜಕ ರಾಘವೇಂದ್ರ ಹೇಳಿದರು.

ಅವರು ನಗರದ ಡಾ.ರಾಜ್ಕುಮಾರ್ ಕಲಾ ಮಂದಿರದಲ್ಲಿ ಸೋಮವಾರ ನಡೆದ ಧಾನ್ ಫೌಂಡೇಷನ್ ರಾಮಗರ ವಲಯದ ಕಳಂಜಿಯಂ ಮಹಿಳಾ ಒಕ್ಕೂಟಗಳ ಸರ್ವ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.

ಆರ್ಥಿಕ ಸಾಕ್ಷರತೆ ಇಲ್ಲದೆ ಎಷ್ಟೇ ದೊಡ್ಡ ಪ್ರಮಾಣದಲ್ಲಿ ಸಾಲ ನೀಡಿದರು ಸಹ ಪ್ರಗತಿಯನ್ನು ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಮಹಿಳೆಯರಿಗೆ ಲೆಕ್ಕಪತ್ರಗಳ ನಿರ್ವಹಣೆ ಸೇರಿದಂತೆ ಹಣ ವಿನೊಯೋಗದ ಬಗ್ಗೆ ಮಾಹಿತಿಗಳನ್ನು ನೀಡಲಾಗುತ್ತಿದೆ. ಇದರಿಂದ ಮಹಿಳೆಯರು ನಷ್ಟಕ್ಕೆ ಒಳಗಾಗುವುದು ತಪ್ಪಲಿದೆ. ಹಾಗೆಯೇ ಸಂಸ್ಥೆಯು ಮಹಿಳಾ ಒಕ್ಕೂಟದ ಸದಸ್ಯರ ಮಕ್ಕಳ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿವೇತನ, ರೈತರ ಅನುಕೂಲಕ್ಕಾಗಿ ಕೆರೆ ಅಭಿವೃದ್ಧಿ ಸೇರಿದಂತೆ ಜನಪರವಾದ ಕೆಲಸಗಳನ್ನು ಮಾಡುತ್ತಿದೆ ಎಂದರು.

ನಗರದ ಯುನಿಯನ್ ಬ್ಯಾಂಕ್ ವ್ಯವಸ್ಥಾಪಕ ಸಂಜೀವ್ ಕುಮಾರ್ ಮಾತನಾಡಿ, ಬ್ಯಾಂಕ್ ವತಿಯಿಂದ ಮಹಿಳಾ ಒಕ್ಕೂಟಗಳ ಮೂಲಕ ಅವರ ಬೇಡಿಕೆಗೆ ತಕ್ಕಷ್ಟು ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಆದರೆ ಇದನ್ನು ಸದುಪಯೋಗ ಪಡಿಸಿಕೊಳ್ಳುವ ಕಡೆಗೆ ಪ್ರಥಮ ಆದ್ಯತೆ ನೀಡಬೇಕು. ಬ್ಯಾಂಕ್ಗಳು ಸಾಲ ನೀಡುವುದು ಬ್ಯಾಂಕಿನ ಅಭಿವೃದ್ಧಿಗಾಗಿ ಮಾತ್ರವೇ ಅಲ್ಲ, ದೇಶದ ಹಾಗೂ ಪ್ರಜೆಗಳು ಆರ್ಥಿಕವಾಗಿ ಪ್ರಗತಿಹೊಂದುವ ಉದ್ದೇಶ ಹೊಂದಲಾಗಿದೆ. ಸಕಾಲದಲ್ಲಿ ಸಾಲ ಮರು ಪಾವತಿ ಮಾಡುವ ಮೂಲಕ ಇತರರು ಸಾಲ ಪಡೆಯಲು ಅವಕಾಶ ಕಲ್ಪಿಸಬೇಕು ಎಂದರು.

ಸಭೆಯಲ್ಲಿ ವಿವಿಧ ಬ್ಯಾಂಕ್ಗಳ ವ್ಯವಸ್ಥಾಪಕರು ಸರ್ಕಾರದ ಸಾಲ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಒಕ್ಕೂಟದ ತಾಲ್ಲೂಕು ಅಧ್ಯಕ್ಷೆ ಹನುಮಕ್ಕ, ಸರಳಮ್ಮ ಹಾಗೂ ನಿರ್ದೇಶಕರು ಇದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

6 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

6 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

9 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

10 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

14 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

18 hours ago