ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ ತಿಳಿಸಿದರು.
ನಗರದ ಅಭಿನೇತ್ರಿ ಸಾಂಸ್ಕೃತಿಕ ಸಂಘ ಹಾಗೂ ಮಹಿಳಾ ಸಂಘದ ನೇತೃತ್ವದಲ್ಲಿ ನಡೆದ ಮಹಿಳಾ ಸಂಭ್ರಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸಾಮಾಜಿಕ ಬದ್ದತೆ ಹಾಗೂ ಕುಟುಂಬದ ಜವಾಬ್ದಾರಿಗಳನ್ನು ನಿರ್ವಹಿಸುವಾಗ ಮಹಿಳೆಯರ ಪಾತ್ರ ಹೆಚ್ಚಾಗಿರುತ್ತದೆ. ಕೌಟುಂಬಿಕ ಕಲಹದಲ್ಲಿ ಹೆಚ್ಚು ದೌರ್ಜನ್ಯಕ್ಕೊಳಗಾಗುತ್ತಿರುವುದು ಮಹಿಳೆಯರೇ ಆಗಿದ್ದಾರೆ. ಆದ್ದರಿಂದ ನಾವು ಅವರಿಗೆ ಉತ್ತಮ ಶಿಕ್ಷಣ, ಉದ್ಯೋಗ ಸೇರಿದಂತೆ ಎಲ್ಲಾ ರಂಗದಲ್ಲೂ ಮುನ್ನೆಲೆಗೆ ಬರುವಂತ ಯೋಜನೆ ರೂಪಿಸಬೇಕಾಗಿದೆ ಎಂದರು.
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪ್ರೇಮ್ಕುಮಾರ್ ಮಾತನಾಡಿ, ಸಂವಿಧಾನದಲ್ಲಿ ಪ್ರತಿಯೊಬ್ಬ ಮಹಿಳೆ ಪುರುಷರಿಗೆ ಸಮಾನವಾದ ಅವಕಾಶಗಳಿದ್ದರೂ ಹೆಚ್ಚು ಶೋಷಣೆಗೆ ಒಳಗಾಗುತ್ತಿರುವುದು ಮಹಿಳೆಯರೇ ಎಂದು ಹೇಳಬಹುದು. ಆ ನಿಟ್ಟಿನಲ್ಲಿ ನಾವೆಲ್ಲರೂ ಸಮಾಜಮುಖಿ ಕೆಲಸದಲ್ಲಿ ಅವರಿಗೆ ಅವಕಾಶ ನೀಡಿ ಬೆಳಸುವ ಹೊಣೆಗಾರಿಕೆ ನಿಭಾಯಿಸಬೇಕು ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಚಿಂತನೆಗಳನ್ನು ವಿಸ್ತರಿಸಿಕೊಂಡಿದ್ದು, ಸಾಂವಿಧಾನಿಕ ಅವಕಾಶಗಳನ್ನು ಸಮರ್ಥವಾಗಿ ಪಡೆಯಲು ಸಮಾಜ ನೆರವಾಗಬೇಕು. ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಮಹಿಳೆಯರು ಮಹತ್ವದ ಹೊಣೆಗಾರಿಕೆ ನಿಭಾಯಿಸುತ್ತಿದ್ದಾರೆ ಎಂದು ತಿಳಿಸಿದರು.
ಅಭಿನೇತ್ರಿ ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ರೇವತಿ ಅನಂತರಾಮ್ ಅಧ್ಯಕ್ಷತೆ ವಹಿಸಿದ್ದರು.
ನಿಯೋಜಿತ ಸಿವಿಲ್ ನ್ಯಾಯಾಧೀಶರಾದ ಸಂಘಮಿತ್ರ, ಪತ್ರಕರ್ತ ಪ್ರದೀಪ್ಕುಮಾರ್, ನೇಕಾರ ಹೋರಾಟ ಸಮಿತಿ ಅಧ್ಯಕ್ಷ ಬಿ.ಜಿ.ಹೇಮಂತರಾಜು, ಜಿಲ್ಲಾ ಯುವ ಅಧ್ಯಕ್ಷ ಶರತ್ ಪಟೇಲ್, ಪತ್ರಕರ್ತೆ ಮರಿಯಮ್ಮ, ಹೊಸಕೋಟೆ ಟೌನ್ ಬ್ಯಾಂಕ್ ನಿರ್ದೇಶಕಿ ಸರೋಜ, ಕೆಂಪೇಗೌಡ ಒಕ್ಕಲಿಗರ ಸಂಘದ ನಿರ್ದೇಶಕಿ ಮಮತಾ, ಸಲಹಾ ಸಮಿತಿ ಸದಸ್ಯೆ ಭಾರತಿ, ಶಿಕ್ಷಕಿ ವಸಂತಲಕ್ಷ್ಮಿ, ಭಜನೆಹಟ್ಟಿ ಲಕ್ಷ್ಮಯ್ಯ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಅನಂತರಾಮ್, ಕಾರ್ಯದರ್ಶಿ ಅರವಿಂದ ಗೌಡ, ಶಿಕ್ಷಕರಾದ ಅಪೂರ್ವ, ಚಿನ್ಮಯಿ ಮತ್ತಿತರರು ಪಾಲ್ಗೊಂಡಿದ್ದರು.
ಕಾರ್ಯಕ್ರಮದ ಅಂಗವಾಗಿ ಸಾಧಕರು, ಗಣ್ಯರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕೋಲಾಟ, ಭರತನಾಟ್ಯ, ಜಾನಪದ ನೃತ್ಯ, ಭಜನೆ, ಸಾಮೂಹಿಕ ನೃತ್ಯ ಕಾರ್ಯಕ್ರಮಗಳು ನಡೆದವು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…