ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ ತಿಳಿಸಿದರು.

ನಗರದ ಅಭಿನೇತ್ರಿ ಸಾಂಸ್ಕೃತಿಕ ಸಂಘ ಹಾಗೂ ಮಹಿಳಾ ಸಂಘದ ನೇತೃತ್ವದಲ್ಲಿ ನಡೆದ ಮಹಿಳಾ ಸಂಭ್ರಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸಾಮಾಜಿಕ ಬದ್ದತೆ ಹಾಗೂ ಕುಟುಂಬದ ಜವಾಬ್ದಾರಿಗಳನ್ನು ನಿರ್ವಹಿಸುವಾಗ ಮಹಿಳೆಯರ ಪಾತ್ರ ಹೆಚ್ಚಾಗಿರುತ್ತದೆ. ಕೌಟುಂಬಿಕ ಕಲಹದಲ್ಲಿ ಹೆಚ್ಚು ದೌರ್ಜನ್ಯಕ್ಕೊಳಗಾಗುತ್ತಿರುವುದು ಮಹಿಳೆಯರೇ ಆಗಿದ್ದಾರೆ. ಆದ್ದರಿಂದ ನಾವು ಅವರಿಗೆ ಉತ್ತಮ ಶಿಕ್ಷಣ, ಉದ್ಯೋಗ ಸೇರಿದಂತೆ ಎಲ್ಲಾ ರಂಗದಲ್ಲೂ ಮುನ್ನೆಲೆಗೆ ಬರುವಂತ ಯೋಜನೆ ರೂಪಿಸಬೇಕಾಗಿದೆ ಎಂದರು.

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪ್ರೇಮ್‌ಕುಮಾರ್‌ ಮಾತನಾಡಿ, ಸಂವಿಧಾನದಲ್ಲಿ ಪ್ರತಿಯೊಬ್ಬ ಮಹಿಳೆ ಪುರುಷರಿಗೆ ಸಮಾನವಾದ ಅವಕಾಶಗಳಿದ್ದರೂ ಹೆಚ್ಚು ಶೋಷಣೆಗೆ ಒಳಗಾಗುತ್ತಿರುವುದು ಮಹಿಳೆಯರೇ ಎಂದು ಹೇಳಬಹುದು. ಆ ನಿಟ್ಟಿನಲ್ಲಿ ನಾವೆಲ್ಲರೂ ಸಮಾಜಮುಖಿ ಕೆಲಸದಲ್ಲಿ ಅವರಿಗೆ ಅವಕಾಶ ನೀಡಿ ಬೆಳಸುವ ಹೊಣೆಗಾರಿಕೆ ನಿಭಾಯಿಸಬೇಕು ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಚಿಂತನೆಗಳನ್ನು ವಿಸ್ತರಿಸಿಕೊಂಡಿದ್ದು, ಸಾಂವಿಧಾನಿಕ ಅವಕಾಶಗಳನ್ನು ಸಮರ್ಥವಾಗಿ ಪಡೆಯಲು ಸಮಾಜ ನೆರವಾಗಬೇಕು. ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಮಹಿಳೆಯರು ಮಹತ್ವದ ಹೊಣೆಗಾರಿಕೆ ನಿಭಾಯಿಸುತ್ತಿದ್ದಾರೆ ಎಂದು ತಿಳಿಸಿದರು.

ಅಭಿನೇತ್ರಿ ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ರೇವತಿ ಅನಂತರಾಮ್‌ ಅಧ್ಯಕ್ಷತೆ ವಹಿಸಿದ್ದರು.

ನಿಯೋಜಿತ ಸಿವಿಲ್‌ ನ್ಯಾಯಾಧೀಶರಾದ ಸಂಘಮಿತ್ರ, ಪತ್ರಕರ್ತ ಪ್ರದೀಪ್‌ಕುಮಾರ್‌, ನೇಕಾರ ಹೋರಾಟ ಸಮಿತಿ ಅಧ್ಯಕ್ಷ ಬಿ.ಜಿ.ಹೇಮಂತರಾಜು, ಜಿಲ್ಲಾ ಯುವ ಅಧ್ಯಕ್ಷ ಶರತ್‌ ಪಟೇಲ್‌, ಪತ್ರಕರ್ತೆ ಮರಿಯಮ್ಮ, ಹೊಸಕೋಟೆ ಟೌನ್‌ ಬ್ಯಾಂಕ್‌ ನಿರ್ದೇಶಕಿ ಸರೋಜ, ಕೆಂಪೇಗೌಡ ಒಕ್ಕಲಿಗರ ಸಂಘದ ನಿರ್ದೇಶಕಿ ಮಮತಾ, ಸಲಹಾ ಸಮಿತಿ ಸದಸ್ಯೆ ಭಾರತಿ, ಶಿಕ್ಷಕಿ ವಸಂತಲಕ್ಷ್ಮಿ, ಭಜನೆಹಟ್ಟಿ ಲಕ್ಷ್ಮಯ್ಯ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಅನಂತರಾಮ್, ಕಾರ್ಯದರ್ಶಿ ಅರವಿಂದ ಗೌಡ, ಶಿಕ್ಷಕರಾದ ಅಪೂರ್ವ, ಚಿನ್ಮಯಿ ಮತ್ತಿತರರು ಪಾಲ್ಗೊಂಡಿದ್ದರು.

ಕಾರ್ಯಕ್ರಮದ ಅಂಗವಾಗಿ ಸಾಧಕರು, ಗಣ್ಯರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕೋಲಾಟ, ಭರತನಾಟ್ಯ, ಜಾನಪದ ನೃತ್ಯ, ಭಜನೆ, ಸಾಮೂಹಿಕ ನೃತ್ಯ ಕಾರ್ಯಕ್ರಮಗಳು ನಡೆದವು.

Ramesh Babu

Journalist

Recent Posts

ಹೀಟ್ ಸ್ಟ್ರೋಕ್​: ಯುವಕ ಸಾವು: ಬಿಸಿಲಿಗೆ ಬರುವ ಮುನ್ನ ಇರಲಿ ಎಚ್ಚರ

ಹೀಟ್ ಸ್ಟ್ರೋಕ್​ನಿಂದಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೀದರ್​ನ ಕಮಲನಗರ ಪಟ್ಟಣದ ಹೊರವಲಯದಲ್ಲಿ ನಡೆದಿದೆ... ಮೃತರನ್ನು ಉತ್ತರ ಪ್ರದೇಶ ಮೂಲದ ಮೊಹಮ್ಮದ್…

21 minutes ago

‘ಅಯ್ಯಾ ಬಸವಣ್ಣ ಸಮಾಜದ ನೆಮ್ಮದಿಗಾಗಿ ಮತ್ತೊಮ್ಮೆ ಹುಟ್ಟಿ ಬಾ’

ಬಸವ ಜಯಂತಿಯೋ, ಅಕ್ಷಯ ತೃತೀಯವೋ...... ಅದೃಷ್ಟವಂತರಲ್ಲವೇ ನಾವು,..... ನಮ್ಮ ಹಿಂದಿನ ತಲೆಮಾರಿನವರಿಗೆ ಹೋಲಿಸಿಕೊಂಡರೆ ಎಷ್ಟೊಂದು ಅದೃಷ್ಟವಂತರು ನಾವು. ಎಲ್ಲ ವಿಷಯದಲ್ಲೂ…

6 hours ago

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಲೆ: ಪತ್ನಿ, ಪ್ರಿಯಕರ ಅರೆಸ್ಟ್

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಿದ್ದ ಪತ್ನಿ, ಪ್ರಿಯಕರನನ್ನು‌ ಇದೀಗ ಬಂಧನ ಮಾಡಲಾಗಿದೆ. ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ…

17 hours ago

ನಿನ್ನೆ ಪ್ರಧಾನಿ ನರೇಂದ್ರ ಮೋದಿ ಭಾಷಣ ಕೇಳಿದ ನಂತರ ಇದೆಲ್ಲಾ ನೆನಪಾದವು….

ರಾತ್ರಿ 8 - 30 ರ ಸಮಯ....... ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಿನ್ನೆ ರಾತ್ರಿ 8.30 ರ…

1 day ago

ಬೆಂ.ಗ್ರಾ ಜಿ.ಪಂ ನೂತನ ಸಿ.ಇ.ಒ ಡಾ.ವಸಂತಿ ಅಮರ್ ಬಿ.ವಿ ನೇಮಕ

ಬೆಂಗಳೂರು ಗ್ರಾಮಾಂತರ ಜಿ.ಪಂ ನೂತನ ಸಿ.ಇ.ಒ ಆಗಿ ಡಾ.ವಸಂತಿ ಅಮರ್ ಬಿ.ವಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

2 days ago

ನಾಳೆ( ಏ.19ಕ್ಕೆ) ತಾಲೂಕಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ ನಗರದಲ್ಲಿ ಏ.19 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F02-Raghunathapura, F07-Locall, F14-Scoutcamp & F21-KVN…

2 days ago