ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ ತಿಳಿಸಿದರು.

ನಗರದ ಅಭಿನೇತ್ರಿ ಸಾಂಸ್ಕೃತಿಕ ಸಂಘ ಹಾಗೂ ಮಹಿಳಾ ಸಂಘದ ನೇತೃತ್ವದಲ್ಲಿ ನಡೆದ ಮಹಿಳಾ ಸಂಭ್ರಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸಾಮಾಜಿಕ ಬದ್ದತೆ ಹಾಗೂ ಕುಟುಂಬದ ಜವಾಬ್ದಾರಿಗಳನ್ನು ನಿರ್ವಹಿಸುವಾಗ ಮಹಿಳೆಯರ ಪಾತ್ರ ಹೆಚ್ಚಾಗಿರುತ್ತದೆ. ಕೌಟುಂಬಿಕ ಕಲಹದಲ್ಲಿ ಹೆಚ್ಚು ದೌರ್ಜನ್ಯಕ್ಕೊಳಗಾಗುತ್ತಿರುವುದು ಮಹಿಳೆಯರೇ ಆಗಿದ್ದಾರೆ. ಆದ್ದರಿಂದ ನಾವು ಅವರಿಗೆ ಉತ್ತಮ ಶಿಕ್ಷಣ, ಉದ್ಯೋಗ ಸೇರಿದಂತೆ ಎಲ್ಲಾ ರಂಗದಲ್ಲೂ ಮುನ್ನೆಲೆಗೆ ಬರುವಂತ ಯೋಜನೆ ರೂಪಿಸಬೇಕಾಗಿದೆ ಎಂದರು.

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪ್ರೇಮ್‌ಕುಮಾರ್‌ ಮಾತನಾಡಿ, ಸಂವಿಧಾನದಲ್ಲಿ ಪ್ರತಿಯೊಬ್ಬ ಮಹಿಳೆ ಪುರುಷರಿಗೆ ಸಮಾನವಾದ ಅವಕಾಶಗಳಿದ್ದರೂ ಹೆಚ್ಚು ಶೋಷಣೆಗೆ ಒಳಗಾಗುತ್ತಿರುವುದು ಮಹಿಳೆಯರೇ ಎಂದು ಹೇಳಬಹುದು. ಆ ನಿಟ್ಟಿನಲ್ಲಿ ನಾವೆಲ್ಲರೂ ಸಮಾಜಮುಖಿ ಕೆಲಸದಲ್ಲಿ ಅವರಿಗೆ ಅವಕಾಶ ನೀಡಿ ಬೆಳಸುವ ಹೊಣೆಗಾರಿಕೆ ನಿಭಾಯಿಸಬೇಕು ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಚಿಂತನೆಗಳನ್ನು ವಿಸ್ತರಿಸಿಕೊಂಡಿದ್ದು, ಸಾಂವಿಧಾನಿಕ ಅವಕಾಶಗಳನ್ನು ಸಮರ್ಥವಾಗಿ ಪಡೆಯಲು ಸಮಾಜ ನೆರವಾಗಬೇಕು. ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಮಹಿಳೆಯರು ಮಹತ್ವದ ಹೊಣೆಗಾರಿಕೆ ನಿಭಾಯಿಸುತ್ತಿದ್ದಾರೆ ಎಂದು ತಿಳಿಸಿದರು.

ಅಭಿನೇತ್ರಿ ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ರೇವತಿ ಅನಂತರಾಮ್‌ ಅಧ್ಯಕ್ಷತೆ ವಹಿಸಿದ್ದರು.

ನಿಯೋಜಿತ ಸಿವಿಲ್‌ ನ್ಯಾಯಾಧೀಶರಾದ ಸಂಘಮಿತ್ರ, ಪತ್ರಕರ್ತ ಪ್ರದೀಪ್‌ಕುಮಾರ್‌, ನೇಕಾರ ಹೋರಾಟ ಸಮಿತಿ ಅಧ್ಯಕ್ಷ ಬಿ.ಜಿ.ಹೇಮಂತರಾಜು, ಜಿಲ್ಲಾ ಯುವ ಅಧ್ಯಕ್ಷ ಶರತ್‌ ಪಟೇಲ್‌, ಪತ್ರಕರ್ತೆ ಮರಿಯಮ್ಮ, ಹೊಸಕೋಟೆ ಟೌನ್‌ ಬ್ಯಾಂಕ್‌ ನಿರ್ದೇಶಕಿ ಸರೋಜ, ಕೆಂಪೇಗೌಡ ಒಕ್ಕಲಿಗರ ಸಂಘದ ನಿರ್ದೇಶಕಿ ಮಮತಾ, ಸಲಹಾ ಸಮಿತಿ ಸದಸ್ಯೆ ಭಾರತಿ, ಶಿಕ್ಷಕಿ ವಸಂತಲಕ್ಷ್ಮಿ, ಭಜನೆಹಟ್ಟಿ ಲಕ್ಷ್ಮಯ್ಯ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಅನಂತರಾಮ್, ಕಾರ್ಯದರ್ಶಿ ಅರವಿಂದ ಗೌಡ, ಶಿಕ್ಷಕರಾದ ಅಪೂರ್ವ, ಚಿನ್ಮಯಿ ಮತ್ತಿತರರು ಪಾಲ್ಗೊಂಡಿದ್ದರು.

ಕಾರ್ಯಕ್ರಮದ ಅಂಗವಾಗಿ ಸಾಧಕರು, ಗಣ್ಯರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕೋಲಾಟ, ಭರತನಾಟ್ಯ, ಜಾನಪದ ನೃತ್ಯ, ಭಜನೆ, ಸಾಮೂಹಿಕ ನೃತ್ಯ ಕಾರ್ಯಕ್ರಮಗಳು ನಡೆದವು.

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

6 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

17 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

2 days ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago