ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ ತಿಳಿಸಿದರು.

ನಗರದ ಅಭಿನೇತ್ರಿ ಸಾಂಸ್ಕೃತಿಕ ಸಂಘ ಹಾಗೂ ಮಹಿಳಾ ಸಂಘದ ನೇತೃತ್ವದಲ್ಲಿ ನಡೆದ ಮಹಿಳಾ ಸಂಭ್ರಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸಾಮಾಜಿಕ ಬದ್ದತೆ ಹಾಗೂ ಕುಟುಂಬದ ಜವಾಬ್ದಾರಿಗಳನ್ನು ನಿರ್ವಹಿಸುವಾಗ ಮಹಿಳೆಯರ ಪಾತ್ರ ಹೆಚ್ಚಾಗಿರುತ್ತದೆ. ಕೌಟುಂಬಿಕ ಕಲಹದಲ್ಲಿ ಹೆಚ್ಚು ದೌರ್ಜನ್ಯಕ್ಕೊಳಗಾಗುತ್ತಿರುವುದು ಮಹಿಳೆಯರೇ ಆಗಿದ್ದಾರೆ. ಆದ್ದರಿಂದ ನಾವು ಅವರಿಗೆ ಉತ್ತಮ ಶಿಕ್ಷಣ, ಉದ್ಯೋಗ ಸೇರಿದಂತೆ ಎಲ್ಲಾ ರಂಗದಲ್ಲೂ ಮುನ್ನೆಲೆಗೆ ಬರುವಂತ ಯೋಜನೆ ರೂಪಿಸಬೇಕಾಗಿದೆ ಎಂದರು.

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪ್ರೇಮ್‌ಕುಮಾರ್‌ ಮಾತನಾಡಿ, ಸಂವಿಧಾನದಲ್ಲಿ ಪ್ರತಿಯೊಬ್ಬ ಮಹಿಳೆ ಪುರುಷರಿಗೆ ಸಮಾನವಾದ ಅವಕಾಶಗಳಿದ್ದರೂ ಹೆಚ್ಚು ಶೋಷಣೆಗೆ ಒಳಗಾಗುತ್ತಿರುವುದು ಮಹಿಳೆಯರೇ ಎಂದು ಹೇಳಬಹುದು. ಆ ನಿಟ್ಟಿನಲ್ಲಿ ನಾವೆಲ್ಲರೂ ಸಮಾಜಮುಖಿ ಕೆಲಸದಲ್ಲಿ ಅವರಿಗೆ ಅವಕಾಶ ನೀಡಿ ಬೆಳಸುವ ಹೊಣೆಗಾರಿಕೆ ನಿಭಾಯಿಸಬೇಕು ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಚಿಂತನೆಗಳನ್ನು ವಿಸ್ತರಿಸಿಕೊಂಡಿದ್ದು, ಸಾಂವಿಧಾನಿಕ ಅವಕಾಶಗಳನ್ನು ಸಮರ್ಥವಾಗಿ ಪಡೆಯಲು ಸಮಾಜ ನೆರವಾಗಬೇಕು. ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಮಹಿಳೆಯರು ಮಹತ್ವದ ಹೊಣೆಗಾರಿಕೆ ನಿಭಾಯಿಸುತ್ತಿದ್ದಾರೆ ಎಂದು ತಿಳಿಸಿದರು.

ಅಭಿನೇತ್ರಿ ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ರೇವತಿ ಅನಂತರಾಮ್‌ ಅಧ್ಯಕ್ಷತೆ ವಹಿಸಿದ್ದರು.

ನಿಯೋಜಿತ ಸಿವಿಲ್‌ ನ್ಯಾಯಾಧೀಶರಾದ ಸಂಘಮಿತ್ರ, ಪತ್ರಕರ್ತ ಪ್ರದೀಪ್‌ಕುಮಾರ್‌, ನೇಕಾರ ಹೋರಾಟ ಸಮಿತಿ ಅಧ್ಯಕ್ಷ ಬಿ.ಜಿ.ಹೇಮಂತರಾಜು, ಜಿಲ್ಲಾ ಯುವ ಅಧ್ಯಕ್ಷ ಶರತ್‌ ಪಟೇಲ್‌, ಪತ್ರಕರ್ತೆ ಮರಿಯಮ್ಮ, ಹೊಸಕೋಟೆ ಟೌನ್‌ ಬ್ಯಾಂಕ್‌ ನಿರ್ದೇಶಕಿ ಸರೋಜ, ಕೆಂಪೇಗೌಡ ಒಕ್ಕಲಿಗರ ಸಂಘದ ನಿರ್ದೇಶಕಿ ಮಮತಾ, ಸಲಹಾ ಸಮಿತಿ ಸದಸ್ಯೆ ಭಾರತಿ, ಶಿಕ್ಷಕಿ ವಸಂತಲಕ್ಷ್ಮಿ, ಭಜನೆಹಟ್ಟಿ ಲಕ್ಷ್ಮಯ್ಯ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಅನಂತರಾಮ್, ಕಾರ್ಯದರ್ಶಿ ಅರವಿಂದ ಗೌಡ, ಶಿಕ್ಷಕರಾದ ಅಪೂರ್ವ, ಚಿನ್ಮಯಿ ಮತ್ತಿತರರು ಪಾಲ್ಗೊಂಡಿದ್ದರು.

ಕಾರ್ಯಕ್ರಮದ ಅಂಗವಾಗಿ ಸಾಧಕರು, ಗಣ್ಯರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕೋಲಾಟ, ಭರತನಾಟ್ಯ, ಜಾನಪದ ನೃತ್ಯ, ಭಜನೆ, ಸಾಮೂಹಿಕ ನೃತ್ಯ ಕಾರ್ಯಕ್ರಮಗಳು ನಡೆದವು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

22 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 day ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago