Categories: ರಾಜ್ಯ

ಮಹಿಳೆಯರು ತಯಾರಿಸಿದ ವಸ್ತುಗಳಿಗೆ ಮಾರಾಟ ವ್ಯವಸ್ಥೆ ದೊರೆತಾಗ ಮಾತ್ರ ಆರ್ಥಿಕ, ಸಾಮಾಜಿಕವಾಗಿ ಶಕ್ತಿ ಪಡೆಯಲು ಸಾಧ್ಯ.- ಸಿಎಂ ಸಿದ್ದರಾಮಯ್ಯ

ಮಹಿಳೆಯರು ತಯಾರಿಸಿದ ವಸ್ತುಗಳಿಗೆ ಮಾರಾಟ ವ್ಯವಸ್ಥೆ ದೊರೆತಾಗ ಮಾತ್ರ ಆರ್ಥಿಕ, ಸಾಮಾಜಿಕವಾಗಿ ಶಕ್ತಿ ಪಡೆಯಲು ಸಾಧ್ಯ. ಗುಣಮಟ್ಟದ ವಸ್ತುಗಳನ್ನು ತಯಾರಿಸುವ ಶಕ್ತಿ ಉತ್ಪಾದಕರಿಗೆ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸ್ವಸಹಾಯ ಸಂಘಗಳು ತಯಾರಿಸಿರುವ ಉತ್ಪನ್ನಗಳ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಉದ್ಗಾಟಿಸಿ, ಅವರು ಮಾತನಾಡಿದರು, ಮಾರಾಟ ಹೆಚ್ಚಾದರೆ ಉತ್ಪನ್ನಗಳ ಉತ್ಪಾದನೆಯೂ ಹೆಚ್ಚಾಗಲು ಸಾಧ್ಯ. ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಸಿಕ್ಕು ಅದರಿಂದ ಜೀವನ ನಡೆಯಬೇಕು. ಮಹಿಳೆಯರು ಕುಟುಂಬದ ಜವಾಬ್ದಾರಿಯನ್ನು ವಹಿಸುತ್ತಾರೆ. ಅವರು ಶ್ರಮಜೀವಿಗಳು. ಶೇ 50 ರಷ್ಟಿರುವ ಮಹಿಳೆಯರು ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಮಹಿಳೆಯರು ದೌರ್ಜನ್ಯ, ಶೋಷಣೆಗೆ ಒಳಗಾಗಿರುವ ವರ್ಗ. ಈ ವರ್ಗಕ್ಕೆ ಶಿಕ್ಷಣ ದೊರೆತು ಆರ್ಥಿಕವಾಗಿ ಸಬಲರಾಗಬೇಕು ಎಂದರು.

ಶಕ್ತಿ ವೃದ್ಧಿ ಮಾಡಲು ವಸ್ತು ಪ್ರದರ್ಶನ ಮಾರಾಟ ಮೇಳಗಳನ್ನು ಸರ್ಕಾರ ಏರ್ಪಾಡು ಮಾಡಿದೆ. ಉದ್ಯೋಗ ಸೃಷ್ಟಿಸಲು ಆರ್ಥಿಕ ನೆರವು, ತರಬೇತಿ, ಸ್ವಯಂ ಉದ್ಯೋಗಕ್ಕೆ ಶಕ್ತಿ ಅಗತ್ಯ. ಗುಣಮಟ್ಟದ ವಸ್ತುಗಳನ್ನು ತಯಾರಿಸುವ ಶಕ್ತಿ ಉತ್ಪಾದಕರಿಗೆ ಇರಬೇಕು. ಸ್ಪರ್ಧಾತ್ಮಕ ಸಮಾಜದಲ್ಲಿ ನಾವೂ ನಮ್ಮ ಅಸ್ತಿತ್ವ ಕಾಪಾಡಿಕೊಳ್ಳಬೇಕು. ರಾಜ್ಯದಲ್ಲಿ 3.48 ಲಕ್ಷ ಸ್ವಸಹಾಯ ಸಂಘಗಳಿವೆ. 39.30 ಲಕ್ಷ ಕುಟುಂಬಗಳು ಗ್ರಾಮೀಣ ಜೀವನೋಪಾಯಡಿಯಲ್ಲಿ  ಬರುತ್ತವೆ. ನಗರ ಪ್ರದೇಶದಲ್ಲಿ 33 ಸಾವಿರ ಸ್ವಸಹಾಯ ಸಂಘಗಳಿವೆ. 3.96 ಲಕ್ಷ ಕುಟುಂಬಗಳು ತೊಡಗಿಸಿಕೊಂಡಿವೆ. ಇಷ್ಟೊಂದು ಸ್ವಸಹಾಯ ಸಂಘಗಳಿಗೆ ಆರ್ಥಿಕ ನೆರವು ಸರ್ಕಾರ ನೀಡಿದೆ ಎಂದು ತಿಳಿಸಿದರು.

ಪ್ರತಿ ಸ್ವಸಹಾಯ ಸಂಘಕ್ಕೆ 1 ಲಕ್ಷ ರೂ.ಗಳ ನೆರವು ಸರ್ಕಾರ ನೀಡುತ್ತದೆ. 131 ಕೋಟಿ ರೂ.ಗಳನ್ನು ವ್ಯಯ ಮಾಡಿ 12,600 ಗುಂಪುಗಳಿಗೆ ಈ ವರ್ಷ ಸಹಾಯ ಮಾಡಿದ್ದೇವೆ. ಕಳೆದ ವರ್ಷ ವ್ಯಾಪಾರ ಮೇಳದಲ್ಲಿ 3 ಕೋಟಿ ರೂ.ಗಳ ವಹಿವಾಟು ನಡೆದಿದೆ. ಮಹಿಳೆಯರನ್ನು ಸಬಲರನ್ನಾಗಿ ಮಾಡಲು ನಮ್ಮ ಸರ್ಕಾರ ಎಲ್ಲಾ ರೀತಿಯ ಸಹಾಯ ಮಾಡುತ್ತಿದೆ ಎಂದು ಹೇಳಿದರು.

ಶಕ್ತಿ ಯೋಜನೆಯಡಿ ಎಲ್ಲಾ ಮಹಿಳೆಯರಿಗೆ ಉಚಿತವಾಗಿ ಬಸ್ ಪ್ರಯಾಣವನ್ನು ನೀಡಿದ್ದು ಮಹಿಳೆಯರು ಮನೆಗಳಿಗೆ ಸೀಮಿತವಾಗದೆ ರಾಜ್ಯದ ಮೂಲೆ ಮೂಲೆಗಳಿಗೂ ಹೋಗಬೇಕು. 100 ಕೋಟಿಗೂ ಹೆಚ್ಚು ಬಾರಿ ಮಹಿಳೆಯರು ಉಚಿತವಾಗಿ ಬಸ್ಸುಗಳಲ್ಲಿ ಓಡಾಡಿದ್ದಾರೆ. ಪ್ರತಿ ದಿನ 50-60 ಲಕ್ಷ ಜನ ಮಹಿಳೆಯರು ಬಸ್ಸುಗಳಲ್ಲಿ ಓಡಾಡಿದ್ದಾರೆ ಎಂದರು.

ಗೃಹ ಲಕ್ಷ್ಮೀ ಯೋಜನೆಯಡಿ 2000 ರೂ.ಗಳನ್ನು ಪಡೆಯಲು ಈವರೆಗೆ 1.17 ಕೋಟಿ ಜನ ನೋಂದಾಯಿಸಿಕೊಂಡಿದ್ದಾರೆ. 1.14 ಲಕ್ಷ ಮಹಿಳೆಯರಿಗೆ 2000 ರೂ.ಗಳನ್ನು ನೀಡಲಾಗುತ್ತಿದೆ. 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. 170 ರೂ.ಗಳನ್ನು ಪ್ರತಿಯೊಬ್ಬರಿಗೂ ಅಕ್ಕಿಗೆ ಬದಲಾಗಿ ಕೊಡುತ್ತಿದ್ದೇವೆ. ಯುವನಿಧಿ ಯೋಜನೆಯ ಪ್ರಕ್ರಿಯೆ ನಡೆಯುತ್ತಿದ್ದು ಜನವರಿಯಲ್ಲಿ ಕೊಡಲು ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿದರು.

 ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕು. ಅವರೂ ದೇಶದ ಜಿಡಿಪಿಗೆ ಕೊಡುಗೆಯನ್ನು ನೀಡಬೇಕು. ಮಾರುಕಟ್ಟೆಯಲ್ಲಿ ಮಹಿಳೆಯರಿಗೆ ಹೆಚ್ಚು ಲಾಭ ಸಿಗಲು ಗುಣಮಟ್ಟದ ವಸ್ತುಗಳನ್ನು ತಯಾರು ಮಾಡಬೇಕು. ಅದಕ್ಕೆ ಅಗತ್ಯವಿರುವ ತಾಂತ್ರಿಕ ಜ್ಞಾನವನ್ನು ಕೊಡುವ ಕೆಲಸವನ್ನು ಇಲಾಖೆ ಮಾಡುತ್ತದೆ. ಯುವಕ, ಯುವತಿಯರಿಗೆ  ಮಾರುಕಟ್ಟೆಯಲ್ಲಿ ಬೇಡಿಕೆಯಲ್ಲಿರುವ ಕೌಶಲ್ಯಾಭಿವೃದ್ಧಿ ಮಾಡಿದರೆ 2 ವರ್ಷಗಳಲ್ಲಿ ಉದ್ಯೋಗ ಸಿಗುವುದು ಸುಲಭವಾಗುತ್ತದೆ. ತರಬೇತಿ  ಮತ್ತು ಯುವನಿಧಿ ಎರಡೂ ಆದರೆ ಸಮಾಜದಲ್ಲಿ ಆರ್ಥಿಕ, ಸಾಮಾಜಿಕ ಬದಲಾವಣೆ ತರಲು ಸಾಧ್ಯವಾಗುತ್ತದೆ. ಯುವ ಶಕ್ತಿ, ಮಹಿಳೆಯರು ರಾಜ್ಯದ ಸಂಪತ್ತು. ಆದ್ದರಿಂದ ನಿಮಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದೇವೆ ಎಂದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

13 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

16 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

23 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

2 days ago