ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ ಹೇಳಿದರು.
ಶ್ರೀ ದೇವರಾಜ್ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹೆಣ್ಣು ಈ ಸಮಾಜದ ಬೆನ್ನೆಲುಬು ಒಂದು ಕಾಲದಲ್ಲಿ ಮನೆಯ ನಾಲ್ಕು ಗೋಡೆಗಳಿಗೆ ಸೀಮಿತವಾಗಿದ್ದ ಹೆಣ್ಣು ಇಂದು ಆಕಾಶವನ್ನೇ ಮುಟ್ಟಿದ್ದಾಳೆ, ಮಹಿಳೆಯರು ಸ್ವಾವಲಂಬಿಗಳಾಗಿ ಬದುಕನ್ನು ಕಟ್ಟಿಕೊಳ್ಳಬೇಕು, ಬಣ್ಣದ ಜಗತ್ತಿಗೆ ಬೆರಗಾಗಬಾರದು ಎಂದರು.
ಲೀಜಿಯನ್ ಎನರ್ಜಿ ಕಂಪನಿಯ ಮಾನವ ಸಂಪನ್ಮೂಲ ಅಧಿಕಾರಿಯದ ಮಮತಾಶ್ರೀ ಡಿ.ವಿ ರವರು ಮಾತನಾಡಿ ಮಹಿಳೆಯರ ಯಶಸ್ವಿಗೆ ಸರಿಯಾದ ಮಾರ್ಗ ತೋರಿಸಿದರೆ ಅವರು ಅತ್ಯಾದ್ಭುತವಾಗಿ ಸಾಧನೆ ಮಾಡುವುದಲ್ಲದೆ ತಮ್ಮ ಜೊತೆ ಇರುವವರನ್ನು ಬೆಳೆಸುತ್ತಾರೆ ಅದುವೇ ಶ್ರೀಶಕ್ತಿಯ ಗುಣ, ಅಮ್ಮನಿಂದ ಹಿಡಿದು ಮಡದಿಯವರಿಗೆ, ಸೋದರಿಯಿಂದ ಪುತ್ರಿಯವರಿಗೆ ಮಹಿಳೆ ಎಂಬ ಬಲವೇ ಪುರುಷನಿಗೆ ಶಕ್ತಿ ತುಂಬುವ ಮಹಾಚೈತನ್ಯ ಎಂದರು.
ಶ್ರೀ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಜಿ ರಾಜೇಂದ್ರ ಮಾತನಾಡಿ, ಮಹಿಳೆಯರು ಶಿಕ್ಷಣ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದ್ದಾರೆ,ಹೆಣ್ಣು ಕೇವಲ ವೃತ್ತಿಜೀವನವಷ್ಟೇ ಅಲ್ಲದೆ, ಕುಟುಂಬದ ಪ್ರೀತಿ, ಸಂಸ್ಕಾರ ಮತ್ತು ನಿರ್ವಹಣೆಯಲ್ಲಿ ಮಹಿಳೆಯ ಪಾತ್ರ ಅಪ್ರತಿಮ. ಅವಳು ತಾಯಿಯಾಗಿ, ಮಗಳಾಗಿ, ಪತ್ನಿಯಾಗಿ ಮತ್ತು ಸಹೋದರಿಯಾಗಿ ನೀಡುವ ತ್ಯಾಗಕ್ಕೆ ಬೆಲೆ ಕಟ್ಟಲಾಗದು ಎಂದರು.
ಪ್ರಾಂಶುಪಾಲರಾದ ಡಾ. ಗೌರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಜೆ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ ಚಿಕ್ಕಣ್ಣ, ಉಪ ಪ್ರಾಂಶುಪಾಲರಾದ ಕೆ ದಕ್ಷಿಣ ಮೂರ್ತಿ, ಉದ್ಯೋಗ ಮತ್ತು ತರಬೇತಿ ವಿಭಾಗದ ಮುಖ್ಯಸ್ಥರಾದ ಬಾಬುಸಾಬಿ, ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಚೈತ್ರ.ಪಿ, ಸ್ನಾತಕೋತ್ತರ ವಿಭಾಗದ ಮುಖ್ಯಸ್ಥರಾದ ನಂದನ, ಪ್ರಾಧ್ಯಾಪಕರಾದ ದಿವ್ಯ ಎನ್. ಪದ್ಮ ಬಿಂದು, ಮತ್ತಿತರರು ಹಾಜರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…