ಮಹಿಳೆಯರು ಸ್ವ ಉದ್ಯೋಗದಲ್ಲಿ ಹೆಚ್ಚಾಗಿ ತೊಡಗಿಸಿಕೊಂಡು ಆರ್ಥಿಕವಾಗಿ ಸದೃಢರಾಗಬೇಕು-ಅಂಬರೀಶ ಬಿ.ಸಿ.

ಹೊಸಕೋಟೆ ತಾಲ್ಲೂಕು ಸೂಲಿಬೆಲೆ ಹೋಬಳಿ ವ್ಯಾಪ್ತಿಗೆ ಬರುವ ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.

ಈ ಕಾರ್ಯಕ್ರಮವನ್ನು ಕುರಿತು ಸಂಸ್ಥೆಯ ನಿರ್ದೇಶಕರಾದ ಅಂಬರೀಶ ಬಿ.ಸಿ. ಮಾತನಾಡಿ, ಮೊದಲಿಗೆ ಎಲ್ಲರಿಗೂ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಷಯಗಳನ್ನು ತಿಳಿಸಿದ ಅವರು, ಮಹಿಳೆಯರು ಉತ್ತಮ ಸಮಾಜ ಕಟ್ಟುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಮಹಿಳೆಯರು ಹೆಚ್ಚು-ಹೆಚ್ಚು ಸ್ವ-ಉದ್ಯೋಗದಲ್ಲಿ ತೊಡಗಿಸಿಕೊಂಡಾಗ ಮಾತ್ರ ದೇಶದ ಆರ್ಥಿಕತೆ ಅಭಿವೃದ್ಧಿ ಹೊಂದುವುದರ ಜೊತೆಗೆ ತಮ್ಮ-ತಮ್ಮ ಕುಟುಂಬಗಳ ಆರ್ಥಿಕತೆಯನ್ನು ಆಭಿವೃದ್ಧಿಪಡಿಸಲು ಸಾಧ್ಯ ಹಾಗೂ ಸಮಾಜದಲ್ಲಿ ತಮ್ಮ ಸ್ಥಾನಮಾನ ಗುರುತಿಸಿಕೊಳ್ಳುವುದಕ್ಕೆ ನಮ್ಮ ಸಂಸ್ಥೆಯು ಹೆಚ್ಚಿನ ಸಹಾಯಕಾರಿಯಾಗಿರುತ್ತದೆ ಎಂದು ಕಿವಿಮಾತು ಹೇಳಿದರು.

ಸಂಸ್ಥೆಯಲ್ಲಿ ಯಶಸ್ವಿಯಾಗಿ ತರಬೇತಿಯನ್ನು ಪೂರ್ಣಗೊಳಿಸಿ ಸ್ವಾವಲಂಬಿ ಜೀವನ ಕಟ್ಟಿಕೊಂಡಿರುವ ಮಹಿಳೆಯರು ಹೆಚ್ಚು ಸಮಾಜದಲ್ಲಿ ಗುರುತಿಸಿಕೊಂಡಿರುವುದು ನಮ್ಮ ಸಂಸ್ಥೆಯ ಹೆಮ್ಮೆಯ ಕೊಡುಗೆಯಾಗಿದೆ ಎಂದು ತಿಳಿಸಿದರು.

ಸಂಸ್ಥೆಯಲ್ಲಿ ಅಣಬೆ ಬೇಸಾಯ ಮತ್ತು ಬ್ಯೂಟಿ ಪಾರ್ಲರ್‌ ತರಬೇತಿ ಪಡೆದು ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡಿರುವ ಸ್ವ ಉದ್ಯೋಗಿಗಳಾದ, ಕಾವ್ಯ ಮತ್ತು ಶೋಭ ರವರು ಭಾಗವಹಿಸಿ ಮಾತನಾಡಿದ ಅವರು, ಮಹಿಳೆರಿಗೆ ಸಮಾಜದಲ್ಲಿ ಅನೇಕ ಸವಾಲುಗಳು ಎದುರಾಗುತ್ತವೇ, ಅವುಗಳನ್ನು ಮೆಟ್ಟಿ ಮುನ್ನುಗಿ ನಡೆದಾಗ ಮಾತ್ರ ಯಶಸ್ವಿಯಾಗಲು ಸಾಧ್ಯ. ನಾವು ಮಾಡುವ ಕೆಲಸದಲ್ಲಿ ಶ್ರದ್ಧೆ, ಭಕ್ತಿ, ನಂಬಿಕೆ ಮತ್ತು ಚಲ ಎಂಬ ಈ ನಾಲ್ಕು ಸಾಧನಗಳಿಂದ ನಮಗೆ ಯಶಸ್ವಿ ಎಂಬ ಸಾಧನೆ ದೊರೆಯುತ್ತದೆ ಎಂದು ತಮ್ಮ ಸಾಧನೆ ಹಾದಿಯ ಅನುಭವವನ್ನು ಹಂಚಿಕೊಂಡರು.

ಇದೇ ಸಂಧರ್ಭದಲ್ಲಿ ಯಶಸ್ವಿ ಸ್ವ ಉದ್ಯೋಗಿಗಳನ್ನು ಸನ್ಮಾನಿಸಲಾಯಿತು.

ಇದೇ ಸಂಧ‌ರ್ಭದಲ್ಲಿ ಸಂಸ್ಥೆಯ ಉಪನ್ಯಾಸಕರಾದ ಮುನಿಕೃಷ್ಣ.ಎಂ, ರಾಮಕೃಷ್ಣಪ್ಪ, ಸಂಸ್ಥೆಯ ಸಿಬ್ಬಂದಿ ಸುಗುಣ.ಬಿ, ಕವನ, ನಾಗೇಶ್‌, ಮುನಿಪಟಾಲಪ್ಪ ಹಾಜರಿದ್ದರು.

Ramesh Babu

Journalist

Recent Posts

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

2 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

4 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

5 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

11 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

11 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

15 hours ago