ಹೊಸಕೋಟೆ ತಾಲ್ಲೂಕು ಸೂಲಿಬೆಲೆ ಹೋಬಳಿ ವ್ಯಾಪ್ತಿಗೆ ಬರುವ ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.
ಈ ಕಾರ್ಯಕ್ರಮವನ್ನು ಕುರಿತು ಸಂಸ್ಥೆಯ ನಿರ್ದೇಶಕರಾದ ಅಂಬರೀಶ ಬಿ.ಸಿ. ಮಾತನಾಡಿ, ಮೊದಲಿಗೆ ಎಲ್ಲರಿಗೂ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಷಯಗಳನ್ನು ತಿಳಿಸಿದ ಅವರು, ಮಹಿಳೆಯರು ಉತ್ತಮ ಸಮಾಜ ಕಟ್ಟುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಮಹಿಳೆಯರು ಹೆಚ್ಚು-ಹೆಚ್ಚು ಸ್ವ-ಉದ್ಯೋಗದಲ್ಲಿ ತೊಡಗಿಸಿಕೊಂಡಾಗ ಮಾತ್ರ ದೇಶದ ಆರ್ಥಿಕತೆ ಅಭಿವೃದ್ಧಿ ಹೊಂದುವುದರ ಜೊತೆಗೆ ತಮ್ಮ-ತಮ್ಮ ಕುಟುಂಬಗಳ ಆರ್ಥಿಕತೆಯನ್ನು ಆಭಿವೃದ್ಧಿಪಡಿಸಲು ಸಾಧ್ಯ ಹಾಗೂ ಸಮಾಜದಲ್ಲಿ ತಮ್ಮ ಸ್ಥಾನಮಾನ ಗುರುತಿಸಿಕೊಳ್ಳುವುದಕ್ಕೆ ನಮ್ಮ ಸಂಸ್ಥೆಯು ಹೆಚ್ಚಿನ ಸಹಾಯಕಾರಿಯಾಗಿರುತ್ತದೆ ಎಂದು ಕಿವಿಮಾತು ಹೇಳಿದರು.
ಸಂಸ್ಥೆಯಲ್ಲಿ ಯಶಸ್ವಿಯಾಗಿ ತರಬೇತಿಯನ್ನು ಪೂರ್ಣಗೊಳಿಸಿ ಸ್ವಾವಲಂಬಿ ಜೀವನ ಕಟ್ಟಿಕೊಂಡಿರುವ ಮಹಿಳೆಯರು ಹೆಚ್ಚು ಸಮಾಜದಲ್ಲಿ ಗುರುತಿಸಿಕೊಂಡಿರುವುದು ನಮ್ಮ ಸಂಸ್ಥೆಯ ಹೆಮ್ಮೆಯ ಕೊಡುಗೆಯಾಗಿದೆ ಎಂದು ತಿಳಿಸಿದರು.
ಸಂಸ್ಥೆಯಲ್ಲಿ ಅಣಬೆ ಬೇಸಾಯ ಮತ್ತು ಬ್ಯೂಟಿ ಪಾರ್ಲರ್ ತರಬೇತಿ ಪಡೆದು ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡಿರುವ ಸ್ವ ಉದ್ಯೋಗಿಗಳಾದ, ಕಾವ್ಯ ಮತ್ತು ಶೋಭ ರವರು ಭಾಗವಹಿಸಿ ಮಾತನಾಡಿದ ಅವರು, ಮಹಿಳೆರಿಗೆ ಸಮಾಜದಲ್ಲಿ ಅನೇಕ ಸವಾಲುಗಳು ಎದುರಾಗುತ್ತವೇ, ಅವುಗಳನ್ನು ಮೆಟ್ಟಿ ಮುನ್ನುಗಿ ನಡೆದಾಗ ಮಾತ್ರ ಯಶಸ್ವಿಯಾಗಲು ಸಾಧ್ಯ. ನಾವು ಮಾಡುವ ಕೆಲಸದಲ್ಲಿ ಶ್ರದ್ಧೆ, ಭಕ್ತಿ, ನಂಬಿಕೆ ಮತ್ತು ಚಲ ಎಂಬ ಈ ನಾಲ್ಕು ಸಾಧನಗಳಿಂದ ನಮಗೆ ಯಶಸ್ವಿ ಎಂಬ ಸಾಧನೆ ದೊರೆಯುತ್ತದೆ ಎಂದು ತಮ್ಮ ಸಾಧನೆ ಹಾದಿಯ ಅನುಭವವನ್ನು ಹಂಚಿಕೊಂಡರು.
ಇದೇ ಸಂಧರ್ಭದಲ್ಲಿ ಯಶಸ್ವಿ ಸ್ವ ಉದ್ಯೋಗಿಗಳನ್ನು ಸನ್ಮಾನಿಸಲಾಯಿತು.
ಇದೇ ಸಂಧರ್ಭದಲ್ಲಿ ಸಂಸ್ಥೆಯ ಉಪನ್ಯಾಸಕರಾದ ಮುನಿಕೃಷ್ಣ.ಎಂ, ರಾಮಕೃಷ್ಣಪ್ಪ, ಸಂಸ್ಥೆಯ ಸಿಬ್ಬಂದಿ ಸುಗುಣ.ಬಿ, ಕವನ, ನಾಗೇಶ್, ಮುನಿಪಟಾಲಪ್ಪ ಹಾಜರಿದ್ದರು.
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…
ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…
ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…