ಮಹಿಳೆಯರು ಸ್ವ ಉದ್ಯೋಗದಲ್ಲಿ ಹೆಚ್ಚಾಗಿ ತೊಡಗಿಸಿಕೊಂಡು ಆರ್ಥಿಕವಾಗಿ ಸದೃಢರಾಗಬೇಕು-ಅಂಬರೀಶ ಬಿ.ಸಿ.

ಹೊಸಕೋಟೆ ತಾಲ್ಲೂಕು ಸೂಲಿಬೆಲೆ ಹೋಬಳಿ ವ್ಯಾಪ್ತಿಗೆ ಬರುವ ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.

ಈ ಕಾರ್ಯಕ್ರಮವನ್ನು ಕುರಿತು ಸಂಸ್ಥೆಯ ನಿರ್ದೇಶಕರಾದ ಅಂಬರೀಶ ಬಿ.ಸಿ. ಮಾತನಾಡಿ, ಮೊದಲಿಗೆ ಎಲ್ಲರಿಗೂ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಷಯಗಳನ್ನು ತಿಳಿಸಿದ ಅವರು, ಮಹಿಳೆಯರು ಉತ್ತಮ ಸಮಾಜ ಕಟ್ಟುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಮಹಿಳೆಯರು ಹೆಚ್ಚು-ಹೆಚ್ಚು ಸ್ವ-ಉದ್ಯೋಗದಲ್ಲಿ ತೊಡಗಿಸಿಕೊಂಡಾಗ ಮಾತ್ರ ದೇಶದ ಆರ್ಥಿಕತೆ ಅಭಿವೃದ್ಧಿ ಹೊಂದುವುದರ ಜೊತೆಗೆ ತಮ್ಮ-ತಮ್ಮ ಕುಟುಂಬಗಳ ಆರ್ಥಿಕತೆಯನ್ನು ಆಭಿವೃದ್ಧಿಪಡಿಸಲು ಸಾಧ್ಯ ಹಾಗೂ ಸಮಾಜದಲ್ಲಿ ತಮ್ಮ ಸ್ಥಾನಮಾನ ಗುರುತಿಸಿಕೊಳ್ಳುವುದಕ್ಕೆ ನಮ್ಮ ಸಂಸ್ಥೆಯು ಹೆಚ್ಚಿನ ಸಹಾಯಕಾರಿಯಾಗಿರುತ್ತದೆ ಎಂದು ಕಿವಿಮಾತು ಹೇಳಿದರು.

ಸಂಸ್ಥೆಯಲ್ಲಿ ಯಶಸ್ವಿಯಾಗಿ ತರಬೇತಿಯನ್ನು ಪೂರ್ಣಗೊಳಿಸಿ ಸ್ವಾವಲಂಬಿ ಜೀವನ ಕಟ್ಟಿಕೊಂಡಿರುವ ಮಹಿಳೆಯರು ಹೆಚ್ಚು ಸಮಾಜದಲ್ಲಿ ಗುರುತಿಸಿಕೊಂಡಿರುವುದು ನಮ್ಮ ಸಂಸ್ಥೆಯ ಹೆಮ್ಮೆಯ ಕೊಡುಗೆಯಾಗಿದೆ ಎಂದು ತಿಳಿಸಿದರು.

ಸಂಸ್ಥೆಯಲ್ಲಿ ಅಣಬೆ ಬೇಸಾಯ ಮತ್ತು ಬ್ಯೂಟಿ ಪಾರ್ಲರ್‌ ತರಬೇತಿ ಪಡೆದು ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡಿರುವ ಸ್ವ ಉದ್ಯೋಗಿಗಳಾದ, ಕಾವ್ಯ ಮತ್ತು ಶೋಭ ರವರು ಭಾಗವಹಿಸಿ ಮಾತನಾಡಿದ ಅವರು, ಮಹಿಳೆರಿಗೆ ಸಮಾಜದಲ್ಲಿ ಅನೇಕ ಸವಾಲುಗಳು ಎದುರಾಗುತ್ತವೇ, ಅವುಗಳನ್ನು ಮೆಟ್ಟಿ ಮುನ್ನುಗಿ ನಡೆದಾಗ ಮಾತ್ರ ಯಶಸ್ವಿಯಾಗಲು ಸಾಧ್ಯ. ನಾವು ಮಾಡುವ ಕೆಲಸದಲ್ಲಿ ಶ್ರದ್ಧೆ, ಭಕ್ತಿ, ನಂಬಿಕೆ ಮತ್ತು ಚಲ ಎಂಬ ಈ ನಾಲ್ಕು ಸಾಧನಗಳಿಂದ ನಮಗೆ ಯಶಸ್ವಿ ಎಂಬ ಸಾಧನೆ ದೊರೆಯುತ್ತದೆ ಎಂದು ತಮ್ಮ ಸಾಧನೆ ಹಾದಿಯ ಅನುಭವವನ್ನು ಹಂಚಿಕೊಂಡರು.

ಇದೇ ಸಂಧರ್ಭದಲ್ಲಿ ಯಶಸ್ವಿ ಸ್ವ ಉದ್ಯೋಗಿಗಳನ್ನು ಸನ್ಮಾನಿಸಲಾಯಿತು.

ಇದೇ ಸಂಧ‌ರ್ಭದಲ್ಲಿ ಸಂಸ್ಥೆಯ ಉಪನ್ಯಾಸಕರಾದ ಮುನಿಕೃಷ್ಣ.ಎಂ, ರಾಮಕೃಷ್ಣಪ್ಪ, ಸಂಸ್ಥೆಯ ಸಿಬ್ಬಂದಿ ಸುಗುಣ.ಬಿ, ಕವನ, ನಾಗೇಶ್‌, ಮುನಿಪಟಾಲಪ್ಪ ಹಾಜರಿದ್ದರು.

Ramesh Babu

Journalist

Recent Posts

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಆಘಾತ ಎದುರಾಗಿದೆ. ಸಚಿವ ರಾಮಲಿಂಗ ರೆಡ್ಡಿ ತಮ್ಮ…

2 hours ago

ಭಾರತದ ಮಧ್ಯಮ ವರ್ಗದವರ ಸಿಹಿ-ಕಹಿಗಳು, ನಿರಾಸೆ ಮತ್ತು ಜೀವನೋತ್ಸಾಹ…..

ಭಾರತದ ಬಹಳಷ್ಟು ಮಧ್ಯಮ ವರ್ಗದ ಜನರಲ್ಲಿ ಜೀವನೋತ್ಸಾಹ ಕಡಿಮೆಯಾಗುತ್ತಿದೇಯೇ ಎಂಬ ಅನುಮಾನ ಶುರುವಾಗಿದೆ. ನಿಜಕ್ಕೂ ಬೃಹತ್ ಸಂಖ್ಯೆಯ ಮಧ್ಯಮ ವರ್ಗದವರು…

6 hours ago

ದೊಡ್ಡಬಳ್ಳಾಪುರದಲ್ಲಿ ಕಳ್ಳರ ಹಾವಳಿ: ಸರ, ಬೈಕ್‌ನಿಂದ ಹಸುಗಳವರೆಗೆ ಕಳವು – ಜನರಲ್ಲಿ ಹೆಚ್ಚಿದ ಆತಂಕ

ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…

7 hours ago

ಸಿಎಂ, ಡಿಸಿಎಂ, ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ಸಿಗಲಿದೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…

7 hours ago

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

18 hours ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

21 hours ago