ಮಹಿಳೆಯರು ಸ್ವ ಉದ್ಯೋಗದಲ್ಲಿ ಹೆಚ್ಚಾಗಿ ತೊಡಗಿಸಿಕೊಂಡು ಆರ್ಥಿಕವಾಗಿ ಸದೃಢರಾಗಬೇಕು-ಅಂಬರೀಶ ಬಿ.ಸಿ.

ಹೊಸಕೋಟೆ ತಾಲ್ಲೂಕು ಸೂಲಿಬೆಲೆ ಹೋಬಳಿ ವ್ಯಾಪ್ತಿಗೆ ಬರುವ ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.

ಈ ಕಾರ್ಯಕ್ರಮವನ್ನು ಕುರಿತು ಸಂಸ್ಥೆಯ ನಿರ್ದೇಶಕರಾದ ಅಂಬರೀಶ ಬಿ.ಸಿ. ಮಾತನಾಡಿ, ಮೊದಲಿಗೆ ಎಲ್ಲರಿಗೂ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಷಯಗಳನ್ನು ತಿಳಿಸಿದ ಅವರು, ಮಹಿಳೆಯರು ಉತ್ತಮ ಸಮಾಜ ಕಟ್ಟುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಮಹಿಳೆಯರು ಹೆಚ್ಚು-ಹೆಚ್ಚು ಸ್ವ-ಉದ್ಯೋಗದಲ್ಲಿ ತೊಡಗಿಸಿಕೊಂಡಾಗ ಮಾತ್ರ ದೇಶದ ಆರ್ಥಿಕತೆ ಅಭಿವೃದ್ಧಿ ಹೊಂದುವುದರ ಜೊತೆಗೆ ತಮ್ಮ-ತಮ್ಮ ಕುಟುಂಬಗಳ ಆರ್ಥಿಕತೆಯನ್ನು ಆಭಿವೃದ್ಧಿಪಡಿಸಲು ಸಾಧ್ಯ ಹಾಗೂ ಸಮಾಜದಲ್ಲಿ ತಮ್ಮ ಸ್ಥಾನಮಾನ ಗುರುತಿಸಿಕೊಳ್ಳುವುದಕ್ಕೆ ನಮ್ಮ ಸಂಸ್ಥೆಯು ಹೆಚ್ಚಿನ ಸಹಾಯಕಾರಿಯಾಗಿರುತ್ತದೆ ಎಂದು ಕಿವಿಮಾತು ಹೇಳಿದರು.

ಸಂಸ್ಥೆಯಲ್ಲಿ ಯಶಸ್ವಿಯಾಗಿ ತರಬೇತಿಯನ್ನು ಪೂರ್ಣಗೊಳಿಸಿ ಸ್ವಾವಲಂಬಿ ಜೀವನ ಕಟ್ಟಿಕೊಂಡಿರುವ ಮಹಿಳೆಯರು ಹೆಚ್ಚು ಸಮಾಜದಲ್ಲಿ ಗುರುತಿಸಿಕೊಂಡಿರುವುದು ನಮ್ಮ ಸಂಸ್ಥೆಯ ಹೆಮ್ಮೆಯ ಕೊಡುಗೆಯಾಗಿದೆ ಎಂದು ತಿಳಿಸಿದರು.

ಸಂಸ್ಥೆಯಲ್ಲಿ ಅಣಬೆ ಬೇಸಾಯ ಮತ್ತು ಬ್ಯೂಟಿ ಪಾರ್ಲರ್‌ ತರಬೇತಿ ಪಡೆದು ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡಿರುವ ಸ್ವ ಉದ್ಯೋಗಿಗಳಾದ, ಕಾವ್ಯ ಮತ್ತು ಶೋಭ ರವರು ಭಾಗವಹಿಸಿ ಮಾತನಾಡಿದ ಅವರು, ಮಹಿಳೆರಿಗೆ ಸಮಾಜದಲ್ಲಿ ಅನೇಕ ಸವಾಲುಗಳು ಎದುರಾಗುತ್ತವೇ, ಅವುಗಳನ್ನು ಮೆಟ್ಟಿ ಮುನ್ನುಗಿ ನಡೆದಾಗ ಮಾತ್ರ ಯಶಸ್ವಿಯಾಗಲು ಸಾಧ್ಯ. ನಾವು ಮಾಡುವ ಕೆಲಸದಲ್ಲಿ ಶ್ರದ್ಧೆ, ಭಕ್ತಿ, ನಂಬಿಕೆ ಮತ್ತು ಚಲ ಎಂಬ ಈ ನಾಲ್ಕು ಸಾಧನಗಳಿಂದ ನಮಗೆ ಯಶಸ್ವಿ ಎಂಬ ಸಾಧನೆ ದೊರೆಯುತ್ತದೆ ಎಂದು ತಮ್ಮ ಸಾಧನೆ ಹಾದಿಯ ಅನುಭವವನ್ನು ಹಂಚಿಕೊಂಡರು.

ಇದೇ ಸಂಧರ್ಭದಲ್ಲಿ ಯಶಸ್ವಿ ಸ್ವ ಉದ್ಯೋಗಿಗಳನ್ನು ಸನ್ಮಾನಿಸಲಾಯಿತು.

ಇದೇ ಸಂಧ‌ರ್ಭದಲ್ಲಿ ಸಂಸ್ಥೆಯ ಉಪನ್ಯಾಸಕರಾದ ಮುನಿಕೃಷ್ಣ.ಎಂ, ರಾಮಕೃಷ್ಣಪ್ಪ, ಸಂಸ್ಥೆಯ ಸಿಬ್ಬಂದಿ ಸುಗುಣ.ಬಿ, ಕವನ, ನಾಗೇಶ್‌, ಮುನಿಪಟಾಲಪ್ಪ ಹಾಜರಿದ್ದರು.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

4 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago