ಹೊಸಕೋಟೆ ತಾಲ್ಲೂಕು ಸೂಲಿಬೆಲೆ ಹೋಬಳಿ ವ್ಯಾಪ್ತಿಗೆ ಬರುವ ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.
ಈ ಕಾರ್ಯಕ್ರಮವನ್ನು ಕುರಿತು ಸಂಸ್ಥೆಯ ನಿರ್ದೇಶಕರಾದ ಅಂಬರೀಶ ಬಿ.ಸಿ. ಮಾತನಾಡಿ, ಮೊದಲಿಗೆ ಎಲ್ಲರಿಗೂ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಷಯಗಳನ್ನು ತಿಳಿಸಿದ ಅವರು, ಮಹಿಳೆಯರು ಉತ್ತಮ ಸಮಾಜ ಕಟ್ಟುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಮಹಿಳೆಯರು ಹೆಚ್ಚು-ಹೆಚ್ಚು ಸ್ವ-ಉದ್ಯೋಗದಲ್ಲಿ ತೊಡಗಿಸಿಕೊಂಡಾಗ ಮಾತ್ರ ದೇಶದ ಆರ್ಥಿಕತೆ ಅಭಿವೃದ್ಧಿ ಹೊಂದುವುದರ ಜೊತೆಗೆ ತಮ್ಮ-ತಮ್ಮ ಕುಟುಂಬಗಳ ಆರ್ಥಿಕತೆಯನ್ನು ಆಭಿವೃದ್ಧಿಪಡಿಸಲು ಸಾಧ್ಯ ಹಾಗೂ ಸಮಾಜದಲ್ಲಿ ತಮ್ಮ ಸ್ಥಾನಮಾನ ಗುರುತಿಸಿಕೊಳ್ಳುವುದಕ್ಕೆ ನಮ್ಮ ಸಂಸ್ಥೆಯು ಹೆಚ್ಚಿನ ಸಹಾಯಕಾರಿಯಾಗಿರುತ್ತದೆ ಎಂದು ಕಿವಿಮಾತು ಹೇಳಿದರು.
ಸಂಸ್ಥೆಯಲ್ಲಿ ಯಶಸ್ವಿಯಾಗಿ ತರಬೇತಿಯನ್ನು ಪೂರ್ಣಗೊಳಿಸಿ ಸ್ವಾವಲಂಬಿ ಜೀವನ ಕಟ್ಟಿಕೊಂಡಿರುವ ಮಹಿಳೆಯರು ಹೆಚ್ಚು ಸಮಾಜದಲ್ಲಿ ಗುರುತಿಸಿಕೊಂಡಿರುವುದು ನಮ್ಮ ಸಂಸ್ಥೆಯ ಹೆಮ್ಮೆಯ ಕೊಡುಗೆಯಾಗಿದೆ ಎಂದು ತಿಳಿಸಿದರು.
ಸಂಸ್ಥೆಯಲ್ಲಿ ಅಣಬೆ ಬೇಸಾಯ ಮತ್ತು ಬ್ಯೂಟಿ ಪಾರ್ಲರ್ ತರಬೇತಿ ಪಡೆದು ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡಿರುವ ಸ್ವ ಉದ್ಯೋಗಿಗಳಾದ, ಕಾವ್ಯ ಮತ್ತು ಶೋಭ ರವರು ಭಾಗವಹಿಸಿ ಮಾತನಾಡಿದ ಅವರು, ಮಹಿಳೆರಿಗೆ ಸಮಾಜದಲ್ಲಿ ಅನೇಕ ಸವಾಲುಗಳು ಎದುರಾಗುತ್ತವೇ, ಅವುಗಳನ್ನು ಮೆಟ್ಟಿ ಮುನ್ನುಗಿ ನಡೆದಾಗ ಮಾತ್ರ ಯಶಸ್ವಿಯಾಗಲು ಸಾಧ್ಯ. ನಾವು ಮಾಡುವ ಕೆಲಸದಲ್ಲಿ ಶ್ರದ್ಧೆ, ಭಕ್ತಿ, ನಂಬಿಕೆ ಮತ್ತು ಚಲ ಎಂಬ ಈ ನಾಲ್ಕು ಸಾಧನಗಳಿಂದ ನಮಗೆ ಯಶಸ್ವಿ ಎಂಬ ಸಾಧನೆ ದೊರೆಯುತ್ತದೆ ಎಂದು ತಮ್ಮ ಸಾಧನೆ ಹಾದಿಯ ಅನುಭವವನ್ನು ಹಂಚಿಕೊಂಡರು.
ಇದೇ ಸಂಧರ್ಭದಲ್ಲಿ ಯಶಸ್ವಿ ಸ್ವ ಉದ್ಯೋಗಿಗಳನ್ನು ಸನ್ಮಾನಿಸಲಾಯಿತು.
ಇದೇ ಸಂಧರ್ಭದಲ್ಲಿ ಸಂಸ್ಥೆಯ ಉಪನ್ಯಾಸಕರಾದ ಮುನಿಕೃಷ್ಣ.ಎಂ, ರಾಮಕೃಷ್ಣಪ್ಪ, ಸಂಸ್ಥೆಯ ಸಿಬ್ಬಂದಿ ಸುಗುಣ.ಬಿ, ಕವನ, ನಾಗೇಶ್, ಮುನಿಪಟಾಲಪ್ಪ ಹಾಜರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…