ಮಹಿಳೆಯರು ಹೈನುಗಾರಿಕೆಯಿಂದ ಸ್ವಾಭಿಮಾನ ಬದುಕು ಕಟ್ಟಿಕೊಂಡಿದ್ದಾರೆ-ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್

ಕೋಲಿಗೆರೆಯ ಹಾಲು ಉತ್ಪಾದಕ ಸಹಕಾರಿ ಸಂಘದ ಕಟ್ಟಡದ ನೂತನವಾಗಿ ನಿರ್ಮಾಣ ಮಾಡಲಾದ ಮೊದಲನೆಯ ಮಹಡಿ ಕಟ್ಟಡ ಹಾಗೂ ತರಬನಹಳ್ಳಿಯಲ್ಲಿ ಮಹಿಳಾ ಹಾಲು ಉತ್ಪಾದಕ ಸಹಕಾರಿ ಸಂಘದಡಿ ಬಮೂಲ್ ವತಿಯಿಂದ ನಿರ್ಮಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೆಎಂಎಫ್ ಮತ್ತು ಬಮೂಲ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ಲೋಕಾರ್ಪಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು ಗ್ರಾಮಾಂತರ ಭಾಗದಲ್ಲಿ ಮಹಿಳೆಯರು ಅತ್ಯಂತ ಸ್ವಾಭಿಮಾನದಿಂದ ಜೀವನ ರೂಪಿಸಿಕೊಂಡಿದ್ದಾರೆ. ಇದಕ್ಕೆ ಹೈನುಗಾರಿಕೆಯೇ ಸಾಕ್ಷಿ ಎಂದರು.

ತರಬನಹಳ್ಳಿಯಲ್ಲಿ ಮಹಿಳಾ ಎಂಪಿಸಿಎಸ್ ಲಾಭದಾಯಕವಾಗಿ ಮುನ್ನಡೆಯುತ್ತಿದ್ದು, ಇತರೆ ಹಾಲು ಉತ್ಪಾದಕ ಸಹಕಾರಿ ಸಂಘಗಳಿಗೆ ಮಾದರಿಯಾಗಿದೆ. ಮಹಿಳೆಯರು ಯಾವುದೇ ಅಂಜಿಕೆ, ಅಳುಕಿಲ್ಲದೆ ಜೀವನ ಮಾಡುವಂತ ಸಮಾಜ ನಿರ್ಮಾಣವಾಗಬೇಕಿದೆ. ಹೈನುಗಾರಿಕೆ ನಂಬಿದ ರೈತರು ಶ್ರದ್ಧೆಯಿಂದ ಮಾಡಿದರೆ ಎಂದಿಗೂ ನಷ್ಟಕ್ಕೀಡಾಗುವುದಿಲ್ಲ ಎಂದರು.

ಜಗತ್ತು ವೈಜ್ಞಾನಿಕವಾಗಿ ಎಷ್ಟೇ ಮುಂದುವರಿದರೂ ನೀರನ್ನು ಕೃತಕವಾಗಿ ಸೃಷ್ಟಿಮಾಡಲು ಸಾಧ್ಯವಿಲ್ಲ. ನೀರು ಪ್ರಕೃತಿ ಮಾತೆಯಿಂದ ಮಾತ್ರವೇ ಸೃಷ್ಟಿಸಲು ಸಾಧ್ಯ. ಹೀಗಾಗಿ ನೀರನ್ನು ಮಿತವಾಗಿ ಬಳಸಿ, ವ್ಯರ್ಥ ಮಾಡಬೇಡಿ. ಬೇಸಿಗೆ ಆರಂಭದಲ್ಲಿಯೆ ಪ್ರಾಣಿ-ಪಕ್ಷಿಗಳಿಗೆ ನೀರಿನ ಅಭಾವ ಎದುರಗುವುದರಿಂದ ಮನೆಗಳ ಬಳಿ ಸಣ್ಣ ಸಣ್ಣ ತೊಟ್ಟಿಗಳ ನಿರ್ಮಾಣಕ್ಕೆ ರೈತರಲ್ಲಿ ಮನವಿ ಮಾಡಿದರು.

ಕೋಲಿಗೆರೆ ಹಾಲು ಉತ್ಪಾದಕ ಸಹಕಾರಿ ಸಂಘದ ಮೊದಲನೇ ಮಹಡಿಗೆ ಬಮೂಲ್ ನಿಂದ ತಡಮಾಡದೆ ಅನುದಾನ ನೀಡಲಾಗಿದೆ. ಹಾಲು ಉತ್ಪಾದಕ ಸಂಘಗಳ ಬೆಳವಣಿಗೆಗಳು ಪರೋಕ್ಷವಾಗಿ ರೈತರನ್ನು ಅಭಿವೃದ್ಧಿಯ ಸಂಕೇತವಾಗಿರಲಿವೆ. ಇದು ಸಾಧ್ಯವಾಗಬೇಕಾದರೆ ರೈತರು ಎಂಪಿಸಿಎಸ್ ಗಳಲ್ಲಿ ಯಾವುದೇ ರಾಜಕೀಯ ಮಾಡದೆ ಮುನ್ನಡೆಯಬೇಕು ಎಂದು ತಿಳಿಸಿದರು.

ಇದೇ ವೇಳೆ ರೈತರು ಹಾಲಿನ ದರ ಏರಿಕೆಗೆ ಕೆಎಂಎಫ್ ನಿರ್ದೇಶಕರಿಗೆ ಮನವಿ ಮಾಡಿದರು.

Ramesh Babu

Journalist

Recent Posts

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

57 minutes ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

12 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

12 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

15 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

23 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

1 day ago