ಕೋಲಿಗೆರೆಯ ಹಾಲು ಉತ್ಪಾದಕ ಸಹಕಾರಿ ಸಂಘದ ಕಟ್ಟಡದ ನೂತನವಾಗಿ ನಿರ್ಮಾಣ ಮಾಡಲಾದ ಮೊದಲನೆಯ ಮಹಡಿ ಕಟ್ಟಡ ಹಾಗೂ ತರಬನಹಳ್ಳಿಯಲ್ಲಿ ಮಹಿಳಾ ಹಾಲು ಉತ್ಪಾದಕ ಸಹಕಾರಿ ಸಂಘದಡಿ ಬಮೂಲ್ ವತಿಯಿಂದ ನಿರ್ಮಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೆಎಂಎಫ್ ಮತ್ತು ಬಮೂಲ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ಲೋಕಾರ್ಪಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು ಗ್ರಾಮಾಂತರ ಭಾಗದಲ್ಲಿ ಮಹಿಳೆಯರು ಅತ್ಯಂತ ಸ್ವಾಭಿಮಾನದಿಂದ ಜೀವನ ರೂಪಿಸಿಕೊಂಡಿದ್ದಾರೆ. ಇದಕ್ಕೆ ಹೈನುಗಾರಿಕೆಯೇ ಸಾಕ್ಷಿ ಎಂದರು.
ತರಬನಹಳ್ಳಿಯಲ್ಲಿ ಮಹಿಳಾ ಎಂಪಿಸಿಎಸ್ ಲಾಭದಾಯಕವಾಗಿ ಮುನ್ನಡೆಯುತ್ತಿದ್ದು, ಇತರೆ ಹಾಲು ಉತ್ಪಾದಕ ಸಹಕಾರಿ ಸಂಘಗಳಿಗೆ ಮಾದರಿಯಾಗಿದೆ. ಮಹಿಳೆಯರು ಯಾವುದೇ ಅಂಜಿಕೆ, ಅಳುಕಿಲ್ಲದೆ ಜೀವನ ಮಾಡುವಂತ ಸಮಾಜ ನಿರ್ಮಾಣವಾಗಬೇಕಿದೆ. ಹೈನುಗಾರಿಕೆ ನಂಬಿದ ರೈತರು ಶ್ರದ್ಧೆಯಿಂದ ಮಾಡಿದರೆ ಎಂದಿಗೂ ನಷ್ಟಕ್ಕೀಡಾಗುವುದಿಲ್ಲ ಎಂದರು.
ಕೋಲಿಗೆರೆ ಹಾಲು ಉತ್ಪಾದಕ ಸಹಕಾರಿ ಸಂಘದ ಮೊದಲನೇ ಮಹಡಿಗೆ ಬಮೂಲ್ ನಿಂದ ತಡಮಾಡದೆ ಅನುದಾನ ನೀಡಲಾಗಿದೆ. ಹಾಲು ಉತ್ಪಾದಕ ಸಂಘಗಳ ಬೆಳವಣಿಗೆಗಳು ಪರೋಕ್ಷವಾಗಿ ರೈತರನ್ನು ಅಭಿವೃದ್ಧಿಯ ಸಂಕೇತವಾಗಿರಲಿವೆ. ಇದು ಸಾಧ್ಯವಾಗಬೇಕಾದರೆ ರೈತರು ಎಂಪಿಸಿಎಸ್ ಗಳಲ್ಲಿ ಯಾವುದೇ ರಾಜಕೀಯ ಮಾಡದೆ ಮುನ್ನಡೆಯಬೇಕು ಎಂದು ತಿಳಿಸಿದರು.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…