ಮಹಿಳೆಯರು ಹೈನುಗಾರಿಕೆಯಿಂದ ಸ್ವಾಭಿಮಾನ ಬದುಕು ಕಟ್ಟಿಕೊಂಡಿದ್ದಾರೆ-ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್

ಕೋಲಿಗೆರೆಯ ಹಾಲು ಉತ್ಪಾದಕ ಸಹಕಾರಿ ಸಂಘದ ಕಟ್ಟಡದ ನೂತನವಾಗಿ ನಿರ್ಮಾಣ ಮಾಡಲಾದ ಮೊದಲನೆಯ ಮಹಡಿ ಕಟ್ಟಡ ಹಾಗೂ ತರಬನಹಳ್ಳಿಯಲ್ಲಿ ಮಹಿಳಾ ಹಾಲು ಉತ್ಪಾದಕ ಸಹಕಾರಿ ಸಂಘದಡಿ ಬಮೂಲ್ ವತಿಯಿಂದ ನಿರ್ಮಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೆಎಂಎಫ್ ಮತ್ತು ಬಮೂಲ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ಲೋಕಾರ್ಪಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು ಗ್ರಾಮಾಂತರ ಭಾಗದಲ್ಲಿ ಮಹಿಳೆಯರು ಅತ್ಯಂತ ಸ್ವಾಭಿಮಾನದಿಂದ ಜೀವನ ರೂಪಿಸಿಕೊಂಡಿದ್ದಾರೆ. ಇದಕ್ಕೆ ಹೈನುಗಾರಿಕೆಯೇ ಸಾಕ್ಷಿ ಎಂದರು.

ತರಬನಹಳ್ಳಿಯಲ್ಲಿ ಮಹಿಳಾ ಎಂಪಿಸಿಎಸ್ ಲಾಭದಾಯಕವಾಗಿ ಮುನ್ನಡೆಯುತ್ತಿದ್ದು, ಇತರೆ ಹಾಲು ಉತ್ಪಾದಕ ಸಹಕಾರಿ ಸಂಘಗಳಿಗೆ ಮಾದರಿಯಾಗಿದೆ. ಮಹಿಳೆಯರು ಯಾವುದೇ ಅಂಜಿಕೆ, ಅಳುಕಿಲ್ಲದೆ ಜೀವನ ಮಾಡುವಂತ ಸಮಾಜ ನಿರ್ಮಾಣವಾಗಬೇಕಿದೆ. ಹೈನುಗಾರಿಕೆ ನಂಬಿದ ರೈತರು ಶ್ರದ್ಧೆಯಿಂದ ಮಾಡಿದರೆ ಎಂದಿಗೂ ನಷ್ಟಕ್ಕೀಡಾಗುವುದಿಲ್ಲ ಎಂದರು.

ಜಗತ್ತು ವೈಜ್ಞಾನಿಕವಾಗಿ ಎಷ್ಟೇ ಮುಂದುವರಿದರೂ ನೀರನ್ನು ಕೃತಕವಾಗಿ ಸೃಷ್ಟಿಮಾಡಲು ಸಾಧ್ಯವಿಲ್ಲ. ನೀರು ಪ್ರಕೃತಿ ಮಾತೆಯಿಂದ ಮಾತ್ರವೇ ಸೃಷ್ಟಿಸಲು ಸಾಧ್ಯ. ಹೀಗಾಗಿ ನೀರನ್ನು ಮಿತವಾಗಿ ಬಳಸಿ, ವ್ಯರ್ಥ ಮಾಡಬೇಡಿ. ಬೇಸಿಗೆ ಆರಂಭದಲ್ಲಿಯೆ ಪ್ರಾಣಿ-ಪಕ್ಷಿಗಳಿಗೆ ನೀರಿನ ಅಭಾವ ಎದುರಗುವುದರಿಂದ ಮನೆಗಳ ಬಳಿ ಸಣ್ಣ ಸಣ್ಣ ತೊಟ್ಟಿಗಳ ನಿರ್ಮಾಣಕ್ಕೆ ರೈತರಲ್ಲಿ ಮನವಿ ಮಾಡಿದರು.

ಕೋಲಿಗೆರೆ ಹಾಲು ಉತ್ಪಾದಕ ಸಹಕಾರಿ ಸಂಘದ ಮೊದಲನೇ ಮಹಡಿಗೆ ಬಮೂಲ್ ನಿಂದ ತಡಮಾಡದೆ ಅನುದಾನ ನೀಡಲಾಗಿದೆ. ಹಾಲು ಉತ್ಪಾದಕ ಸಂಘಗಳ ಬೆಳವಣಿಗೆಗಳು ಪರೋಕ್ಷವಾಗಿ ರೈತರನ್ನು ಅಭಿವೃದ್ಧಿಯ ಸಂಕೇತವಾಗಿರಲಿವೆ. ಇದು ಸಾಧ್ಯವಾಗಬೇಕಾದರೆ ರೈತರು ಎಂಪಿಸಿಎಸ್ ಗಳಲ್ಲಿ ಯಾವುದೇ ರಾಜಕೀಯ ಮಾಡದೆ ಮುನ್ನಡೆಯಬೇಕು ಎಂದು ತಿಳಿಸಿದರು.

ಇದೇ ವೇಳೆ ರೈತರು ಹಾಲಿನ ದರ ಏರಿಕೆಗೆ ಕೆಎಂಎಫ್ ನಿರ್ದೇಶಕರಿಗೆ ಮನವಿ ಮಾಡಿದರು.

Ramesh Babu

Journalist

Share
Published by
Ramesh Babu

Recent Posts

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

1 hour ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

14 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

14 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

15 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

22 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

23 hours ago