ಮಹಿಳೆಯರು ಹೈನುಗಾರಿಕೆಯಿಂದ ಸ್ವಾಭಿಮಾನ ಬದುಕು ಕಟ್ಟಿಕೊಂಡಿದ್ದಾರೆ-ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್

ಕೋಲಿಗೆರೆಯ ಹಾಲು ಉತ್ಪಾದಕ ಸಹಕಾರಿ ಸಂಘದ ಕಟ್ಟಡದ ನೂತನವಾಗಿ ನಿರ್ಮಾಣ ಮಾಡಲಾದ ಮೊದಲನೆಯ ಮಹಡಿ ಕಟ್ಟಡ ಹಾಗೂ ತರಬನಹಳ್ಳಿಯಲ್ಲಿ ಮಹಿಳಾ ಹಾಲು ಉತ್ಪಾದಕ ಸಹಕಾರಿ ಸಂಘದಡಿ ಬಮೂಲ್ ವತಿಯಿಂದ ನಿರ್ಮಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೆಎಂಎಫ್ ಮತ್ತು ಬಮೂಲ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ಲೋಕಾರ್ಪಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು ಗ್ರಾಮಾಂತರ ಭಾಗದಲ್ಲಿ ಮಹಿಳೆಯರು ಅತ್ಯಂತ ಸ್ವಾಭಿಮಾನದಿಂದ ಜೀವನ ರೂಪಿಸಿಕೊಂಡಿದ್ದಾರೆ. ಇದಕ್ಕೆ ಹೈನುಗಾರಿಕೆಯೇ ಸಾಕ್ಷಿ ಎಂದರು.

ತರಬನಹಳ್ಳಿಯಲ್ಲಿ ಮಹಿಳಾ ಎಂಪಿಸಿಎಸ್ ಲಾಭದಾಯಕವಾಗಿ ಮುನ್ನಡೆಯುತ್ತಿದ್ದು, ಇತರೆ ಹಾಲು ಉತ್ಪಾದಕ ಸಹಕಾರಿ ಸಂಘಗಳಿಗೆ ಮಾದರಿಯಾಗಿದೆ. ಮಹಿಳೆಯರು ಯಾವುದೇ ಅಂಜಿಕೆ, ಅಳುಕಿಲ್ಲದೆ ಜೀವನ ಮಾಡುವಂತ ಸಮಾಜ ನಿರ್ಮಾಣವಾಗಬೇಕಿದೆ. ಹೈನುಗಾರಿಕೆ ನಂಬಿದ ರೈತರು ಶ್ರದ್ಧೆಯಿಂದ ಮಾಡಿದರೆ ಎಂದಿಗೂ ನಷ್ಟಕ್ಕೀಡಾಗುವುದಿಲ್ಲ ಎಂದರು.

ಜಗತ್ತು ವೈಜ್ಞಾನಿಕವಾಗಿ ಎಷ್ಟೇ ಮುಂದುವರಿದರೂ ನೀರನ್ನು ಕೃತಕವಾಗಿ ಸೃಷ್ಟಿಮಾಡಲು ಸಾಧ್ಯವಿಲ್ಲ. ನೀರು ಪ್ರಕೃತಿ ಮಾತೆಯಿಂದ ಮಾತ್ರವೇ ಸೃಷ್ಟಿಸಲು ಸಾಧ್ಯ. ಹೀಗಾಗಿ ನೀರನ್ನು ಮಿತವಾಗಿ ಬಳಸಿ, ವ್ಯರ್ಥ ಮಾಡಬೇಡಿ. ಬೇಸಿಗೆ ಆರಂಭದಲ್ಲಿಯೆ ಪ್ರಾಣಿ-ಪಕ್ಷಿಗಳಿಗೆ ನೀರಿನ ಅಭಾವ ಎದುರಗುವುದರಿಂದ ಮನೆಗಳ ಬಳಿ ಸಣ್ಣ ಸಣ್ಣ ತೊಟ್ಟಿಗಳ ನಿರ್ಮಾಣಕ್ಕೆ ರೈತರಲ್ಲಿ ಮನವಿ ಮಾಡಿದರು.

ಕೋಲಿಗೆರೆ ಹಾಲು ಉತ್ಪಾದಕ ಸಹಕಾರಿ ಸಂಘದ ಮೊದಲನೇ ಮಹಡಿಗೆ ಬಮೂಲ್ ನಿಂದ ತಡಮಾಡದೆ ಅನುದಾನ ನೀಡಲಾಗಿದೆ. ಹಾಲು ಉತ್ಪಾದಕ ಸಂಘಗಳ ಬೆಳವಣಿಗೆಗಳು ಪರೋಕ್ಷವಾಗಿ ರೈತರನ್ನು ಅಭಿವೃದ್ಧಿಯ ಸಂಕೇತವಾಗಿರಲಿವೆ. ಇದು ಸಾಧ್ಯವಾಗಬೇಕಾದರೆ ರೈತರು ಎಂಪಿಸಿಎಸ್ ಗಳಲ್ಲಿ ಯಾವುದೇ ರಾಜಕೀಯ ಮಾಡದೆ ಮುನ್ನಡೆಯಬೇಕು ಎಂದು ತಿಳಿಸಿದರು.

ಇದೇ ವೇಳೆ ರೈತರು ಹಾಲಿನ ದರ ಏರಿಕೆಗೆ ಕೆಎಂಎಫ್ ನಿರ್ದೇಶಕರಿಗೆ ಮನವಿ ಮಾಡಿದರು.

Ramesh Babu

Journalist

Share
Published by
Ramesh Babu

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

23 minutes ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

5 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

5 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

13 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago